Gruha Lakshmi New Update: ರಾಜ್ಯ ಸರ್ಕಾರದ ಬಹುದೊಡ್ಡ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ಹಣ ಕಳೆದ ಎರಡು ತಿಂಗಳಿಂದ ಯಾವುದೇ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಹೌದು ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಕಾರಣ ಸಾಕಷ್ಟು ಮಹಿಳೆಯರು ಬೇಸರವನ್ನು ಕೂಡ ಹೊರಹಾಕಿದ್ದಾರೆ. ಇದರ ನಡುವೆ ರಾಜ್ಯದ ಮಹಿಳೆಯರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಹೌದು ಬಾರಿ ಇರುವ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈಗ ರಾಜ್ಯ ಸರ್ಕಾರ ಸರ್ಕಾರ ಬಹುದೊಡ್ಡ ಆದೇಶ ಹೊರಡಿಸುವುದರ ಮೂಲಕ ರಾಜ್ಯದ ಎಲ್ಲ ಮಹಿಳೆಯರಿಗೆ ಗುಡ್ ನ್ಯೂಸ್ ನೀಡಿದೆ.
ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಬಂತು ಬಿಗ್ ಅಪ್ಡೇಟ್
ಹೌದು, ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ಅಪ್ಡೇಟ್ ಬಿಡುಗಡೆ ಮಾಡಿದೆ. ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗದ ಕಾರಣ ಸಾಕಷ್ಟು ಮಹಿಳೆಯರು ಗೃಹಲಕ್ಷ್ಮಿ ಯೋಜನೆಯ ಹಣ ಇನ್ನುಮುಂದೆ ಖಾತೆಗೆ ಬರುವುದಿಲ್ಲ ಅನ್ನುವ ಅನುಮಾನ ಹೊರಹಾಕಿದ್ದರು. ಸದ್ಯ ರಾಜ್ಯ ಮಹಿಳೆಯರ ಎಲ್ಲಾ ಅನುಮಾನಗಳಿಗೆ ಈಗ ಸಿದ್ದರಾಮಯ್ಯ ಅವರು ತೆರೆ ಎಳೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಎರಡು ತಿಂಗಳ ಹಣ ಈಗ ಬಿಡುಗಡೆ ಮಾಡಲಾಗಿದೆ ಮತ್ತು ಈ ಜಮಾ ಮಾಡುವ ಕೆಲಸ ಕೂಡ ಮಾಡಲಾಗುತ್ತದೆ.
ಮಹಿಳೆಯರ ಖಾತೆಗೆ ನೇರವಾಗಿ 4000 ರೂ ಜಮಾ
ಹೌದು, ರಾಜ್ಯ ಸರ್ಕಾರ ನೀಡಿರುವ ಮಾಹಿತಿಯ ಪ್ರಕಾರ ಮಹಿಳೆಯರ ಖಾತೆಗೆ ನೇರವಾಗಿ 4000 ರೂ, ಅಂದರೆ ಬಾಕಿ ಇರುವ ಎರಡು ತಿಂಗಳ ಹಣ ಜಮಾ ಮಾಡಲು ಈಗ ರಾಜ್ಯ ಸರ್ಕಾರ ತೀರ್ಮಾನ ಮಾಡಿದೆ. ಈ ಕುರಿತಂತೆ ಆದೇಶ ಹೊರಡಿಸಿರುವ ರಾಜ್ಯ ಸರ್ಕಾರ, ಜನವರಿ ಮತ್ತು ಫೆಬ್ರವರಿ ತಿಂಗಳ ಹಣವನ್ನು ಈಗ DBT ಕರ್ನಾಟಕ (DBT Karanataka) ಮೂಲಕ ಬಿಡುಗಡೆ ಮಾಡಲಾಗಿದೆ ಮತ್ತು ಈ ಹಣ ಇನ್ನೇನು ಕೆಲವೇ ದಿನಗಳಲ್ಲಿ ಎಲ್ಲಾ ಮಹಿಳೆಯರ ಖಾತೆಗೆ ಜಮಾ ಆಗಲಿದೆ. ಕೆಲವು ತಾಂತ್ರಿಕ ದೋಷಗಳ ಕಾರಣ ಎರಡು ತಿಂಗಳಿಂದ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮಹಿಳೆಯರ ಖಾತೆಗೆ ಜಮಾ ಮಾಡಲು ಸಾಧ್ಯವಾಗಿರಲಿಲ್ಲ, ಆದರೆ ಈಗ ಹಣ ಬಿಡುಗಡೆ ಮಾಡಲಾಗಿದೆ ಮತ್ತು ಮಹಿಳೆಯರ ಖಾತೆಗೆ ತಿಂಗಳ ಅಂತ್ಯದ ಒಳಗಾಗಿ 4000 ರೂ ಜಮಾ ಆಗಲಿದೆ.
ಗೃಹಲಕ್ಷ್ಮಿ ಯೋಜನೆಯಲ್ಲಿ ದೊಡ್ಡ ಬದಲಾವಣೆ
ಸದ್ಯ ರಾಜ್ಯ ಸರ್ಕಾರ ಈಗ ಗೃಹಲಕ್ಷ್ಮಿ ಯೋಜನೆಯಲ್ಲಿ ಮೇಜರ್ ಸರ್ಜರಿ ಮಾಡಿದೆ ಎಂದು ಹೇಳಬಹುದು. ಹೌದು, ಯೋಜನೆಯಲ್ಲಿ ಬದಲಾವಣೆ ಮಾಡಿರುವ ರಾಜ್ಯ ಸರ್ಕಾರ ಮುಂದಿನ ದಿನಗಳಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ (Akka Co- Operative Society)ಮೂಲಕ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಮಾಡಲು ತೀರ್ಮಾನವನ್ನು ಮಾಡಿದೆ.
ಮಹಿಳೆಯರ ಖಾತೆಗೆ ಜಮಾ ಆಗುವ ಗೃಹಲಕ್ಷ್ಮಿ ಯೋಜನೆಯಲ್ಲಿ ಯಾವುದೇ ಲೋಪದೋಷ ಮತ್ತು ಸಮಯ ವ್ಯರ್ಥ ಆಗಬಾರದು ಅನ್ನುವ ಉದ್ದೇಶದಿಂದ ರಾಜ್ಯ ಸರ್ಕಾರ ಮಹಿಳೆಯರ ಖಾತೆಗೆ ಜಮಾ ಆಗುವ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಮುಂದಿನ ದಿನಗಳಲ್ಲಿ ಅಕ್ಕ ಕೋ-ಆಪರೇಟಿವ್ ಸೊಸೈಟಿ ಮೂಲಕ ಮಹಿಳೆಯರ ಖಾತೆಗೆ ಜಮಾ ಮಾಡಲು ತೀರ್ಮಾನವನ್ನು ಮಾಡಿದೆ.
ಮಹಿಳೆಯರು ತಕ್ಷಣ ಈ ಕೆಲಸ ಮುಗಿಸಿಕೊಳ್ಳಿ
ರಾಜ್ಯ ಸರ್ಕಾರ ಈಗ ಇನ್ನೊಂದು ಆದೇಶ ಹೊರಡಿಸಿದ್ದು, ಯಾವ ಮಹಿಳೆಯರು ತಮ್ಮ ಖಾತೆಗೆ ಇನ್ನೂ ಕೂಡ ಆಧಾರ್ ಸಂಖ್ಯೆ ಅಪ್ಡೇಟ್, ಪಾನ್ ಸಂಖ್ಯೆ ಅಪ್ಡೇಟ್, ಮೊಬೈಲ್ ಸಂಖ್ಯೆ ಅಪ್ಡೇಟ್, NPCI ಮ್ಯಾಪಿಂಗ್ ಮತ್ತು KYC ಅಪ್ಡೇಟ್ ಮಾಡಿಸಿಕೊಂಡಿಲ್ಲವೋ ಅಂತಹ ಮಹಿಳೆಯರು ತಕ್ಷಣ ಈ ಕೆಲಸ ಮುಗಿಸಿಕೊಳ್ಳಬೇಕು, ಇಲ್ಲವಾದರೆ ಮುಂದಿನ ದಿನಗಳಲ್ಲಿ ಅಂತಹ ಮಹಿಳೆಯರ ಗೃಹಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ ಎಂದು ಎಚ್ಚರಿಕೆ ನೀಡಿದೆ.