7th Pay Salary: ಸರ್ಕಾರೀ ನೌಕರರಿಗೆ ಬಂಪರ್ ಗುಡ್ ನ್ಯೂಸ್, 7 ನೇ ವೇತನಕ್ಕೆ ಗ್ರೀನ್ ಸಿಗ್ನಲ್

ನೌಕರರ 7 ನೇ ವೇತನ ಆಯೋಗ ರಚನೆಯ ಕುರಿತು ಇಲ್ಲಿದೆ ಡಿಟೈಲ್ಸ್

7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ ಶೀಘ್ರದಲ್ಲೇ 7 ನೇ ವೇತನ ಪರಿಷ್ಕರಣೆ ಘೋಷಿಸಲಾಗುವುದು ಎನ್ನುವ ಬಗ್ಗೆ ಮಾಹಿತಿ ನೀಡಿತ್ತು. ಆದರೆ ಈವರೆಗೆ ಸರ್ಕಾರ 7 ನೇ ವೇತನ ಪರಿಷ್ಕರಣೆಯ ಬಗ್ಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ.

ರಾಜ್ಯದ ಮುಖ್ಯಮಂತ್ರಿ ಅವರ ಬಳಿ ಸಾಕಷ್ಟು ಬಾರಿ ನೌಕರರು ಮನವಿ ಸಲ್ಲಿಸುತ್ತಿದ್ದಾರೆ. ಸದ್ಯ 2024 ರ ಲೋಕಸಭಾ ಚುವಾನ್ ಮುಗಿದರು ಕೂಡ 7 ನೇ ವೇತನ ಬಗ್ಗೆ ಘೋಷಣೆ ಆಗಿಲ್ಲ ಎನ್ನುವ ಬಗ್ಗೆ ನೌಕರರು ಚಿಂತಿಸುತ್ತಿದ್ದಾರೆ. ಸದ್ಯ 7 ನೇ ವೇತನದ ಚಿಂತೆಯಲ್ಲಿರುವ ಸರ್ಕಾರೀ ನೌಕರರಿಗೆ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಹೊರಡಿಸಿದ್ದಾರೆ.

7th pay commission update
Image Credit: Original Source

ಸರ್ಕಾರೀ ನೌಕರರಿಗೆ ಬಿಗ್ ಅಪ್ಡೇಟ್
ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು ಈಡೇರಿಸುವುದಾಗಿ ಕಾಂಗ್ರೆಸ್ ಪಕ್ಷದ ಮುಖಂಡರು ಭರವಸೆ ನೀಡಿದ್ದರು. ಆದರೆ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದು 1 ವರ್ಷ ಕಳೆದರೂ 7ನೇ ವೇತನ ಆಯೋಗದ ಭರವಸೆ ಈಡೇರಿಲ್ಲ. ಇದೇ ವೇಳೆ ಸರ್ಕಾರಿ ನೌಕರರು ಸಿಎಂ ಸಿದ್ದರಾಮಯ್ಯ ಅವರ ಬಳಿ ಮತ್ತೊಮ್ಮೆ ಮನವಿ ಸಲ್ಲಿಸುತ್ತಿದ್ದಾರೆ. ಈ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಅವರು ಇದೀಗ ನೌಕರರ 7 ನೇ ವೇತನ ಆಯೋಗ ರಚನೆಯ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.

ನೌಕರರ 7 ನೇ ವೇತನ ಆಯೋಗ ರಚನೆಯ ಕುರಿತು ಇಲ್ಲಿದೆ ಡಿಟೈಲ್ಸ್
ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ನೇತೃತ್ವದ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಆಯೋಗದ ವರದಿ ಸಲ್ಲಿಕೆಯಾಗಿ ಎರಡು ತಿಂಗಳು ಕಳೆದರೂ ಶಿಫಾರಸುಗಳು ಜಾರಿಯಾಗಿಲ್ಲ. ಇದರಿಂದ ನೌಕರರ ಬದುಕು ದುಸ್ತರವಾಗಿದ್ದು, ಆದಷ್ಟು ಬೇಗ ವರದಿ ಜಾರಿಗೊಳಿಸಬೇಕು. ನೂತನ ಪಿಂಚಣಿ ಯೋಜನೆ ರದ್ದುಪಡಿಸಿ ಹಳೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂದು ಮನವಿ ಮಾಡಿದ್ದಾರೆ.

7th Pay Commission Latest Update
Image Credit: Informal News

ಸದ್ಯ ಈ ಮನವಿಗೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು, ನೌಕರರ ಬೇಡಿಕೆಗೆ ಸಿಎಂ ಸಿದ್ದರಾಮಯ್ಯ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ನಮ್ಮ ಸರ್ಕಾರ ಸರ್ಕಾರಿ ನೌಕರರ ಪರವಾಗಿದೆ. 7ನೇ ವೇತನ ಆಯೋಗದ ವರದಿ ಜಾರಿ ವಿಚಾರ ಈಗಾಗಲೇ ಸಚಿವ ಸಂಪುಟದಲ್ಲಿ ಪ್ರಸ್ತಾಪವಾಗಿದ್ದು, ನಿಯೋಗಕ್ಕೆ ಸ್ಪಷ್ಟ ಭರವಸೆ ನೀಡಿದ್ದಾರೆ. ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ವೇತನ ಭತ್ಯೆಗಳನ್ನು ಚರ್ಚಿಸಿ ಪರಿಷ್ಕರಿಸಲು ನಿಯೋಗಕ್ಕೆ ಭರವಸೆಯನ್ನು ನೀಡಿದ್ದಾರೆ. 7 ನೇ ವೇತನ ಆಯೋಗ ಶಿಫಾರಸ್ಸಿನಂತೆ ರಾಜ್ಯ ಸರ್ಕಾರೀ ನೌಕರರಿಗೆ ಅಂತಿಮವಾಗಿ ಶೇ. 8 ರಿಂದ 8 .5 ರಷ್ಟು ವೇತನ ಹೆಚ್ಚಳ ನಿರೀಕ್ಷಿಸಲಾಗಿದ್ದು, ಒಟ್ಟಾರೆ ಏರಿಕೆ ಮೂಲವೇತನದ ಶೇ. 25 ರಿಂದ 25 .5 ರಷ್ಟು ತಲುಪುವ ಸಾಧ್ಯತೆ ಇದೆ ಎಂದು ಹೇಳಿದ್ದಾರೆ.

Join Nadunudi News WhatsApp Group

State Govt Employees
Image Credit: India TV News

Join Nadunudi News WhatsApp Group