Free Bore Well: ಸ್ವಂತ ಜಮೀನು ಹೊಂದಿರುವ ರೈತರಿಗೆ ಉಚಿತ ಬೋರ್ ವೆಲ್ ಘೋಷಣೆ, ಗಂಗಾ ಕಲ್ಯಾಣ ಯೋಜನೆಗೆ ಚಾಲನೆ
ರಾಜ್ಯದ ರೈತರಿಗಾಗಿ Ganga Kalyana ಯೋಜನೆ ಜಾರಿ.
Ganga Kalyana Scheme For Farmers: ರೈತರ ಅಭಿವೃದ್ದಿಗಾಗಿ ಸರ್ಕಾರ ವಿವಿಧ ಕ್ರಮ ಕೈಗೊಳ್ಳುತ್ತಿದೆ. ರೈತರಿಗೆ ತಮ್ಮ ಕೃಷಿಯಲ್ಲಿ ಯಾವುದೇ ತೊಂದರೆ ಆಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ವಿವಿಧ ಸೌಲಭ್ಯವನ್ನು ಒದಗಿಸುತ್ತ ರೈತರ ಕೃಷಿಯನ್ನು ಅಭಿವೃದ್ಧಿಗಳಿಸುವತ್ತ ಗಮನ ಹರಿಸುತ್ತಿದೆ.
ಸಾಮಾನ್ಯವಾಗಿ ಕೃಷಿಗೆ ಮುಖ್ಯವಾಗಿ ಬೇಕಾಗಿರುವುದು ನೀರು. ಈ ಬಾರಿಯಂತೂ ಮಳೆಯ ಅಭಾವದಿಂದ ಸಾಕಷ್ಟು ರೈತರು ತಮ್ಮ ಬೆಳೆಯನ್ನು ಕಳೆದುಕೊಂಡಿದ್ದಾರೆ. ಈ ಬೆಲೆ ನಷ್ಟಕ್ಕೆ ಸರ್ಕಾರ ಬರ ಪರಿಹಾರ ಕೂಡ ಘೋಷಿಸಿದೆ. ಇನ್ನುಮುಂದೆ ನೀರಿನ ಸಮಸ್ಯೆಯಿಂದ ರೈತರ ಕೃಷಿ ಹಾಳಾಗಬಾರದು ಎನ್ನುವ ಉದ್ದೇಶದಿಂದ ಸರ್ಕಾರ ಇದೀಗ ಹೊಸ ಯೋಜನೆಯನ್ನು ಜಾರಿಗೊಳಿಸುವತ್ತ ಗಮನಹರಿಸುತ್ತಿದೆ.
ರಾಜ್ಯದ ರೈತರಿಗಾಗಿ Ganga Kalyana ಯೋಜನೆ ಜಾರಿ
ಮಳೆ ಹಾನಿಯಿಂದಾಗಿ ಕಂಗಾಲಾಗಿರುವ ರೈತರಿಗಾಗಿ ರಾಜ್ಯ ಸರ್ಕಾರ Ganga Kalyana Scheme ಅನ್ನು ಪರಿಚಯಿಸಿದೆ. ಈ ಯೋಜನೆಯಡಿ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಉಚಿತ ಬೋರ್ ವೆಲ್ (Free Borewell) ಕೊರೆಸಲು ಸಹಾಯಧನ ನೀಡಲು ಸರ್ಕಾರ ನಿರ್ಧರಿಸಿದೆ. ಈ ಯೋಜನೆಯಡಿ ಅರ್ಹರಿಗೆ ಅರ್ಜಿ ಸಲ್ಲಿಸಲು ಸರ್ಕಾರ ಅವಕಾಶ ನೀಡಿದೆ.
ರಾಜ್ಯ ಸರ್ಕಾರದ Ganga Kalyana Scheme ಅಡಿಯಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರು ಅಂದರೆ 1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವವರು ಈ ಯೋಜನೆಯ್ದಿ ಒಟ್ಟು 1 .5 ಲಕ್ಷ ರೂಗಳಿಂದ 3 .50 ಲಕ್ಷ ರೂ. ಸಹಾಯಧನವನ್ನು ಸರ್ಕಾರದಿಂದ ಪಡೆಯಬಹುದು. ಬಾಕಿ 50 ಸಾವಿರವನ್ನು ಶೇ. 4 ರ ಬಡ್ಡಿಯಂತೆ ತೀರಿಸಬೇಕಾಗುತ್ತದೆ. ಇದೀಗ ನಾವು ಈ ಯೋಜನೆಯ ಅರ್ಜಿ ಸಲ್ಲಿಕೆ ಹೇಗೆ..? ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುವು..? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
ಅರ್ಜಿ ಸಲ್ಲಿಕೆಗೆ ಯಾರು ಅರ್ಹರು..?
•ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡದವರು ಯೋಜನೆಗೆ ಅರ್ಜಿ ಸಲ್ಲಿಸಬಹುದು.
•ಇನ್ನು ಗ್ರಾಮೀಣ ಪ್ರದೇಶದಲ್ಲಿ 1 .5 ಲಕ್ಷ ರೂ. ನಗರ ಪ್ರದೇಶದಲ್ಲಿ 2 ಲಕ್ಷ ಆದಾಯ ಮಿತಿಯನ್ನು ಮೀರಿರಬಾರದು.
•ಅರ್ಜಿದಾರರ ವಯಸ್ಸು ಕನಿಷ್ಠ 18 ರಿಂದ 55 ವರ್ಷಗಳ ಮಿತಿಯಲ್ಲಿರಬೇಕು.
•ಗ್ರಾಮ ಒನ್, ಬೆಂಗಳೂರು ಒನ್, ಅಟಲ್ ಜನಸ್ನೇಹಿ ಸೇವಾ ಕೇಂದ್ರ ಅಥವಾ ಸೇವಾಸಿಂಧು ಪೋರ್ಟಲ್ ನ ಮೂಲಕ December 15 , 2023 ರೊಳಗೆ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆಗೆ ಈ ದಾಖಲೆಗಳು ಅಗತ್ಯ
•ಸಣ್ಣ ಹಿಡುವಳಿದಾರರ ಪ್ರಮಾಣಪತ್ರ
•ಆದಾಯ ಹಾಗೂ ಜಾತಿ ಪ್ರಮಾಣ ಪತ್ರ
•ಇತ್ತೀಚಿನ ಪಹಣಿ
•ಕುಟುಂಬವದರ ಪಡಿತರ ಚೀಟಿ
•ಬ್ಯಾಂಕ್ ಪಾಸ್ ಬುಕ್
•ಆಧಾರ್ ಕಾರ್ಡ್
•ಗಂಗಾ ಕಲ್ಯಾಣ ಯೋಜನೆಗೆ ನೀವು https://kmdc.karnataka.gov.in/ ಅಧಿಕೃತ ವೆಬ್ ಸೈಟ್ ನ ಮೂಲಕ ಅರ್ಜಿ ಸಲ್ಲಿಸಬಹುದು.