Congress Guarantee: ಯಾಕೆ ಸ್ಥಗಿತವಾಗುತ್ತೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು…? ಇಲ್ಲಿದೆ ನೋಡಿ ಅಸಲಿ ಕಾರಣ.
ಯಾಕೆ ಸ್ಥಗಿತವಾಗುತ್ತೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು...?
Congress Guarantee Close Latest Update: ಈ ಬಾರಿ ಕೂಡ ಕೇಂದ್ರದಲ್ಲಿ ಅಧಿಕಾರವನ್ನು ಪಡೆಯುವ ಅವಕಾಶವನ್ನು ಕಾಂಗ್ರೆಸ್ ಕಳೆದುಕೊಂಡಿದೆ. ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಉಚಿತ ಗ್ಯಾರಂಟಿಯನ್ನು ನೀಡುತ್ತಿದ್ದರು ಕೂಡ ಕರ್ನಾಟಕದಲ್ಲಿ ಕಾಂಗೆಸ್ಸ್ ಗೆ ಗೆಲುವು ಸಾಧಿಸಲು ಸಾಧ್ಯವಾಗಲಿಲ್ಲ.
ಈ ಕಾರಣಕ್ಕೆ ಕಾಂಗ್ರೆಸ್ ರಾಜ್ಯದಲ್ಲಿ ಉಚಿತ ಗ್ಯಾರಂಟಿಗಳನ್ನು ಬಂದ್ ಮಾಡುತ್ತಿದೆ ಎನ್ನುವ ಬಗ್ಗೆ ಸದ್ಯ ಚರ್ಚೆ ನಡೆಯುತ್ತಿದೆ. ರಾಜ್ಯದಲ್ಲಿ ಉಚಿತ ಗ್ಯಾರಂಟಿಯನ್ನು ಬಂದ್ ಮಾಡುವ ಬಗ್ಗೆ ಸುದ್ದಿ ವ್ಯಾಪಕವಾಗಿ ಹರಡುತ್ತಿದೆ. ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳ ಸ್ಥಗಿತದ ಬಗ್ಗೆ ಕಾಂಗ್ರೆಸ್ ಸಚಿವರು ಒಂದೊಂದು ರೀತಿಯಲ್ಲಿ ಮಾಹಿತಿ ನೀಡುತ್ತಿದ್ದಾರೆ. ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತಗೊಳಿಸುವ ಬಗ್ಗೆ ಚರ್ಚೆ ಯಾವ ಮಟ್ಟಿಗೆ ನಡೆಯುತ್ತಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
![Congress Guarantee Close](https://nadunudi.in/wp-content/uploads/2024/06/Congress-Guarantee-Close-1.png)
ಯಾಕೆ ಸ್ಥಗಿತವಾಗುತ್ತೆ ಕಾಂಗ್ರೆಸ್ ಗ್ಯಾರೆಂಟಿ ಯೋಜನೆಗಳು…?
ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಸಾಧ್ಯವಾಗದ ಕೆಲ ಸಚಿವರು, ಗ್ಯಾರಂಟಿ ಯೋಜನೆಗಳು ಇದಕ್ಕೆ ಫಲ ನೀಡಲಿಲ್ಲ ಎಂಬ ಅಚ್ಚರಿಯ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅಲ್ಲದೆ ಲೋಕಸಭೆ ಚುನಾವಣೆ ಫಲಿತಾಂಶದ ನಂತರ ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಮುಚ್ಚಲಾಗುವುದು ಎಂದು ವಿರೋಧ ಪಕ್ಷದ ನಾಯಕರು ಹೇಳುತ್ತಿದ್ದರು. ಈಗ ಕಾಂಗ್ರೆಸ್ ನಾಯಕರ ಈ ಹೇಳಿಕೆಗಳು ಗ್ಯಾರಂಟಿ ಯೋಜನೆಗಳು ಮುಚ್ಚಿಹೋಗುವ ಅನುಮಾನವನ್ನು ಹುಟ್ಟುಹಾಕುತ್ತಿವೆ. ಲೋಕಸಭೆ ಚುನಾವಣೆಗೆ ನಾವು ನೀಡಿದ ಐದು ಗ್ಯಾರಂಟಿ ಯೋಜನೆಗಳು ಕೈಹಿಡಿಯಲಿಲ್ಲ.
ಕಡಿಮೆ ಕ್ಷೇತ್ರಗಳಲ್ಲಿ ಗೆಲ್ಲಿಸಿರುವ ಜನರಿಗೆ ಗ್ಯಾರಂಟಿ ಯೋಜನೆಗಳು ಅಗತ್ಯವಿಲ್ಲ ಎಂದು ಜನರು ನಿರ್ಧರಿಸಿದ್ದಾರೆ ಎಂದು ಮಾಗಡಿ ಶಾಸಕ ಬಾಲಕೃಷ್ಣ ಹೇಳಿದ್ದಾರೆ. ಸಚಿವರ ಈ ಹೇಳಿಕೆಯು ರಾಜ್ಯದಲ್ಲಿ ಉಚಿತ ಗ್ಯಾರಂಟಿ ಬಂದ್ ಆಗುವ ಭೀತಿಯನ್ನು ಹೆಚ್ಚಿಸಿದೆ. ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆಗಳು ಬೇಡವಾಗಿರಬಹುದು. ಅದಕ್ಕಾಗಿಯೇ ಕಾಂಗ್ರೆಸ್ ವಿರುದ್ಧ ಮತ ಹಾಕಿದ್ದಾರೆ.. ಸರ್ಕಾರಕ್ಕೆ ಹೊರೆಯಾಗುವ ಗ್ಯಾರಂಟಿ ಯಾಕೆ ಬೇಕು ಎಂಬ ಅಭಿಪ್ರಾಯ ಕಾಂಗ್ರೆಸ್ ನ ಕೆಲ ಶಾಸಕರು ವ್ಯಕ್ತಪಡಿಸುತ್ತಿದ್ದಾರೆ.
ಸದ್ಯ ರಾಜ್ಯದೆಲ್ಲೆಡೆ ಗ್ಯಾರಂಟಿ ಯೋಜನೆಗಳು ಬಂದ್ ಆಗುವ ಬಗ್ಗೆ ಒಂದೊಂದು ರೀತಿಯಲ್ಲಿ ಮಾಹಿತಿ ಕೇಳಿಬರುತ್ತಿದೆ. ಆದಾಗ್ಯೂ, ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉಚಿತ ಗ್ಯಾರಂಟಿಗಳನು ನಿಲ್ಲಿಸುವುದಿಲ್ಲ ಎನ್ನುವ ಅಧಿಕೃತ ಹೇಳಿಕೆ ನೀಡಿದ್ದಾರೆ. ಆದರೂ ಉಚಿತ ಗ್ಯಾರಂಟಿ ಬಂದ್ ಆಗುವ ಬಗ್ಗೆ ನಡೆಯುತ್ತಿರುವ ಚರ್ಚೆ ನಿಲ್ಲುತ್ತಿಲ್ಲ. ರಾಜ್ಯದಲ್ಲಿ ಉಚಿತ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿರುವ ಬಗ್ಗೆ ಸಿದ್ದರಾಮಯ್ಯ ಅವರೂ ಮತ್ತೊಮ್ಮೆ ಯೋಚಿಸಬೇಕು ಎಂದು ಕೆಲವರು ಮನವಿ ಮಾಡಿಕೊಳ್ಳುತ್ತಿದ್ದಾರೆ.
![Congress Guarantee Close Latest Update](https://nadunudi.in/wp-content/uploads/2024/06/Congress-Guarantee-Close-Latest-Update.png)