Lok Sabha Election: ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲುತ್ತಾರೆ, ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು.
ಲೋಕಸಭಾ ಚುನಾವಣೆಯಲ್ಲಿ ಯಾರು ಗೆಲ್ಲಬಹುದು ಅನ್ನುವುದರ ಬಗ್ಗೆ ಕೊಡಿ ಮಠದ ಸ್ವಾಮಿಗಳು ಭವಿಷ್ಯ ನುಡಿದಿದ್ದಾರೆ. vvv
Kodi Mutt Swamiji Lok Sabha Election: ಭವಿಷ್ಯ ಹೇಳುವುದರಲ್ಲಿ ಪ್ರಖ್ಯಾತಿ ಪಡೆದಿರುವ ಕೊಡಿ ಮಠದ ಶಿವಯೋಗಿ ಶಿವಾನಂದ ರಾಜೇಂದ್ರ (Shivayogi Shivananda Rajendra) ಸ್ವಾಮೀಜಿಯವರು ಇತ್ತೀಚಿಗೆ ರಾಜಕೀಯದ ಕುರಿತು ಒಂದಿಷ್ಟು ಅಚ್ಚರಿಯ ಹೇಳಿಕೆಯನ್ನು ನೀಡಿದ್ದಾರೆ. ಈ ಹಿಂದೆ ಸ್ವಾಮೀಜಿಯವರು ವಿಧಾನಸಭಾ ಚುನಾವಣೆಯ ಕುರಿತು ಮಹತ್ವದ ಭವಿಷ್ಯವನ್ನು ನುಡಿದಿದ್ದರು.
ವಿಧಾನಸಭಾ ಚುನಾವಣೆಯಲ್ಲಿ ಯಾವ ಪಕ್ಷ ಅಧಿಕಾರವನ್ನು ಪಡೆಯುತ್ತದೆ ಎನ್ನುವ ಬಗ್ಗೆ ಸ್ವಾಮೀಜಿಯವರು ಭವಿಷ್ಯವಾಣಿ ನುಡಿದಿದ್ದರು. ಇದೀಗ ಶಿವಯೋಗಿ ಶಿವಾನಂದ ರಾಜೇಂದ್ರ ಸ್ವಾಮೀಜಿಯವರು ಮುಂದಿನ ಲೋಕಸಭಾ ಚುನಾವಣೆಯ ಕುರಿತು ಅಚ್ಚರಿಯ ಭವಿಷ್ಯವನ್ನು ನುಡಿದಿದ್ದಾರೆ.
![Another prediction was made by Mr. Kodi, Mr.'s prediction about the Lok Sabha elections](https://nadunudi.in/wp-content/uploads/2023/07/kodi-mutt-swamiji-about-lokasabha-elections.png)
ಲೋಕಸಭಾ ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಕೊಡಿ ಮಠದ ಶ್ರೀಗಳು
ಇನ್ನು ವಿಧಾನಸಭಾ ಚುನಾವಣೆ ಮುಗಿದು ಇದೀಗ ಲೋಕಸಭಾ ಚುನಾವಣೆಗೆ ತಯಾರಿ ನಡೆಸಲಾಗುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರವನ್ನು ಪಡೆದುಕೊಂಡು, ಲೋಕಸಭಾ ಚುನಾವಣೆಯಲ್ಲಿಯವ ಸರ್ಕಾರ ಅಧಿಕಾರಕ್ಕೆ ಬರಲಿದೆ ಎನ್ನುವ ಕುರಿತು ಎಲ್ಲರು ಕುತೂಹಲರಾಗಿದ್ದರೆ.
ಇದೀಗ ಮುಂದಿನ ಲೋಕಸಭಾ ಚುನಾವಣೆಯ ಕುರಿತು ಕೊಡಿ ಮಠದ ಶ್ರೀಗಳು ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಶನಿವಾರ ಹುಬ್ಬಳ್ಳಿಯಲ್ಲಿ ಮಾತನಾಡುವಾಗ ಲೋಕಸಭಾ ಚುನಾವಣೆಯ ಬಗ್ಗೆ ಮಾತನಾಡಿದ್ದಾರೆ.
![The Swami of Kodi Math has predicted the result of the Lok Sabha elections](https://nadunudi.in/wp-content/uploads/2023/07/kodi-mutt-latest.png)
” ಲೋಕಸಭಾ ಚುನಾವಣೆ ಇನ್ನು ದೂರವಿದೆ. ಒಂದೊಮ್ಮೆ ನಾನು ಈ ಚುನಾವಣೆಯ ವಿಚಾರವಾಗಿ ಸತ್ಯ ಹೇಳಿದರೆ ಮಠ ಸೇರುವುದಿಲ್ಲ. ಸತ್ಯ ಯಾರಿಗೂ ಇಷ್ಟವಾಗುವುದಿಲ್ಲ ಮತ್ತು ಅಸತ್ಯವೇ ಎಲ್ಲರಿಗೂ ಪ್ರಿಯ. ಲೋಕಸಭಾ ಚುನಾವಣೆಯ ಫಲಿತಾಂಶ ಏನಾಗಲಿದೆ ಎನ್ನುವುದನ್ನು ಸಮಯ ಬಂದಾಗ ತಿಳಿಸುತ್ತೇನೆ” ಎಂದು ಕೊಡಿ ಮಠದ ಶೀಗಳು ಹೇಳಿಕೆ ನೀಡಿದ್ದಾರೆ.
ಈಗಲೇ ಸತ್ಯವನ್ನು ಹೇಳಿದರೆ ಮಠಕ್ಕೆ ಹೋಗಲು ಕಷ್ಟವಾಗುತ್ತದೆ ಎನ್ನುವ ರೀತಿಯಲ್ಲಿ ಶ್ರೀಗಳು ಉತ್ತರಿಸಿದ್ದಾರೆ. ಶ್ರೀಗಳ ಈ ಉತ್ತರ ಎಲ್ಲರಲ್ಲೂ ಗೊಂದಲ ಮೂಡಿಸಿದೆ.