Image Credit: Original Source
Rules For Crop Compensation: ರಾಜ್ಯದಲ್ಲಿ ಬರ ಪರಿಣಾಮದಿಂದ ರಾಜ್ಯದ ರೈತರು ಕಣ್ಣೀರು ಹಾಕುವಂತಾಗಿದೆ. ರೈತರ ಕಷ್ಟಕ್ಕೆ ಸದ್ಯ ಸರ್ಕಾರ ನೆರವಾಗಲಾಗಿದೆ. ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈಗಾಗಲೇ ರಾಜ್ಯ ಸರ್ಕಾರ ತರೈಗೆ ಬೆಳೆ ಪರಿಹಾರವನ್ನು ಬಿಡುಗಡೆ ಮಾಡಿದೆ.
ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದರು, ಕೇಂದ್ರ ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡದಿರುವ ಕಾರಣ ರಾಜ್ಯ ಸರ್ಕಾರ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದೆ. ಸದ್ಯ ಬೆಳೆ ಪರಿಹಾರದ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದ ರಾಜ್ಯ ಸರ್ಕಾರ ರೈತರಿಗೆ ಹೊಸ ಆದೇಶವನ್ನು ಹೊರಡಿಸಿದೆ.
ರಾಜ್ಯದ ಎಲ್ಲಾ ರೈತರಿಗೆ ಸರ್ಕಾರದ ಇನ್ನೊಂದು ಆದೇಶ
ರಾಜ್ಯದ 236 ತಾಲೂಕುಗಳ ಪೈಕಿ 223 ರಾಜ್ಯಗಳು ಬರದಿಂದ ತತ್ತರಿಸಿ ಹೋಗಿವೆ. ಈ ಬೆಳೆ ಹಾನಿಯಿಂದಾಗಿ 35 ಸಾವಿರ ಕೋಟಿ ನಷ್ಟ ಉಂಟಾಗಿದೆ. ಈ ಹಿನ್ನಲೆ ಕೇಂದ್ರಕ್ಕೆ 18 ಸಾವಿರ ಕೋಟಿ ಬೆಳೆ ಪರಿಹಾರ ನೀಡುವಂತೆ ಮನವಿ ಸಲ್ಲಿಸಲಾಗಿದೆ. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದ ಕಾರಣ ರಾಜ್ಯ ಸರ್ಕರ ಬರ ಪೀಡಿತ ರೈತರಿಗೆ 2000 ರೂ. ಬೆಳೆ ಪರಿಹಾರ ಮೊತ್ತವನ್ನು ಜಮಾ ಮಾಡುವುದಾಗಿ ಘೋಷಿಸಿದೆ.
ಮೊದಲೇ ಕಂತಿನಲ್ಲಿ ರೂ. 2000 ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಆದರೆ ರಾಜ್ಯದ ರೈತರು ಬೆಳೆ ಪರಿಹಾರ ಮೊತ್ತವನ್ನು ಪಡೆಯಲು ಈ ಕೆಲಸವನ್ನು ಮಾಡುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಕೆಲಸ ಮಾಡದಿದ್ದರೆ ಸಿಗಲ್ಲ ಬರ ಪರಿಹಾರದ ಹಣ
ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2000 ರೂ. ಬೆಳೆ ಪರಿಹಾರ ರಾಷ್ಟ್ರೀಯ ರೈತರ ದಿನದಂದು ಜಮಾ ಆಗಿದೆ. ರೈತರ ಹಿತಕ್ಕಾಗಿ ರಾಜ್ಯ ಸರ್ಕಾರ ತಕ್ಷಣ ಈ ಕೆಲಸವನ್ನು ಪೂರ್ಣಗೊಳಿಸಿದೆ. 2023 -24 ನೇ ಸಾಲಿನಲ್ಲಿ ಬರದಿಂದ ಶೇ. 33 ರಷ್ಟು ಬೆಳೆಯನ್ನು ಕಳೆದುಕೊಂಡ ಮಳೆಯಾಶ್ರಿತ ರೈತರಿಗೆ ಬೆಳೆ ಪರಿಹಾರ ಸಿಗಲಿದೆ.
ಈ ಹಿನ್ನಲೆ ಸರ್ಕಾರ 105 ಕೋಟಿ ಹಣವನ್ನು ಬಿಡುಗಡೆ ಮಾಡಿದೆ. ಸರ್ಕಾರ ಬಿಡುಗಡೆ ಮಾಡಿದ ಬೆಳೆ ಪರಿಹಾರ ಮೊತ್ತ ಖಾತೆಗೆ ಆಧಾರ್ ಲಿಂಕ್ ಮಾಡಿದ ತಕ್ಷಣ ಜಮಾ ಆಗಲಿದೆ. ಹೀಗಾಗಿ ರಾಜ್ಯದ ರೈತರು ಬೆಳೆ ಪರಿಹಾರವನ್ನು ಪಡೆಯಲು ತಮ್ಮ ಖಾತೆಗೆ ಆಧಾರ್ ಲಿಂಕ್ ಮಾಡುವುದು ಕಡ್ಡಾಯವಾಗಿದೆ. ಆಧಾರ್ ಲಿಂಕ್ ಆದ ತಕ್ಷಣ ಅರ್ಹರ ಖಾತೆಗೆ ಬೆಳೆ ಪರಿಹಾರದ ಮೊತ್ತ ತಲುಪಲಿದೆ. ಆಧಾರ್ ಕಾರ್ಡ್ ಖಾತೆಗೆ ಲಿಂಕ್ ಆಗದಿದ್ದರೆ ಬೆಲೆ ಪರಿಹಾರದ ಹಣ ನಿಮಗೆ ಸಿಗಲ್ಲ.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…