Extension Of Time For Submission Of Application For Laptop: ಸದ್ಯ ರಾಜ್ಯದಲ್ಲಿ ಡಿಜಿಟಲ್ ಶಿಕ್ಷಣವನ್ನು ಉತ್ತೇಜಿಸಲು ಸರ್ಕಾರ ವಿವಿಧ ಸೌಲಭ್ಯವನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ಈ ಬಾರಿಯ ಶಿಕ್ಷಣ ನೀತಿಯಲ್ಲಿ ಸಾಕಷ್ಟು ಬದಲಾವಣೆಯನ್ನು ಮಾಡಿದೆ. ವಿದ್ಯಾರ್ಥಿಗಳು ಹೊಸ ಶಿಕ್ಷಣ ನೀತಿಯಡಿ ಶಿಕ್ಷಣವನ್ನು ಪಡೆಯುತ್ತಿದ್ದಾರೆ.
ರಾಜ್ಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್
ಸದ್ಯ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗಾಗಿ ಲ್ಯಾಪ್ ಟಾಪ್ ಅನ್ನು ನೀಡಲು ಮುಂದಾಗಿದೆ. ಇನ್ನು 2022 -23 ನೇ ಸಾಲಿನ ಪಾಲಿಕೆಯ ಅಮೃತ ಮಹೋತ್ಸವ ಲ್ಯಾಪ್ ಟಾಪ್ (Amrit Mahotsav Laptop Program) ವಿತರಿಸಲು ಸರ್ಕಾರ ಮುಂದಾಗಿದೆ. ಇದೀಗ ರಾಜ್ಯ ಸರ್ಕಾರ ಈ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಇನ್ನಷ್ಟು ವಿಸ್ತರಿಸಿದೆ. ಈ ಮೂಲಕ ರಾಜ್ಯ ಸರ್ಕಾರ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದೆ.
ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ
ಸದ್ಯ BBMP ವ್ಯಾಪ್ತಿಯಲ್ಲಿ 2022-23 ನೇ ಸಾಲಿನಲ್ಲಿ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಕಾರ್ಯಕ್ರಮದಡಿ, ವಿದ್ಯಾರ್ಥಿಗಳು ಈಗಾಗಲೇ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಿದ್ದಾರೆ ಮತ್ತು ಆನ್ ಲೈನ್ ನಲ್ಲಿ ಅಗತ್ಯ ದಾಖಲೆಗಳನ್ನು ಸಮರ್ಪಕವಾಗಿ ಸಲ್ಲಿಸದ ವಿದ್ಯಾರ್ಥಿಗಳಿಗೆ ಅರ್ಹ ದಾಖಲೆಗಳನ್ನು ಮತ್ತೆ ಅಪ್ ಲೋಡ್ ಮಾಡಲು ಸಮಯ ನೀಡಲಾಗುತ್ತದೆ.
ಪಾಲಿಕೆಯ ವೆಬ್ ಸೈಟ್ https://welfare.bbmpgov.in/ ಗೆ ಭೇಟಿ ನೀಡಿ ಅರ್ಜಿಯ ಪ್ರಸ್ತುತ ಸ್ಥಿತಿ ಮತ್ತು ಅರ್ಜಿಯ ತಿದ್ದುಪಡಿಗೆ ನಮೂದಿಸಿರುವ ಮೊಬೈಲ್ ಸಂಖ್ಯೆ ಮತ್ತು ಅರ್ಜಿ ಸಂಖ್ಯೆಯನ್ನು ನಮೂದಿಸುವ ಮೂಲಕ ಸ್ಥಿತಿಗತಿಯನ್ನು ತಿಳಿದುಕೊಳ್ಳಲು ಸಾಧ್ಯವಾಗುತ್ತದೆ.
ಅಪ್ಲಿಕೇಶನ್ ಅನ್ನು ತಿದ್ದುಪಡಿ ಮಾಡಲು ಅಥವಾ ಹೊಸ ದಾಖಲೆಗಳನ್ನು ಅಪ್ ಲೋಡ್ ಮಾಡಲು ಅವಕ್ಷ ಕಲ್ಪಿಸಿಕೊಡಲಾಗಿದೆ. ಇನ್ನು ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಾಲು ಕೊನೆಯ ದಿನಾಂಕ 19 ಫೆಬ್ರವರಿ ಆಗಿತ್ತು. ಆದರೆ ರಾಜ್ಯ ಸರ್ಕಾರ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಈ ದಿನಾಂಕವನ್ನು ಫೆ, 29 ರ ವರೆಗೆ ವಿಸ್ತರಿಸಿದೆ. ಅರ್ಹ ವಿದ್ಯಾರ್ಥಿಗಳು ಫೆ. 29 ರೊಳಗೆ ಅಮೃತ ಮಹೋತ್ಸವ ಲ್ಯಾಪ್ ಟಾಪ್ ಗೆ ಅರ್ಜಿ ಸಲ್ಲಿಸಬಹುದು.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…