Anna Bhagya: ಅನ್ನಭಾಗ್ಯ ಯೋಜನೆಯಲ್ಲಿ ದೊಡ್ಡ ಬದಲಾವಣೆ, ಕುಟುಂಬದ ಯಜಮಾನಿಯ ಬದಲು ಈ ಖಾತೆಗೆ ಹಣ ಜಮಾ.
ಅನ್ನ ಭಾಗ್ಯ ಯೋಜನೆಯ ಯಜಮಾನರು ಇಲ್ಲದಿದ್ದರೆ 2 ನೇ ವ್ಯಕ್ತಿಯ ಖಾತೆಗೆ ಹಣ ಜಮಾ ಆಗಲಿದೆ.
Anna Bhagya Amount Credit: ರಾಜ್ಯದಲ್ಲಿ ವಿವಿಧ ಯೋಜನೆಗಳು ಅನುಷ್ಠಾನಗೊಳುತ್ತಿದೆ. ಕಾಂಗ್ರೆಸ್ ಸರ್ಕಾರ ಚುನಾವಣಾ ಪೂರ್ವದಲ್ಲಿ ಘೋಷಿಸಿರುವಂತೆ ಐದು ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಸರ್ಕಾರ ಬ್ಯುಸಿ ಆಗಿದೆ. ಈಗಾಗಲೇ ಐದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಯೋಜನೆಗಳು ಅನುಷ್ಠಾನಗೊಂಡಿದ್ದು, ಇನ್ನು ಒಂದು ಯೋಜನೆ ಅನುಷ್ಠಾನ ಕಾರ್ಯ ಬಾಕಿ ಇದೆ. ಇನ್ನೇನು ಮುಂದಿನ ತಿಂಗಳಿನಲ್ಲಿ ಆ ಯೋಜನೆ ಕೂಡ ಜಾರಿಯಾಗಲಿದೆ.
![Anna Bhagya Amount](https://nadunudi.in/wp-content/uploads/2023/11/Anna-Bhagya-Amount.jpg)
ಅನ್ನ ಭಾಗ್ಯ ಯೋಜನಾ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಇನ್ನು ರಾಜ್ಯದಲ್ಲಿ Anna Bhagya ಯೋಜನೆ ಈಗಾಗಲೇ ಅನುಷ್ಠಾನಗೊಂಡಿದ್ದು ಅರ್ಹರು ಯೋಜನೆ ಲಾಭ ಪಡೆದುಕೊಳ್ಳುತ್ತಿದ್ದಾರೆ. ರಾಜ್ಯ ಸರ್ಕಾರ ಚುನಾವಣಾ ಸಮಯದಲ್ಲಿ ಅನ್ನ ಭಾಗ್ಯ ಯೋಜನೆಯಡಿ 10 kg ಅಕ್ಕಿ ನೀಡುವುದಾಗಿ ಘೋಷಣೆ ಹೊರಡಿಸಿತ್ತು. ಆದರೆ ರಾಜ್ಯದಲ್ಲಿ ಅಕ್ಕಿ ಸರಬರಾಜಿನ ಕೊರತೆಯಿಂದಾಗಿ 5KG ಅಕ್ಕಿಯ ಬದಲು ಹೆಚ್ಚುವರಿ ಹಣ ನೀಡುತ್ತಿದೆ.
ಪ್ರತಿ ಕೆಜಿಗೆ 34 ರೂ. ಗಳಂತೆ 174 ರೂ. ಗಳನ್ನೂ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿತ್ತು. ಇನ್ನು ಈ ಅನ್ನ ಭಾಗ್ಯ ಯೋಜನೆಯ ಹೆಚ್ಚುವರಿ ಅಕ್ಕಿಯ ಹಣ ಅರ್ಹರಿಗೆ DBT ಮೂಲಕ ಖಾತೆಗೆ ಜಮಾ ಆಗುತ್ತಿತ್ತು. ಆದರೆ ಕೆಲ ಫಲಾನುಭವಿಗಳಿಗೆ ಯೋಜನೆಯ ಹಣ ಲಭ್ಯವಾಗುತ್ತಿಲ್ಲ. ಇದೀಗ ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚಿಸಿ ಈ ಯೋಜನೆಯ ಬಗ್ಗೆ ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ. ಅನ್ನ ಭಾಗ್ಯ ಯೋಜನೆಯ ಹಣ ಜಮಾ ಮಾಡುವ ಬಗ್ಗೆ ಮಹತ್ವದ ಘೋಷಣೆ ಹೊರಡಿಸಿದ್ದಾರೆ.
![Anna Bhagya Amount Credit Update](https://nadunudi.in/wp-content/uploads/2023/11/Anna-Bhagya-Amount-Credit-Update.jpg)
ಅನ್ನ ಭಾಗ್ಯ ಯೋಜನೆಯ ಯಜಮಾನರು ಇಲ್ಲದಿದ್ದರೆ 2 ನೇ ವ್ಯಕ್ತಿಯ ಖಾತೆಗೆ ಹಣ ಜಮಾ ಆಗಲಿದೆ
ಅನ್ನಭಾಗ್ಯ ಯೋಜನೆಯಡಿ ಅಕ್ಟೋಬರ್ ತಿಂಗಳಿನಲ್ಲಿ 1,10,96,413 ಕಾರ್ಡುದಾರರಿಗೆ ಹಣ ಪಾವತಿ ಮಾಡಲಾಗಿದೆ. ಇದುವರೆಗೆ ಒಟ್ಟು 2,444.11 ಕೋಟಿ ರೂ. ಮೊತ್ತವನ್ನು ಡಿಬಿಟಿ ಮೂಲಕ ವರ್ಗಾಯಿಸಲಾಗಿದೆ. 12.95 ಲಕ್ಷ ಕಾರ್ಡುದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮಾಡುವ ಮೂಲಕ ಯೋಜನೆಗೆ ಸೇರಿಸಿದ್ದಾರೆ.
ಅಂಚೆ ಕಚೇರಿಗಳಲ್ಲಿ 2.60 ಲಕ್ಷ ಹೊಸ ಖಾತೆ ತೆರೆಯಲಾಗಿದೆ. ಇನ್ನು 7.67 ಲಕ್ಷ ಅನರ್ಹ ಪಡಿತರ ಚೀಟಿಗಳಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಗುರುತಿಸಿ ಪರಿಹರಿಸಲು ಕ್ರಮಕೈಗೊಳ್ಳಲಾಗುತ್ತಿದೆ. ಬಹುತೇಕ ಪ್ರಕರಣಗಳಲ್ಲಿ ಯಜಮಾನರು ಊರಿನಲ್ಲಿ ಇಲ್ಲದ ಕಾರಣ ತಾಂತ್ರಿಕ ಸಮಸ್ಯೆಯಾಗುತ್ತಿದೆ. ಇದರಿಂದಾಗಿ ಎರಡನೇ ಹಿರಿಯರ ಖಾತೆಗೆ ಹಣ ವರ್ಗಾವಣೆ ಮಾಡುವ ಕುರಿತು ಸಚಿವ ಸಂಪುಟದ ಸಭೆಯಲ್ಲಿ ಸಿದ್ದರಾಮಯ್ಯ ಅವರು ಘೋಷಣೆ ಹೊರಡಿಸಿದ್ದಾರೆ. ಡಿಸೆಂಬರ್ 31 ರೊಳಗೆ ಎಲ್ಲ ಅರ್ಹರಿಗೂ ಸೌಲಭ್ಯ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.