Image Source: Mint
Anna Bhagya KYC Latest Update: ಕರ್ನಾಟಕದಲ್ಲಿ ಅನ್ನಭಾಗ್ಯ (Anna Bhagya) ಯೋಜನೆಯಡಿ ಪ್ರತಿ ತಿಂಗಳು 05 ಕೆಜಿ ಅಕ್ಕಿಯ ಬದಲಾಗಿ, ಪಡಿತರ ಹೊಂದಿರುವ ಕುಟುಂಬದ ಯಜಮಾನರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಈ ಯೋಜನೆ ಪ್ರಾರಂಭ ಆಗಿ ಹಲವು ತಿಂಗಳಾಗಿದ್ದು,
ಅರ್ಹ BPL ಪಡಿತರ ಹೊಂದಿರುವ ಬಡ ಕುಟುಂಬಗಳಿಗೆ ಕಾಂಗ್ರೆಸ್ ಸರ್ಕಾರ ಅನ್ನಭಾಗ್ಯ ಯೋಜನೆಯಡಿ ಅಕ್ಕಿಯ ಬದಲು ಹಣ ಸಹಾಯ ಮಾಡುತ್ತಿದೆ. ಅಕ್ಕಿಯ ಪೂರೈಕೆಯ ಕೊರತೆ ಇರುವುದರಿಂದ ಯಜಮಾನರ ಖಾತೆಗೆ ಹಣ ಜಮೆ ಮಾಡಲಾಗುತ್ತಿದ್ದು, ಇನ್ನುಮುಂದೆ ಈ ಯೋಜನೆಯ ಹಣ ಸಿಗಬೇಕೆಂದರೆ ಕಡ್ಡಾಯವಾಗಿ ಈ ಕೆಲಸವನ್ನು ಮಾಡಬೇಕಾಗಿದೆ.
ಅನ್ನಭಾಗ್ಯ ಯೋಜನೆಯ ಹಣ ಪಡೆಯಲು ಆಧಾರ ಕಾರ್ಡ್ ಲಿಂಕ್ ಕಡ್ಡಾಯ
ಇತೀಚಿನ ದಿನಗಳಲ್ಲಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಳ್ಳಿ ಎಂದು ಸರ್ಕಾರ ಪದೇ ಪದೇ ಹೇಳುತ್ತಿದೆ. ಆದ್ರೆ ಹೆಚ್ಚಿನವರು ಈ ಕುರಿತು ನಿರ್ಲಕ್ಷ ಮಾಡುತ್ತಿದ್ದು, ಅಂತವರಿಗೆ ಇನ್ನು ಮುಂದೆ ಯಾವುದೇ ಯೋಜನೆಯ ಸೌಲಭ್ಯ ದೊರೆಯುವುದಿಲ್ಲ. ಹಾಗೆಯೆ ಅನ್ನಭಾಗ್ಯ ಯೋಜನೆಯ ಹಣ ಕುಟುಂಬಗಳಿಗೆ ದೊರೆಯಬೇಕಂದರೆ ತಮ್ಮ ಆಧಾರ್ ಕಾರ್ಡ್ ಅನ್ನು ಬ್ಯಾಂಕ್ ಖಾತೆಯೊಂದಿಗೆ ಲಿಂಕ್ ಮಾಡಬೇಕೆಂದು ಸರ್ಕಾರ ಕಡ್ಡಾಯಗೊಳಿಸಿದ್ದು, ಲಿಂಕ್ ಮಾಡದ ಕುಟುಂಬಗಳಿಗೆ ಅನ್ನಭಾಗ್ಯ ಹಣ ದೊರೆಯದು ಎಂದು ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಜಂಟಿ ಇಲಾಖೆಯ ನಿರ್ದೇಶಕರಾದ ಮೊಹಮ್ಮದ್ ಖೈಜರ್ ಅವರು ತಿಳಿಸಿದ್ದಾರೆ.
ಆಧಾರ್ ಲಿಂಕ್ ಹಾಗು ಪಡಿತರ ದೋಷಗಳನ್ನು ಸರಿಪಡಿಸಿಕೊಳ್ಳತಕ್ಕದ್ದು
ಅಂತ್ಯೋದಯ ಹಾಗು BPL ಪಡಿತರ ಚೀಟಿ ಹೊಂದಿರುವವರು ಕಡ್ಡಾಯವಾಗಿ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಕಾರ್ಡ್ ಅನ್ನು ಲಿಂಕ್ ಮಾಡಿಸಿಕೊಳ್ಳತಕದ್ದಾಗಿದೆ. ಅಷ್ಟೇ ಅಲ್ಲದೇ ತಮ್ಮ ಪಡಿತರ ಚೀಟಿಯಲ್ಲಿ ಏನಾದರೂ ದೋಷಗಳಿದ್ದರೆ ಅವುಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. ಯಾಕೆಂದರೆ ನಿಮ್ಮ ಪಡಿತರ ಚೀಟಿಯಲ್ಲಿ ಅಥವಾ ಬ್ಯಾಂಕ್ ಖಾತೆಯಲ್ಲಿ ಏನಾದರೂ ದೋಷ ಇದ್ದರೇ ನಿಮ್ಮ ಖಾತೆಗೆ ಅನ್ನಭಾಗ್ಯ ಹಣ ಬರುವುದಿಲ್ಲ.
ಪಡಿತರ ಚೀಟಿಯಲ್ಲಿ ಒಂದಕ್ಕಿಂತ ಹೆಚ್ಚು ಮುಖ್ಯಸ್ಥರ ಹೆಸರು ಇರುವುದು ಅಥವಾ ಮುಖ್ಯಸ್ಥರ ಹೆಸರು ಇಲ್ಲದಿರುವುದು, ಆಧಾರ್ ಕಾರ್ಡ್ ಸಂಖ್ಯೆ ತಪ್ಪಾಗಿ ನಮೂದಾಗಿರುವುದು, ಬ್ಯಾಂಕ್ e-KYC ಮಾಡದಿರುವುದು, ಅಥವಾ ಕಳೆದ ಮೂರೂ ನಾಲ್ಕು ತಿಂಗಳಿಂದ ಪಡಿತರ ಪಡೆಯದೇ ಇರುವವರ ಖಾತೆಗೆ ಅನ್ನಭಾಗ್ಯ ಹಣ ವರ್ಗಾವಣೆ ಆಗುವುದಿಲ್ಲ ಎಂದು ಅಧಿಕಾರಿಗಳು ತಿಳಿಸುತ್ತಾರೆ. ಹಾಗಾಗಿ ಇಂತಹ ಸಮಸ್ಯೆಗಳನ್ನು ಬಗೆಹರಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ.
7th Pay New Update: ಸದ್ಯ ರಾಜ್ಯ ಸರ್ಕಾರೀ ನೌಕರರು ಬಹುದಿನಗಳಿಂದ 7 ನೇ ವೇತನ ಜಾರಿಯ ಬಗ್ಗೆ ಸರ್ಕಾರದ…
Maruti Ertiga 7 Seater Car: ಮಾರುಕಟ್ಟೆಯಲ್ಲಿ 7 ಆಸನಗಳ ಕಾರ್ ಗಳಿಗೆ ಬೇಡಿಕೆ ಹೆಚ್ಚಿದೆ ಎನ್ನಬಹುದು. ಗ್ರಾಹಕರು ಹೆಚ್ಚಿನ…
Anushka Sharma Latest Update: ಸದ್ಯ ಸ್ಟಾರ್ ಕ್ರಿಕೆಟರ್ ವಿರಾಟ್ ಕೊಹ್ಲಿ ಹಾಗೂ ನಟಿ ಅನುಷ್ಕಾ ಶರ್ಮ ಜೋಡಿಯ ಬಗ್ಗೆ…
Virat Kohli And Narendra Modi Conversation: ಸದ್ಯ ಜೂನ್ 29 ರಂದು ನಡೆದ ಇಂಡಿಯಾ ಮತ್ತು ಸೌತ್ ಆಫ್ರಿಕಾ…
Today Gold Rate Down: ಚಿನ್ನದ ಬೆಲೆ (Gold Price) ಯಲ್ಲಿ ದಿನೇ ದಿನೇ ಏರಿಕೆ ಕಾಣುತ್ತಿರುವುದರಿಂದ ಜನಸಾಮಾನ್ಯರಿಗೆ ಚಿನ್ನ…
Maternity Leave For Govt Employees: ಸದ್ಯ ದೇಶದಲ್ಲಿ ಕೇಂದ್ರ ಸರ್ಕಾರ (Central Government) ಮಹಿಳಾ ಸಬಲೀಕರಣದತ್ತ ಹೆಚ್ಚಿನ ಗಮನ…