Anna Bhagya Scheme: ಅನ್ನಭಾಗ್ಯ ಯೋಜನೆಯ ಬಿಗ್ ಅಪ್ಡೇಟ್, ಸರ್ಕಾರದ ಬಳಿ ಮನವಿ ಮಾಡಿಕೊಂಡ ಮಹಿಳೆಯರು, ಇಕ್ಕಟ್ಟಿನಲ್ಲಿ ಸರ್ಕಾರ
ಅನ್ನಭಾಗ್ಯ ಯೋಜನೆಯ ಕುರಿತಂಗೆ ಬೇಸರ ಹೊರಹಾಕಿದ ಮಹಿಳೆಯರು, ಸಂಕಷ್ಟದಲ್ಲಿ ಸರ್ಕಾರ
Anna Bhagya Scheme Latest Update: ರಾಜ್ಯದಲ್ಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಕಾಂಗ್ರೆಸ್ ಪಕ್ಷ 5 ಗ್ಯಾರೆಂಟಿ ಯೋಜನೆಯನ್ನು ಪ್ರಜೆಗಳ ಮುಂದಿಟ್ಟಿದ್ದು, ಅದರಲ್ಲಿ ಅನ್ನಭಾಗ್ಯ ಯೋಜನೆ ಕೂಡ ಒಂದಾಗಿದೆ. ಅನ್ನಭಾಗ್ಯ ಯೋಜನೆ ಪ್ರಾರಂಭ ಆಗಿ ಹಲವು ತಿಂಗಳುಗಳು ಕಳೆದಿದ್ದು, ಈ ಯೋಜನೆಯಡಿ ಸರ್ಕಾರ 5 ಕೆಜಿ ಅಕ್ಕಿ ನೀಡುವುದಾಗಿ ಭರವಸೆ ನೀಡಿದ್ದು, ರಾಜ್ಯದಲ್ಲಿ ಅಕ್ಕಿ ದಾಸ್ತಾನಿನ ಕೊರತೆ ಕಂಡುಬಂದು ಈಗ 5 ಕೆಜಿ ಅಕ್ಕಿಯ ಬದಲಾಗಿ ಬಡ ಕುಟುಂಬಗಳ ಯಜಮಾನರ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ. ಆದರೆ ಈ ಕುರಿತು ಮಹಿಳೆಯರು ನಮಗೆ ಹಣ ಬೇಡ ಅಕ್ಕಿ ಬೇಕು ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.
![Anna Bhagya Scheme Latest Update](https://nadunudi.in/wp-content/uploads/2024/01/Anna-Bhagya-Scheme-Latest-Update.png)
ಹಣ ಬೇಡ ಅಕ್ಕಿ ಬೇಕು ಎಂದ ಜನತೆ
ಅನ್ನಭಾಗ್ಯ ಯೋಜನೆಯಡಿ ಈಗಾಗಲೇ ರಾಜ್ಯದ ಜನತೆ ಅಕ್ಕಿ ಬದಲಾಗಿ ಹಣ ಪಡೆಯುತ್ತಿದ್ದು, ಇನ್ನು ಮುಂದೆ ನಮಗೆ ಹಣ ಬೇಡ ಅಕ್ಕಿಯೆನ್ನೇ ನೀಡಿ ಎಂದು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದು, ಈ ಕುರಿತು ಸರ್ಕಾರ ಚಿಂತಿಸುತ್ತಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದ ಅಕ್ಕಿ ಬೆಳೆ ಕುಸಿದಿದ್ದು, ಅಕ್ಕಿಯ ಕೊರತೆ ತುಂಬ ಕಾಡುತ್ತಿದೆ. ಈ ನಡುವೆ ಎರಡು ಸರ್ವೆಗಳು ನಡೆದಿದ್ದು ಅಕ್ಕಿಗೆ ಡಿಮ್ಯಾಂಡ್ ಹೆಚ್ಚಿದೆ.
ಆಹಾರ ಇಲಾಖೆಯ ಅಧಿಕಾರಿ, ಸಿಬ್ಬಂದಿಯಿಂದ ಒಂದು ಸರ್ವೆ
ಸಿಎಂ ಕಚೇರಿಯ ಮೂಲಕ ಎನ್ ಜಿ ಒ ಮೂಲಕ ಮತ್ತೊಂದು ಸರ್ವೆ ನಡೆಸಲಾಗಿತ್ತು. ಈ ಎರಡು ಸರ್ವೆಯಲ್ಲಿ ಶೇ.60ಕ್ಕಿಂತಲೂ ಹೆಚ್ಚು ಮಂದಿ ಹಣ ಬೇಡ ಅಕ್ಕಿ ಕೊಡಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.ಇನ್ನೂ ರಾಜ್ಯ ಕಾಂಗ್ರೆಸ್ ಸರ್ಕಾರ ಅಕ್ಕಿ ಕೊಡಲು ಸಾಧ್ಯವಿಲ್ಲದ ಕಾರಣ ಪ್ರತಿ ವ್ಯಕ್ತಿಗೆ 170 ರೂಪಾಯಿ ನೀಡುತ್ತಿದೆ. 6 ತಿಂಗಳಿಗೆ ಅಕ್ಕಿ ಬದಲು ಸರ್ಕಾರದಿಂದ ಜನರ ಖಾತೆಗೆ ₹3751 ಕೋಟಿ ಹಣ ವರ್ಗಾವಣೆ ಆಗಿದೆ.
![Anna Bhagya Scheme Details](https://nadunudi.in/wp-content/uploads/2024/01/Anna-Bhagya-Scheme-Details.jpg)
ಅಕ್ಕಿಯನ್ನು ನೀಡುವ ಕುರಿತು ಸರಕಾರದ ಭರವಸೆ
ಈಗ ಅನ್ನಭಾಗ್ಯ ಯೋಜನೆಯಡಿ ನೀಡುತ್ತಿರುವ ಹಣ ಬೇರೆ ಉದ್ದೇಶಗಳಿಗೆ ಬಳಕೆ ಆಗುತ್ತಿದ್ದು ಅಕ್ಕಿ ಖರೀದಿ ಮಾಡಲು ಸಾಧ್ಯ ಆಗುತ್ತಿಲ್ಲ, ಹಣದ ಬದಲು ಅಕ್ಕಿಯನ್ನೇ ನೀಡಿದರೆ ತುಂಬ ಸಹಾಯ ಆಗುವುದೆಂದು ಜನತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಈ ಕುರಿತು ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ ಅವರು ಹೇಳುವುದೇನೆಂದರೆ ರಾಜ್ಯದಲ್ಲಿ ಶೇ 70 ರಿಂದ 80% ಜನ ಅಕ್ಕಿ ಬೇಕು ಅಂತ ಕೇಳುತ್ತಿದ್ದಾರೆ.
ಅಕ್ಕಿ ಕೊಡಬೇಕು ಅನ್ನೋ ಯೋಚನೆಯಿದೆ. ಆದಷ್ಟು ಬೇಗ ಅಕ್ಕಿಯನ್ನೆ ಕೊಡುವ ಕೆಲಸ ಮಾಡ್ತೀವಿ. ಆಂಧ್ರ ಪ್ರದೇಶ ತೆಲಂಗಾಣದಿಂದ ಸೇರಿದಂತೆ ಹಲವಡೆಯಿಂದ ಅಕ್ಕಿ ಖರೀದಿಗೆ ಮುಂದಾಗಿದ್ದೇವೆ. ಆದರೆ ಸಮರ್ಪಕವಾಗಿ ಬೆಲೆ ನಿಗದಿಯಾಗ್ತಿಲ್ಲ ಈ ಬಾರಿ ಉತ್ಪಾದನೆಯು ಕಡಿಮೆಯಾಗಿದೆ. ಆದಷ್ಟು ಬೇಗ ಅಕ್ಕಿ ಕೊಡುವ ಪ್ರಯತ್ನವನ್ನ ನಾವು ಮಾಡ್ತೀವಿ. ಅಲ್ಲಿಯವರೆಗೂ ನಾವು ಹೇಳಿದಂತೆ ಹಣ ಹಾಕ್ತಿವಿ ಎಂದು ತಿಳಿಸಿದ್ದಾರೆ. ಇನ್ನು ಮುಂದಿನ ದಿನಗಳಲ್ಲಿ ಅಕ್ಕಿಯನ್ನೇ ನೀಡುತ್ತೇವೆ ಎಂಬ ಭರವಸೆಯನ್ನು ನೀಡಿದ್ದಾರೆ.