Image Credit: businessleague
Anna Bhagya Scheme Deposit Rules: ಅನ್ನ ಭಾಗ್ಯ ಯೋಜನೆಗೆ ಸಂಬಂಧಿಸಿದಂತೆ ಈಗಾಗಲೇ ಸಾಕಷ್ಟು ಅಪ್ಡೇಟ್ ಗಳು ಹೊರ ಬಿದ್ದಿದೆ. ಸರ್ಕಾರ ಅನ್ನ ಭಾಗ್ಯ ಯೋಜನೆಯ ಸಲುವಾಗಿ ಸಾಕಷ್ಟು ಮಾಹಿತಿಗಳನ್ನು ನೀಡುತ್ತಿದೆ.
ಜನರಿಗೆ 5 ಕೆಜಿ ಅಕ್ಕಿ ಬದಲು 5 ಕೆಜಿ ಅಕ್ಕಿಗೆ ಸರಿದೂಗುವ ಹಣ ನೀಡಲು ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಪ್ರತಿ ಕೆಜಿ ಅಕ್ಕಿಗೆ 34 ರೂಪಾಯಿಯಂತೆ ಬಿಪಿಎಲ್ ಪಡಿತರ ಕಾರ್ಡ್ ದಾರರಿಗೆ ಮಾಸಿಕ ತಲಾ 170 ರೂಪಾಯಿ ನೀಡಲಾಗುತ್ತದೆ. ಆದರೆ ಈ ಹಣ ಎಲ್ಲ ಕುಟುಂಬದವರಿಗೂ ಸಿಗುವುದಿಲ್ಲ. ಈ ಬಗ್ಗೆ ಸರ್ಕಾರ ಹೊಸ ಮಾಹಿತಿಯನ್ನು ನೀಡಿದೆ.
ಬ್ಯಾಂಕ್ ಖಾತೆ ಹೊಂದಿರದ ಕುಟುಂಬದವರಿಗೆ ಅನ್ನಭಾಗ್ಯ ಯೋಜನೆಯ ಹಣ ಸಿಗುವುದಿಲ್ಲ
ಇನ್ನು ಅನ್ನಭಾಗ್ಯ ಯೋಜನೆಯಡಿ 4 ಕೋಟಿಗೂ ಅಧಿಕ ಬಿಪಿಎಲ್ ಫಲಾನುಭವಿಗಳಿಗೆ ಸರ್ಕಾರ ತಲಾ 10 ಕೆಜಿ ಅಕ್ಕಿ ನೀಡುವ ಬದಲು 5 ಕೆಜಿ ಅಕ್ಕಿ ನೀಡಿ ಇನ್ನುಳಿದ 5 ಕೆಜಿ ಅಕ್ಕಿಗೆ ಹಣ ನೀಡುವುದಾಗಿ ಭರವಸೆ ನೀಡಿತ್ತು.
ಆದರೆ ಬಿಪಿಎಲ್ ಕಾರ್ಡುದಾರರಲ್ಲಿ 22 ಲಕ್ಷ ಕುಟುಂಬಗಳು ಬ್ಯಾಂಕ್ ಖಾತೆಗಳನ್ನೇ ಹೊಂದಿಲ್ಲ ಎಂದು ತಿಳಿದು ಬಂದಿದೆ. ಬ್ಯಾಂಕ್ ಖಾತೆಯನ್ನ ಯಾರು ಹೊಂದಿರುವುದಿಲ್ಲವೋ ಅವರಿಗೆ ಹಣ ಜಮಾ ಆಗುವುದಿಲ್ಲ ಎಂದು ಸರ್ಕಾರ ಸ್ಪಷ್ಟನೆಯಲ್ಲಿ ತಿಳಿಸಿದೆ.
ಕಳೆದ ತಿಂಗಳು ರೇಷನ್ ಪಡೆಯದೇ ಇದ್ದವರಿಗೆ ಸರ್ಕಾರಡಿನ ಹಣ ವರ್ಗಾವಣೆ ಆಗುವುದಿಲ್ಲ
ಅಲ್ಲದೆ ಸರ್ಕಾರ ಬಿಪಿಎಲ್ ಕಾರ್ಡ್ ದಾರರಿಗೆ ಅಕ್ಕಿ ಬದಲು ಹಣ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಅಕ್ಕಿ ಪಡೆದವರ ಖಾತೆಗೆ ಮಾತ್ರ ಹಣ ಜಮಾ ಮಾಡಲು ಸರ್ಕಾರ ಚಿಂತನೆ ನಡೆಸಲಾಗಿದೆ. ಜೂನ್ ನಲ್ಲಿ 1,28,23,868 ಕುಟುಂಬಗಳ ಪೈಕಿ 1,17,29,296 ಕುಟುಂಬಗಳು ಅಕ್ಕಿ ಪಡೆದಿದೆ. ಉಳಿದ 10.94 ಲಕ್ಷ ಬಿಪಿಎಲ್ ಕುಟುಂಬಗಳು ಪಡಿತರ ಅಕ್ಕಿ ಪಡೆದಿರಲಿಲ್ಲ. 10.94 ಲಕ್ಷ ಕುಟುಂಬ ಅಂದರೆ ಅಂದಾಜು 20 ಲಕ್ಷ ಜನ ಅಕ್ಕಿ ಪಡೆದುಕೊಂಡಿಲ್ಲ.
20 ಲಕ್ಷ ಜನರಿಗೆ ಹಣ ಹಾಕದಿದ್ದರೆ 76 ಕೋಟಿ ರೂಪಾಯಿ ಉಳಿತಾಯವಾಗುತ್ತದೆ. ಕೆಲವರು ಬಿಇಎಲ್ ಕಾರ್ಡ್ ಹೊಂದಿರುವ ಉದ್ದೇಶದಿಂದ ಪಡಿತರ ಪಡೆಯುವುದಿಲ್ಲ.ಉಚಿತ ಆರೋಗ್ಯ ಸೇವೆ ಪಡೆಯಲು ಬಿಪಿಎಲ್ ಕಾರ್ಡ್ ಹೊಂದಿರುತ್ತಾರೆ.
ಇನ್ನು ಹೆಚ್ಚುವರಿ 5 ಕೆಜಿ ಅಕ್ಕಿಗೆ ಹಣ ನೀಡುವುದು ಅಗತ್ಯವೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಕಳೆದ 3 ತಿಂಗಳಿಂದ 5,37,213 ಬಿಪಿಎಲ್ ಕುಟುಂಬಸ್ಥರ ಅಕ್ಕಿ ಪಡೆದಿಲ್ಲ. ಹೀಗಾಗಿ ಅಕ್ಕಿ ಪಡೆಯದವರಿಗೆ ಹಣ ನೀಡದಿರಲು ಆಹಾರ ಇಲಾಖೆ ಚಿಂತನೆ ನಡೆಸಿವೆ.
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…
Credit Card late Payment Charges: ಕ್ರೆಡಿಟ್ ಕಾರ್ಡ್ ಬಳಸುವುದರಿಂದ ಹಲವು ಪ್ರಯೋಜನಗಳನ್ನೂ ಪಡೆಯಬಹುದು. ಕ್ರೆಡಿಟ್ ಕಾರ್ಡ್ ಬಳಸುವ ಮೂಲಕ,…