Image Credit: Original Source
Ayushman Bharat Free Treatment: ದೇಶದ ಬಡ ನಾಗರೀಕರಿಗಾಗಿ ಹಾಗೂ ನಿರ್ಗತಿಕರಿಗಾಗಿ ಕೇಂದ್ರ ಸರ್ಕಾರ (Central Govt) ವಿವಿಧ ಕಲ್ಯಾಣ ಯೋಜನೆಯನ್ನು ಪರಿಚಯಿಸುತ್ತಿವೆ. ಬಡವರು ಹಾಗೂ ನಿರ್ಗತಿಕರನ್ನು ಆರ್ಥಿಕವಾಗಿ ಸಬಲರನ್ನಾಗಿಸುವುದು ಸರ್ಕಾರದ ಉದ್ದೇಶವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈಗಾಗಲೆ ದೇಶದಲ್ಲಿ ವಿಶೇಷವಾದ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ. ಕೇಂದ್ರ ಈ ವಿಶೇಷ ಅರೋಗ್ಯ ಯೋಜನೆಯ ಬಗ್ಗೆ ಸಂಪೂರ್ಣ ವಿವರ ಇಲ್ಲಿದೆ.
ದೇಶದ ಜನತೆಗಾಗಿ Ayushman Bharat ಯೋಜನೆ ಜಾರಿ
ದೇಶದ ಜನರು ಉಚಿತ ಚಿಕಿತ್ಸೆ ಪಡೆಯಲು ಕೇಂದ್ರ ಸರ್ಕಾರ Pradhan Mantri Ayushman Bharat ಯೋಜನೆಯನ್ನು ಪರಿಚಯಿಸಿದೆ. ಈ ಯೋಜನೆಯಡಿ ಲಾಭ ಪಡೆಯಲು ಜನರು Ayushman Card ಅನ್ನು ಹೊಂದುವುದು ಕಡ್ಡಾಯವಾಗಿದೆ.
ಇದೀಗ ನಾವು ಕೇಂದ್ರದ ಆಯುಷ್ಮಾನ್ ಭಾರತ್ ಯೋಜನೆಯಲ್ಲಿ ಸಿಗುವ ಪ್ರಯೋಜನವೇನು..? ಅಯುಷ್ಮಾನ್ ಕಾರ್ಡ್ ಪಡೆಯಲು ಬೇಕಾಗುವ ದಾಖಲೆಗಳಾವುವು..? ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ. ಕೇಂದ್ರದ ಈ ಯೋಜನೆ ದೇಶದ ಕೋಟ್ಯಾಂತರ ಜನ ಫಲಾನುಭವಿಗಳಿಗೆ ಸಹಾಯವಾಗಲಿದೆ. ಈ ಯೋಜನೆಯಡಿ ಉಚಿತ ಚಿಕೆತ್ಸೆ ಪಡೆಯುವ ಮೂಲಕ ಬಡವರು ತಮ್ಮ ಆರೋಗ್ಯದ ಸಮಸ್ಯೆಯಿಂದ ದೂರವಿರಬಹುದಾಗಿದೆ.
BPL ಹಾಗೂ APL ಕಾರ್ಡ್ ಹೊಂದಿರುವವರಿಗೆ ಉಚಿತ ಚಿಕಿತ್ಸೆ ಸೌಲಭ್ಯ
Ayushman Bharat ಯೋಜನೆಯ ಮೂಲಕ BPL Ration Card ಹೊಂದಿರುವವರು ಮತ್ತು ರಾಷ್ಟ್ರೀಯ ಭೀಮಾ ಯೋಜನೆಯಲ್ಲಿ ನೋಂದಾಯಿತರಾಗಿರುವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ. ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.
ಎಪಿಎಲ್ ಕಾರ್ಡ್ ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರೀ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ. ವರೆಗೆ ಪಡೆಯಬಹುದಾಗಿದೆ. ಭೂಮಿಯನ್ನು ಹೊಂದಿಲ್ಲದವರು, ಮನೆ ಇಲ್ಲದವರು, ದಿನಗೂಲಿ ಕಾರ್ಮಿಕರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು ಆಯುಷ್ಮಾನ್ ಯೋಜನೆಯಡಿ ಪ್ರಯೋಜನವನ್ನು ಪಡೆಯಲು ಅರ್ಹರಾಗಿರುತ್ತಾರೆ.
ಈ ದಾಖಲೆಗಳು ಇದ್ದರೆ ಮಾತ್ರ ಆಯುಷ್ಮಾನ್ ಯೋಜನೆಯ ಲಾಭ ಪಡೆಯಲು ಸದ್ಯ
*Aadhaar card
*Ration card
*Mobile number
*Address proof
*ಈ ಮೇಲಿನ ಎಲ್ಲ ದಾಖಲೆಗಳು ಇದ್ದರೆ ಮಾತ್ರ ನೀವು Ayushman Card ಅನ್ನು ಪಡೆಯಬಹುದಾಗಿದೆ.
*ನಿಮ್ಮ ವಯಸ್ಸು 18 ವರ್ಷಕ್ಕಿಂತ ಮೇಲ್ಪಟ್ಟಿದ್ದರೆ ನೀವು ಈ ಯೋಜನೆಗೆ Online ಅಥವಾ Offline ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…