Image Credit: Original Source
Ayushman Bharat Yojana Latest Update: ಪ್ರಸ್ತುತ ದೇಶದಲ್ಲಿ ಆರ್ಥಿಕವಾಗಿ ದುರ್ಬಲರಾಗಿರುವ ಸಾಕಷ್ಟು ಬಡ ಕುಟುಂಬಗಳಿವೆ. ಬಡ ಜನರು ತಮ್ಮ ಗಂಭೀರ ಖಾಯಿಲೆಗಳಿಗೆ ಸೂಕ್ತ ಚಿಕಿತ್ಸೆಯನ್ನು ಪಡೆಯಲು ಸಾಧ್ಯವಾಗದೆ ಸಾಕಷ್ಟು ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಂತವರಿಗಾಗಿಯೇ ಕೇಂದ್ರ ಸರ್ಕಾರ ಉಚಿತ ಆರೋಗ್ಯ ಯೋಜನೆಯನ್ನು ಪರಿಚಯಿಸಿದೆ.
ಕೇಂದ್ರ ಸರ್ಕಾರ 2018 ರಲ್ಲಿ ದೇಶದ ಬಡ ಜನರಿಗೆ ಉಚಿತ ಚಿಕಿತ್ಸೆಯನ್ನು ನೀಡುವ ಉದ್ದೇಶದಿಂದ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಬಗ್ಗೆ ಈಗಾಗಲೇ ಸಾಕಷ್ಟು ಅಪ್ಡೇಟ್ ಹೊರಬಿದ್ದಿದೆ. ಸದ್ಯ ಕೇಂದ್ರದಿಂದ ಈ ಯೋಜನೆಗೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ಆಯುಷ್ಮನ್ ಭಾರತ್ ಯೋಜನೆಯ ಫಲಾನುಭವಿಗಳು ಉಚಿತ ಚಿಕೆತ್ಸೆ ಪಡೆಯಬೇಕಿದ್ದರೆ ಈ ಕೆಲಸಗಳನ್ನು ಮಾಡುವುದು ಅಗತ್ಯವಾಗಿದೆ.
ಆಯುಷ್ಮನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
Ayushman Bharat ಯೋಜನೆಯ ಮೂಲಕ BPL Ration Card ಹೊಂದಿರುವವರು ಮತ್ತು ರಾಷ್ಟ್ರೀಯ ಭೀಮಾ ಯೋಜನೆಯಲ್ಲಿ ನೋಂದಾಯಿತರಾಗಿರುವ ಫಲಾನುಭವಿಗಳು ವಾರ್ಷಿಕ ಕುಟುಂಬಕ್ಕೆ ತಲಾ 5,00,000 ರೂ. ವರೆಗೂ ನೋಂದಾಯಿತ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆಯನ್ನು ಪಡೆಯಬಹುದು.
APL ಕಾರ್ಡ್ ದಾರರು ಅಥವಾ ಬಿಪಿಎಲ್ ಕಾರ್ಡ್ ಹೊಂದಿಲ್ಲದವರು ಪಾವತಿ ಆಧಾರದ ಮೇಲೆ ಸರ್ಕಾರೀ ಪ್ಯಾಕೇಜ್ ದರದ ಶೇ. 30 ರಷ್ಟು ಚಿಕಿತ್ಸಾ ವೆಚ್ಚ ಲಭ್ಯವಿದ್ದು, ವಾರ್ಷಿಕ ಪ್ರತಿ ಕುಟುಂಬಕ್ಕೆ 1,50,000 ರೂ. ವರೆಗೆ ಪಡೆಯಬಹುದಾಗಿದೆ. ಭೂಮಿಯನ್ನು ಹೊಂದಿಲ್ಲದವರು, ಮನೆ ಇಲ್ಲದವರು, ದಿನಗೂಲಿ ಕಾರ್ಮಿಕರು, ಪರಿಶಿಷ್ಟ ಜಾತಿ ಅಥವಾ ಪಂಗಡದಿಂದ ಬಂದವರು ಆಯುಷ್ಮಾನ್ ಯೋಜನೆಯಡಿ ಪ್ರಯೋಜನವನ್ನು ಪಡೆಯಬಹುದು. ಆದರೆ ನೀವು ಆಯುಷ್ಮಾನ್ ಭಾರತ್ ಯೋಜನೆಯಡಿ ಉಚಿತ ಚಿಕಿತ್ಸೆ ಪಡೆಯಲು ಈ ಕೆಲಸ ಮಾಡುವುದು ಅಗತ್ಯವಾಗಿದೆ.
ಉಚಿತ ಚಿಕಿತ್ಸೆ ಪಡೆಯಲು ಈ ಕೆಲಸ ಮಾಡುವುದು ಅಗತ್ಯ
ಸದ್ಯ ಕೇಂದ್ರದಿಂದ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಸುದ್ದಿಯೊಂದು ಹೊರಬಿದ್ದಿದೆ. ಕೇಂದ್ರ ಸರ್ಕಾರದ ಆರೋಗ್ಯ ಯೋಜನೆ ಅಂದರೆ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ ಲಿಂಕ್ ಮಾಡುವ ಅಗತ್ಯವಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಫಲಾನುಭವಿಗಳು ತಮ್ಮ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ 30 ದಿನಗಳೊಳಗೆ ಲಿಂಕ್ ಮಾಡಬೇಕು ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಕೇಂದ್ರ ಆರೋಗ್ಯ ಯೋಜನೆಯ ಮೂಲಕ ಉಚಿತ ಚಿಕಿತ್ಸೆ ಪಡೆಯಲು ಇಂದೇ ನಿಮ್ಮ CGHS ಫಲಾನುಭವಿ ಐಡಿಯನ್ನು ಆಯುಷ್ಮಾನ್ ಭಾರತ್ ಆರೋಗ್ಯ ಖಾತೆಗೆ ಲಿಂಕ್ ಮಾಡಿಕೊಳ್ಳಿ.
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…
New Rule For Pensioners: ಕೇಂದ್ರ ಮತ್ತು ರಾಜ್ಯ ಸರ್ಕಾರ ಆಗಾಗ ಸರ್ಕಾರೀ ನೌಕರರಿಗೆ ಹಾಗೆಯೆ ಪಿಂಚಣಿದಾರರಿಗೆ ಹೊಸ ಹೊಸ…
RBI New Rule For Bank: ದೇಶದಲ್ಲಿ July 1 ರಿಂದ ಕ್ರೆಡಿಟ್ ಕಾರ್ಡ್ ಬಿಲ್ ಪಾವತಿಯ ನಿಯಮಗಳು ಬದಲಾಗಿವೆ.…