Ayushman Bharath Scheme Free Treatment: ದೇಶದಲ್ಲಿ ಸಾಕಷ್ಟು ಯೋಜನೆಗಳು ಪರಿಚಯವಾಗುತ್ತಿದೆ. ಭಾರತ ಸರ್ಕಾರ ದೇಶದ ಜನತೆಗಾಗಿ ವಿವಿಧ ಕಲ್ಯಾಣ ಯೋಜನೆಯನ್ನು ಪರಿಚಯಿಸುತ್ತಿದೆ. ಆರ್ಥಿಕವಾಗಿ ಹಿಂದುಳಿದವರಿಗೆ ಆರ್ಥಿಕ ಸ್ಥಿರತೆ ನೀಡುವಂತಹ ಸಾಕಷ್ಟು ಯೋಜನೆಗಳನ್ನು ಕೇಂದ್ರ ಪರಿಚಯಿಸಿದೆ.
ಇನ್ನು ಕೇಂದ್ರ ಸರ್ಕಾರ ಉಚಿತ ಆರೋಗ್ಯ ಸೌಲಭ್ಯವನ್ನು ನೀಡುವಂತಹ ಯೋಜನೆಯನ್ನು ಪರಿಚಯಿಸಿದೆ. Ayushman Bharath ಯೋಜನೆಯಡಿ ಅರ್ಹರು ಉಚಿತ ಚಿಕಿತ್ಸೆಯ ಲಾಭವನ್ನು ಪಡೆಯಬಹುದು. ಸದ್ಯ ಆಯುಷ್ಮನ್ ಯೋಜನೆಗೆ ಸಂಬಂಧಿಸಿದಂತೆ ಬಿಗ್ ಅಪ್ಡೇಟ್ ಹೊರಬಿದ್ದಿದೆ.
70 ವರ್ಷ ಮೇಲ್ಪಟ್ಟವರಿಗೆ ಸಿಗಲಿದೆ 5 ಲಕ್ಷ
ದೇಶದ ಬಡ ಜನರ ಆರೋಗ್ಯ ಸುರಕ್ಷತೆಗಾಗಿ ಕೇಂದ್ರ ಸರ್ಕಾರ Pradhan Mantri Ayushman Bharath Yojana ಪರಿಚಯಿಸಿದೆ. ಬಡವರು ಗುಣಮಟ್ಟದ ಆರೋಗ್ಯ ಸೌಲಭ್ಯವನ್ನು ಪಡೆಯಲಿ ಎನ್ನುವ ಉದ್ದೇಶದಿಂದ ಸರ್ಕಾರ ಈ ಯೋಜನೆಯನ್ನು ರೂಪಿಸಲು ನಿರ್ಧರಿಸಿದೆ. ಅರ್ಹ ಫಲಾನುಭವಿಗಳು ವಾರ್ಷಿಕವಾಗಿ ತಲಾ 5,00,000 ರೂ. ಗಳ ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ದೇಶದಲ್ಲಿ 25 ಸಾವಿರ ಜನೌಷಧಿ ಕೇಂದ್ರ ತೆರೆಯುವ ಕೆಲಸವೂ ವೇಗವಾಗಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ನಿರ್ಧಾರ ಕೈಗೊಳ್ಳಲಿದೆ. ಈಗ 70 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲಾ ಹಿರಿಯ ನಾಗರಿಕರು ಸಹ ವ್ಯಾಪ್ತಿಗೆ ಒಳಪಡುತ್ತಾರೆ ಮತ್ತು ಆಯುಷ್ಮಾನ್ ಭಾರತ್ ಯೋಜನೆ ಅಡಿಯಲ್ಲಿ ಉಚಿತ ಚಿಕಿತ್ಸೆಯ ಪ್ರಯೋಜನವನ್ನು ಪಡೆಯುತ್ತಾರೆ ಎಂದು ರಾಷ್ಟ್ರಪತಿ ಹೇಳಿದ್ದಾರೆ. ಇನ್ನುಮುಂದೆ ಆಯುಷ್ಮಾನ್ ಭಾರತ್ ಆರೋಗ್ಯ ವಿಮಾ ಯೋಜನೆಯಡಿ 70 ವರ್ಷ ಮೇಲ್ಪಟ್ಟ ಎಲ್ಲಾ ನಾಗರಿಕರು ಉಚಿತ ಚಿಕಿತ್ಸೆಯನ್ನು ಪಡೆಯಬಹುದಾಗಿದೆ.
ಉಚಿತ ಚಿಕಿತ್ಸೆ ಪಡೆಯಲು ಈ ದಾಖಲೆ ಕಡ್ಡಾಯ
•Aadhaar card
•Ration card
•Mobile number
•Address proof
•Residence Certificate
•Income Certificate
•Photo
ಈ ರೀತಿಯಾಗಿ ನೀವು ಆಯುಷ್ಮನ್ ಕಾರ್ಡ್ ಗೆ ಅರ್ಜಿ ಸಲ್ಲಿಸಬಹುದು
•ಅಧಿಕೃತ ವೆಬ್ ಸೈಟ್ http://beneficiary.nha.gov.in ಲಾಗಿನ್ ಆಗುವ ಮೂಲಕ ಸುಲಭವಾಗಿ ಆಯುಷ್ಮಾನ್ ಕಾರ್ಡ್ ಪಡೆಯಲು ಅರ್ಜಿ ಸಲ್ಲಿಸಬಹುದು.
•ಅಲ್ಲಿ ನೀಡಲಾದ ಫಲಾನುಭವಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಮತ್ತು ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿ. ನಿಮ್ಮ ಮೊಬೈಲ್ ನಲ್ಲಿ ಸ್ವೀಕರಿಸಿದ OTP ಅನ್ನು ಪರಿಶೀಲಿಸಿ.
•ಅಲ್ಲಿ ಆಯುಷ್ಮಾನ್ ಕಾರ್ಡ್ ಗಾಗಿ ರೇಷನ್ ಕಾರ್ಡ್ ಆಯ್ಕೆಯನ್ನು ನೀವು ನೋಡುತ್ತೀರಿ. ನಿಮ್ಮ ಕುಟುಂಬದ ಹೆಸರನ್ನು ಇಲ್ಲಿ ಹುಡುಕಿ ನಂತರ, ಕಾರ್ಡ್ ಅನ್ನು ಯಾರ ಹೆಸರಿನಲ್ಲಿ ಮಾಡಬೇಕೋ ಅವರ ಹೆಸರು ಮತ್ತು ವಿವರಗಳನ್ನು ನಮೂದಿಸಿ.
•ವಿವರಗಳಲ್ಲಿ ಆಧಾರ್ ಸಂಖ್ಯೆಯನ್ನು ಕೇಳಲಾಗುತ್ತದೆ. ಆಧಾರ್ ಸಂಖ್ಯೆಗೆ ಲಿಂಕ್ ಮಾಡಿದ ಮೊಬೈಲ್ ಸಂಖ್ಯೆಗೆ OTP ಬರುತ್ತದೆ. ಅದನ್ನು ಪರಿಶೀಲಿಸಿ. ಸಮ್ಮತಿಯ ನಮೂನೆಯು ತೆರೆಯುತ್ತದೆ, ಅದರ ಎಲ್ಲಾ ಆಯ್ಕೆಗಳನ್ನು ಟಿಕ್ ಮಾಡಿ ಮತ್ತು ಬಲಭಾಗದಲ್ಲಿರುವ Submit ಬಟನ್ ಕ್ಲಿಕ್ ಮಾಡಿದರೆ ಆಯುಷ್ಮನ್ ಕಾರ್ಡ್ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.
Rohith Sharma Latest Update: ಸದ್ಯ T20 ವಿಶ್ವಕಪ್ ನಲ್ಲಿ ಟೀಮ್ ಇಂಡಿಯಾ ಗೆದ್ದಿರುವ ಕಾರಣ ಭಾರತೀಯರು ಸಂತಸದಲ್ಲಿದ್ದರೆ. ದಕ್ಷಿಣ…
Birth And Death Certificate Available In Grama Panchayath: ಭಾರತೀಯ ಪ್ರಜೆಯಾದವರು ಆಧಾರ್ ಕಾರ್ಡ್ ಹಾಗೂ ಪಾನ್ ಕಾರ್ಡ್…
New Criminal Laws Effective From July 1st: ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ Criminal Law…
Astrologer Dinesh Bhatt About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ Darshan ಜೈಲು ಪಾಲಾಗಿರುವ ಬಗ್ಗೆ ಎಲ್ಲರಿಗು…
Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17…
Team India Plan For Winning Trophy: ಜೂನ್ 29 ಶನಿವಾರ ಇಂಡಿಯಾ ಮತ್ತು ಸೌತ್ ಆಫ್ರಿಕಾ ರಣರೋಚಕ ಪಂದ್ಯ…