Yuva Nidhi: ಈ ದಿನದಂದು ಖಾತೆಗೆ ಯುವ ನಿಧಿ ಯೋಜನೆಯ ಹಣ ಜಮಾ, ಸರ್ಕಾರದಿಂದ ಅಧಿಕೃತ ಘೋಷಣೆ

ಯುವ ನಿಧಿ ಯೋಜನೆಯ ಬಗ್ಗೆ ಇನ್ನೊಂದು ಬಿಗ್ ಅಪ್ಡೇಟ್ ನೀಡಿದ ಸರ್ಕಾರ

Yuva Nidhi Money Credit: ರಾಜ್ಯ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಕೊನೆಯ ಯೋಜನೆಯಾದ Yuva Nidhi ಸದ್ಯ ಬಾರಿ ಹೈಲೈಟ್ ಆಗುತ್ತಿದೆ. ಸದ್ಯದಲ್ಲೇ ನಿರುದ್ಯೋಗ ಭತ್ಯೆಯ ಹಣ ಅರ್ಹರ ಕೈ ಸೇರಲಿದೆ. ಏಳೆಂಟು ತಿಂಗಳ ಬಳಿಕ ಇದೀಗ ಯುವ ನಿಧಿ ಬಗ್ಗೆ ಅಪ್ಡೇಟ್ ಹೊರಬಿಳಿಯುತ್ತಿದೆ.

ಈಗಾಗಲೇ ಯೋಜನೆಯ ನೋಂದಣಿ ಕೂಡ ಆರಂಭವಾಗಲಿದ್ದು, ವಿದ್ಯಾವಂತ ನಿರುದ್ಯೋಗಿಗಳು ಸರ್ಕಾರದಿಂದ ಸಹಾಯಧನ ಪಡೆಯಬಹುದಾಗಿದೆ. ಸದ್ಯ ರಾಜ್ಯ ಸರ್ಕಾರದಿಂದ ಯುವ ನಿಧಿ ಯೋಜನೆಯ ಕುರಿತು ಸಾಕಷ್ಟು ಅಪ್ಡೇಟ್ ಹೊರಬಿದ್ದಿದೆ. ಹೌದು ಯುವ ನಿಧಿ ಯೋಜನೆಯ ಹಣ ಯಾವ ಖಾತೆಗೆ ಬರುತ್ತದೆ ಅನ್ನುವುದರ ಬಗ್ಗೆ ಸರ್ಕಾರದಿಂದ ಬಿಗ್ ಅಪ್ಡೇಟ್ ಬಂದಿದೆ.

Documents Required for Karnataka Yuva Nidhi Scheme
Image Credit: Original Source

ವಿದ್ಯಾವಂತ ನಿರುದ್ಯೋಗಿಗಳಿಗೆ ಜನವರಿ 12 ರಂದು ಸಿಗಲಿದೆ ನಿರುದ್ಯೋಗ ಭತ್ಯೆ
ಪದವಿ ವಿದ್ಯಾರ್ಥಿಗಳಾಗಿದ್ದರೆ ರೂ. 3000 ಮಾಸಿಕ ಭತ್ಯೆ, ಡಿಪ್ಲೊಮೊ ವಿದ್ಯಾರ್ಥಿಗಳಾಗಿದ್ದರೆ 1500 ರೂ. ಗಳನ್ನೂ ನೊರುದ್ಯೋಗ ಭತ್ಯೆಯಾಗಿ ಪಡೆಯಬಹುದು. ಇನ್ನು ಡಿ. 26 ರಿಂದಲೇ ಯುವ ನಿಧಿ ಯೋಜನೆ ನೋಂದಣಿ ಕೂಡ ಪ್ರಾರಂಭವಾಗಲಿದೆ. ಡಿ. 26 ರಂದು ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗು ಉಪಮುಖ್ಯಮಂತ್ರಿ ಡಿ. ಕೆ ಶಿವಕುಮಾರ್ ಅವರು ಚಾಲನೆ ನೀಡಲಿದ್ದಾರೆ. ಜನವರಿ 12 ರಿಂದ ಅರ್ಹ ಖಾತೆಗೆ ನಿರುದ್ಯೋಗ ಭತ್ಯೆ ಹಣವನ್ನು ಜಮಾ ಮಾಡಲಾಗುತ್ತದೆ ಎಂದು ರಾಜ್ಯ ಸರ್ಕಾರ ಅಧಿಕೃತ ಘೋಷಣೆ ಹೊರಡಿಸಿದೆ.

ಯುವ ನಿಧಿಗೆ ಅರ್ಜಿ ಸಲ್ಲಿಸುವ ವಿಧಾನ ಹೇಗೆ
ಯುವ ನಿಧಿ ಯೋಜನೆಯ ಅರ್ಹ ಯುವಕ ಯುವತಿಯರು ಸರ್ಕಾರದ ಸೇವಾ ಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಆಧಾರ್ ಕಾರ್ಡ್, ಆದಾಯ ಪ್ರಮಾಣಪತ್ರ, ಶಿಕ್ಷಣ ಸಂಸ್ಥೆಯಿಂದ ಪಡೆದ ಪ್ರಮಾಣ ಪತ್ರ ಹಾಗೂ ಅಂಕಪಟ್ಟಿ, ಬ್ಯಾಂಕ್ ಖಾತೆಯ ವಿವರ ಇಮೈಲ್ ಐಡಿ, ಮೊಬೈಲ್ ಸಂಖ್ಯೆ, ಭಾವಚಿತ್ರ, ಪದವಿ ಹಾಗೂ ಡಿಪ್ಲೊಮೊ ಮುಗಿಸಿದ ಕೊನೆಯ ವರ್ಷದ ಅಂಕಪಟ್ಟಿ ದಾಖಲೆಯೊಂದಿಗೆ ಅರ್ಜಿ ಸಲ್ಲಿಸಬಹುದು.

ಬ್ಯಾಂಕ್ ಖಾತೆಗೆ KYC ಆಗಿರುವುದು ಕಡ್ಡಾಯವಾಗಿದೆ. ಇನ್ನು ಸುಳ್ಳು ಅರ್ಜಿ ಸಲ್ಲಿಸಿ ನಿರುದ್ಯೋಗ ಭತ್ಯೆಯನ್ನು ಪಡೆದರೆ ಪಡೆದ ಅಷ್ಟು ಹಣವನ್ನು ವಾಪಾಸ್ ಪಡೆಯಲಾಗುತ್ತದೆ ಎಂದು ಸರ್ಕಾರ ಎಚ್ಚರಿಸಿದೆ. ಅಲ್ಲದೆ ಅಂತವರ ವಿರುದ್ಧ ಕಠಿಣ ಕ್ರಮ ಕೂಡ ಕೈಗೊಳ್ಳಾಗುತ್ತದೆ.

Join Nadunudi News WhatsApp Group

Yuva Nidhi Conditions
Image Credit: Original Source

ಇಂತವರಿಗೆ ನಿರುದ್ಯೋಗ ಭತ್ಯೆ ಹಣ ಜಮಾ ಆಗುವುದಿಲ್ಲ
•ಪದವಿ ಅಥವಾ ಡಿಪ್ಲೊಮಾ ಉತ್ತೀರ್ಣರಾದ ನಂತರ ಉನ್ನತ ಶಿಕ್ಷಣ ಪಡೆಯುತ್ತಿರುವ ಯುವಕರು.

•ಅಪ್ರೆಂಟಿಸ್ ವೇತನದ ಫಲಾನುಭವಿ.

•ಸರ್ಕಾರಿ ಅಥವಾ ಖಾಸಗಿ ವಲಯದಲ್ಲಿ ಉದ್ಯೋಗದಲ್ಲಿರುವ ಯುವಕರು.

•ಸ್ವಯಂ ಉದ್ಯೋಗದಲ್ಲಿರುವ ಯುವಕರು.

•ಸರ್ಕಾರದ ಇತರ ಆರ್ಥಿಕ ನೆರವು ಯೋಜನೆಯ ಫಲಾನುಭವಿ.

Karnataka Yuva Nidhi Latest Update
Image Credit: Original Source

ಯುವ ನಿಧಿ ಯೋಜನೆಗೆ ಸರ್ಕಾರದ ಷರತ್ತುಗಳೇನು..?
~2022 -23 ನೇ ಸಾಲಿನಲ್ಲಿ ಉತ್ತೀರ್ಣರಾಗಿ 6 ತಿಂಗಳು ಉದ್ಯೋಗ ಇಲ್ಲದವರಿಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯ ಲಾಭ ದೊರೆಯಲಿದೆ.

~ಎರಡು ವರ್ಷಗಳು ಮಾತ್ರ ಯುವ ನಿಧಿ ಯೋಜನೆಯಡಿ ನಿರುದ್ಯೋಗ ಭತ್ಯೆ ಸಿಗಲಿದೆ.

~ಎರಡು ವರ್ಷದೊಳಗೆ ಅಭ್ಯರ್ಥಿಗೆ ಉದ್ಯೋಗ ದೊರೆತರೆ ಮಾಸಿಕ ಹಣ ಸ್ಥಗಿತಗೊಳ್ಳ್ಳಲಿದೆ.

~ನಿರುದ್ಯೋಗ ಭತ್ಯೆ ಪಡೆಯುತ್ತಿರುವ ಅಭ್ಯರ್ಥಿಯು ಮಧ್ಯದಲ್ಲಿ ಕೆಲಸವನ್ನು ಪಡೆದರೆ ಸರ್ಕಾರಕ್ಕೆ ಮಾಹಿತಿ ತಿಳಿಸಬೇಕು.

~ನಕಲಿ ಮಾಹಿತಿ ನೀಡಿ ಸರ್ಕಾರದಿಂದ ನಿರುದ್ಯೋಗ ಭತ್ಯೆ ಪಡೆದರೆ ಅಂತವರಿಗೆ ಸರ್ಕಾರ ಬಾರಿ ದಂಡ ವಿಧಿಸಲಿದೆ.

Join Nadunudi News WhatsApp Group