Compensation: ರಾಜ್ಯದ ರೈತರ ಖಾತೆ 2000 ರೂಪಾಯಿ ಜಮಾ ಮಾಡಲು ಆದೇಶ, ಜಾರಿಗೆ ಬಂತು ಇನ್ನೊಂದು ಯೋಜನೆ.
ರೈತರ ಬೆಳೆ ಪರಿಹಾರದ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ.
Crop Compensation Money For Farmers: ರಾಜ್ಯ ಸರ್ಕಾರ ಈ ಬಾರಿ ಹೆಚ್ಚು ಹೆಚ್ಚು ಯೋಜನೆಯನ್ನು ನುಷ್ಠಾನಗೊಳಿಸುತಿದೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಸಮಯದಲ್ಲಿ ಘೋಷಿಸಿದ ಐದು ಗ್ಯಾರಂಟಿ ಯೋಜನೆಗಳ ಜೊತೆಗೆ ಸಾಕಷ್ಟು ಯೋಜನೆಗಳನ್ನು ಪರಿಚಯಿಸುವುದಾಗಿ ಘೋಷಣೆ ಹೊರಡಿಸಿದೆ. ಈ ಬಾರಿ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ಹೆಚ್ಚಿನ ಒತ್ತು ನೀಡುತ್ತಿದೆ. ಸರ್ಕಾರ ರೈತರಿಗೆ ಹೆಚ್ಚಿನ ಸೌಲಭ್ಯವನ್ನು ನೀಡಲು ವಿವಿಧ ಯೋಜನೆಯನ್ನು ಪರಿಚಯಿಸುತ್ತಿದೆ.
![Crop Compensation For Farmers](https://nadunudi.in/wp-content/uploads/2023/12/Crop-Compensation-For-Farmers.jpg)
ರೈತರಿಗೆ ಬೆಳೆ ಪರಿಹಾರ ನೀಡಲು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಈ ಬಾರಿ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿರುವುದು ಎಲ್ಲರಿಗು ತಿಳಿದೇ ಇದೆ. ಮಳೆಯ ಅಭಾವದಿಂದ ರಾಜ್ಯದಲ್ಲಿ ಹೆಚ್ಚಿನ ನಷ್ಟವನ್ನು ರೈತರು ಅನುಭವಿಸುವಂತಾಗಿದೆ. ರೈತರು ಬೆಲೆ ಹಾನಿಯಿಂದಾಗಿ ಲಕ್ಷಾಂತರ ನಷ್ಟವನ್ನು ಅನುಭವಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ರೈತರಿಗೆ ಬರ ಪರಿಹಾರ ನೀಡಲು ಯೋಜನೆ ಹೂಡಿದೆ. ರೈತರಿಗೆ ಬೆಲೆ ಪರಿಹಾರ ಬಿಡುಗಡೆ ಮಾಡುವ ಬಗ್ಗೆ ಸಚಿವಾ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದೆ. ರೈತರ ಬೆಳೆ ಪರಿಹಾರದ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ.
ರಾಜ್ಯ ಸರ್ಕಾರದಿಂದ 2000 ರೂ. ಬೆಳೆ ಪರಿಹಾರ ಘೋಷಣೆ
ಕೇಂದ್ರ ಸರ್ಕಾರಕ್ಕೆ ರಾಜ್ಯದ ರೈತರಿಗೆ ಬೆಳೆ ಪರಿಹಾರ ನೀಡುವಂತೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಇನ್ನು ಈ ಬಗ್ಗೆ ಪ್ರಾಥಮಿಕ ಸಭೆ ಕೂಡ ನಡೆಸದೆ ಇರುವ ಕಾರಣ ರಾಜ್ಯ ಸರ್ಕಾರ ಈ ಬಗ್ಗೆ ಕ್ರಮ ಕೈಗೊಂಡಿದೆ. ಕೇಂದ್ರದಿಂದ ಬೆಳೆ ಪರಿಹಾರ ಬಿಡುಗಡೆ ತಡವಾಗಬಹುದು. ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಬೆಳೆಯ ಪರಿಹಾರಕ್ಕೆ ಮೊದಲ ಕಂತಿನ ಹಣವನ್ನು ಬಿಡುಗಡೆ ಮಾಡಿದೆ ಎಂದು ಸಿದ್ದರಾಮಯ್ಯ ಅವರು ಮಾಹಿತಿ ನೀಡಿದ್ದಾರೆ.
![Crop Compensation Amount For Farmers](https://nadunudi.in/wp-content/uploads/2023/12/Crop-Compensation-Amount-For-Farmers.jpg)
ಮೊದಲೇ ಕಂತಿನಲ್ಲಿ ರೂ. 2000 ವರೆಗೆ ಬೆಳೆ ಪರಿಹಾರ ಬಿಡುಗಡೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಮೊದಲ ಕಂತಿನಲ್ಲಿ ಅರ್ಹ ರೈತರಿಗೆ ತಲಾ 2000 ರೂ. ಬೆಳೆ ಪರಿಹಾರ ನೀಡಲು ನಿರ್ಧರಿಸಿದ್ದೇವೆ ಎಂದು ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ. ಸದ್ಯ ರಾಜ್ಯದ ರೈತರು ಮೊದಲ ಕಂತಿನ ಬೆಳೆ ಪರಿಹಾರವನ್ನು ಪಡೆಯಬಹುದು.