Crop Compensation Amount Release: ರಾಜ್ಯ ಮತ್ತು ಕೇಂದ್ರ ಸರ್ಕಾರ ರೈತರ ಪರ ನಿಲ್ಲುತ್ತಿದೆ. ರಾಜ್ಯದ ರೈತರಿಗಾಗಿ ಸರ್ಕಾರ ಆಗಾಗ ವಿಶೇಷ ಯೋಜನೆಯನ್ನು ಪರಿಚಯಿಸುತ್ತಿದೆ. ರೈತರ ಕೃಷಿಗೆ ಯಾವುದೇ ಸಮಸ್ಯೆ ಆಗಬಾರದು ಎನ್ನುವ ನಿಟ್ಟಿನಲ್ಲಿ ಸರ್ಕಾರ ಈಗಾಗಲೇ ವಿಶೇಷ ಯೋಜನೆಗಳನ್ನು ಕೂಡ ಪರಿಚಯಿಸಿದೆ.
ಇನ್ನು ಸರ್ಕಾರದ ಯೋಜನೆಗಳ ಲಾಭವನ್ನು ಪಡೆಯುವ ಮೂಲಕ ರೈತರು ತಮ್ಮ ಕೃಷಿಯಲ್ಲಿ ಬೆಳವಣಿಗೆಯನ್ನು ಕಾಣುತ್ತಿದ್ದಾರೆ. ಇನ್ನು ರೈತರಿಗಾಗಿ ವಿವಿಧ ಯೋಜನೆಯನ್ನು ಪರಿಚಯಿಸಿರುವ ಸರ್ಕಾರ ರೈತರಿಗೆ ಬೆಳೆ ನಷ್ಟ ಉಂಟಾದಾಗ ಪರಿಹಾರ ಮೊತ್ತವನ್ನು ನೀಡಲು ನಿರ್ಧರಿಸಿದೆ. ಸದ್ಯ ರಾಜ್ಯ ಸರ್ಕಾರ ಬೆಳೆ ಹಾನಿಯಿಂದ ನಷ್ಟಕ್ಕೆ ಒಳಗಾದ ರೈತರಿಗೆ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಿದೆ.
ಬೆಳೆ ನಷ್ಟದಿಂದ ಕಂಗಾಲಾದ ರೈತರಿಗೆ ಬಂಪರ್ ಗುಡ್ ನ್ಯೂಸ್
ಬೆಳೆ ನಷ್ಟದಿಂದ ಕಂಗಾಲಾಗಿರುವ ರಾಜ್ಯದ ರೈತರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ. ರೈತರ ಜೀವನೋಪಾಯದ ನಷ್ಟವನ್ನು ಸರಿದೂಗಿಸಲು ಸರ್ಕಾರ ಇದೀಗ ಮಹತ್ವದ ನಿರ್ಧಾರ ಕೈಗೊಂಡಿದೆ. ಬೆಳೆ ಹಾನಿಯಿಂದಾಗಿ ನಷ್ಟ ಅನುಭವಿಸುತ್ತಿರುವ ರೈತರಿಗೆ ತಲಾ 3 ಸಾವಿರ ರೂ. ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಬೆಳೆ ನಷ್ಟದಿಂದ ಸಮಸ್ಯೆಗೆ ಒಳಗಾಗಿರುವ ರೈತರ ಖಾತೆಗೆ 3000 ರೂ. ಗಳನ್ನೂ ಜಮಾ ಮಾಡಲಾಗುವುದು ಎಂದು ಸಚಿವರು ಅಧಿಕೃತ ಆದೇಶವನ್ನು ನೀಡಿದ್ದಾರೆ. ರಾಜ್ಯದ ರೈತರು ಶೀಘ್ರದಲ್ಲೇ ತಮ್ಮ ಬೆಳೆ ಪರಿಹಾರ ಮೊತ್ತವನ್ನು ಪಡೆಯಲಿದ್ದಾರೆ.
ರೈತರ ಖಾತೆಗೆ 3000 ರೂ. ಬಿಡುಗಡೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಚಿವರು, ರಾಜ್ಯದಲ್ಲಿ ಬರಗಾಲದಿಂದ ಸಣ್ಣ ಮತ್ತು ಅತಿ ಸಣ್ಣ ರೈತರು ವಾರ್ಷಿಕ ಬೆಳೆ ನಷ್ಟದಿಂದ ಬಳಲುತ್ತಿದ್ದು, 18 ಲಕ್ಷ ರೈತರಿಗೆ ತಲಾ 3 ಸಾವಿರ ರೂ. ಪರಿಹಾರ ವಿತರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದರು. ರಾಜ್ಯ ಸರಕಾರ ಎಸ್ಡಿಆರ್ಎಫ್ ನಿಧಿಯಲ್ಲಿ 40 ಲಕ್ಷ ರೈತರಿಗೆ 2,451 ಕೋಟಿ ರೂ. ಬರ ಪರಿಹಾರ ನೀಡಿದ್ದು, ಮುಂದಿನ ಒಂದು ವಾರದಲ್ಲಿ ರೈತರಿಗೆ 3 ಸಾವಿರ ರೂ. ಹಣ ಜಮಾ ಮಾಡಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದಾರೆ.
Pavitra Gowda Divorce Story: ಸದ್ಯ ರಾಜ್ಯದೆಲ್ಲೆಡೆ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ರೇಣುಕಾಸ್ವಾಮಿ…
Rohith Sharma New Record In T20 world Cup 2024: ಪ್ರಸ್ತುತ ನಡೆಯುತ್ತಿರುವ T20 ವಿಶ್ವಕಪ್ ಪಂದ್ಯದ ಬಗ್ಗೆ…
New Rule From July 2024: ಸದ್ಯ 2024 ರ ಆರು ತಿಂಗಳು ಮುಗಿಯುತ್ತಿದೆ. 2024 ರ ಪ್ರತಿ ತಿಂಗಳಿನಲ್ಲಿ…
Ananth Ambani Marriage Invitation: ಸದ್ಯ ಮುಕೇಶ್ ಅಂಬಾನಿ (Mukesh ambani) ಪುತ್ರನ ಮದುವೆಯ ದಿನಾಂಕ ಹತ್ತಿರವಾಗುತ್ತಿದೆ. ಅದೆಷ್ಟೋ ಕೋಟಿ…
Today Gold Rate Hike: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖಮಾಡುತ್ತಿದೆ. ಚಿನ್ನದ ಬೆಲೆ ಏರಿಕೆ…
Monty Panesar About Virat Kohli: ಸದ್ಯ ಟೀಮ್ ಇಂಡಿಯಾ ಫೈನಲ್ ತಲುಪಿದೆ. ಇಂದು ಟೀಮ್ ಇಂಡಿಯಾ ಫೈನಲ್ ಪಂದ್ಯವಾಡಲಿದೆ.…