Image Credit: Original Source
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ 1 ರಿಂದ ದೇಶಾದ್ಯಂತ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿಯಾಗಿವೆ.
ದೇಶದಲ್ಲಿ ಜಾರಿಯಾಗಿರುವ ಈ ಹೊಸ ಮೂರು ಕ್ರಿಮಿನಲ್ ಕಾನೂನುಗಳು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ಗೆ ಮತ್ತಷ್ಟು ಸಂಕಷ್ಟವನ್ನು ನೀಡಲಿದೆ. ದರ್ಶನ್ ಅಪರಾಧಿ ಎಂದು ಸಾಭೀತಾದರೆ ಹೊಸ ಕ್ರಿಮಿನಲ್ ಕಾನೂನಿನ ಪ್ರಕಾರ ದರ್ಶನ್ ಮರಣ ದಂಡನೆಗೆ ಗುರಿಯಾಗುತ್ತಾರಾ…? ಎನ್ನುವ ಆತಂಕ ಇದೀಗ ಅಭಿಮಾನಿಗಳಲ್ಲಿ ಮೂಡಿದೆ.
ದರ್ಶನ್ ಗೆ ಮರಣದಂಡನೆ ಆಗುತ್ತಾ…?
ಕಳೆದ ವರ್ಷ ಡಿಸೆಂಬರ್ ನಲ್ಲಿ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಅಂಗೀಕರಿಸಲಾಯಿತು. ಈಗಿರುವ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರೊಸೀಜರ್ ಕೋಡ್ ಮತ್ತು ಎವಿಡೆನ್ಸ್ ಆಕ್ಟ್ ಬದಲಿಗೆ ಈ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರಲಾಗುತ್ತಿದೆ. ಭಾರತೀಯ ದಂಡ ಸಂಹಿತೆ, ಭಾರತೀಯ ನಾಗರಿಕ ಸಂರಕ್ಷಣಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆ ಮೂರು ಹೊಸ ಕ್ರಿಮಿನಲ್ ಕಾನೂನುಗಳಾಗಿವೆ.
ಫೆಬ್ರವರಿ 2024 ರಲ್ಲಿ ಈ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿದೆ ಎಂದು ಹೇಳಲಾಗಿದೆ. ಇದರ ಪ್ರಕಾರ, ಜುಲೈ 1 ರಿಂದ ಜಾರಿಯೋಗೆ ತರಲಾಗಿದೆ. ದರ್ಶನ್ ಮೇಲಿನ ಆರೋಪ ಸಾಬೀತಾದರೆ ಮತ್ತಷ್ಟು ಸಂಕಷ್ಟ ಗ್ಯಾರಂಟಿ. ಏಕೆಂದರೆ, ಹೊಸ ಕ್ರಿಮಿನಲ್ ಕಾನೂನು ಈಗಿರುವದಕ್ಕಿಂತ ಸಾಕಷ್ಟು ಬದಲಾವಣೆಗಳನ್ನು ತಂದಿದೆ.
ಇನ್ನಷ್ಟು ಬಿಗಿಯಾದ ಪ್ರಕರಣ, ಆತಂಕದಲ್ಲಿ ಡಿ ಬಾಸ್ ಅಭಿಮಾನಿಗಳು
ಹೊಸ ಕ್ರಿಮಿನಲ್ ಕಾನೂನು ಭಯೋತ್ಪಾದಕರ ಆಸ್ತಿ ಮುಟ್ಟುಗೋಲು, ಅತ್ಯಾಚಾರ ಮಾಡಿದವರಿಗೆ ಮರಣದಂಡನೆ, ದೇಶದ್ರೋಹ, ವಿಧ್ವಂಸಕ ಕೃತ್ಯ, ಪ್ರತ್ಯೇಕತಾವಾದಿ ಚಟುವಟಿಕೆಗಳು ಮತ್ತು ಸಾಮೂಹಿಕ ಹತ್ಯೆಗಳಿಗೆ ಶಿಕ್ಷೆಯನ್ನು ಒಳಗೊಂಡಿರುತ್ತದೆ. ಇನ್ನು ಗುಂಪು ಹತ್ಯೆಯ ಶಿಕ್ಷೆಯ ಪ್ರಮಾಣ ಬೇರೆಯಾಗಲಿದೆ. ರೇಣುಕಾಸ್ವಾಮಿ ಹತ್ಯೆಯಲ್ಲಿ ದರ್ಶನ್ ಮತ್ತವರ ಗ್ಯಾಂಗ್ ಆರೋಪಿಗಳು.
ಹೀಗಾಗಿ ಪೊಲೀಸರು ಇದೊಂದು ಗುಂಪು ಹತ್ಯೆ ಎಂದು ಪರಿಗಣಿಸಿದರೆ ದರ್ಶನ್ ಗೆ ಸಂಕಷ್ಟ ಎದುರಾಗಬಹುದು. ಉದಾಹರಣೆಗೆ, ಹೊಸ ಕ್ರಿಮಿನಲ್ ಕಾನೂನಿನಲ್ಲಿ ಗುಂಪು ಹತ್ಯೆ ಮತ್ತು ದ್ವೇಷದ ಅಪರಾಧಗಳನ್ನು ಪ್ರತ್ಯೇಕ ರೀತಿಯ ಕೊಲೆಗಳಾಗಿ ವಿಂಗಡಿಸಲಾಗಿದೆ.ಈ ಕಾಯಿದೆಯ ಪ್ರಕಾರ, ಗುಂಪು ಹತ್ಯೆಯಂತಹ ಅಪರಾಧಗಳಿಗೆ ಮರಣದಂಡನೆ ಶಿಕ್ಷೆಯಾಗುತ್ತದೆ.
ಈ ನಿಟ್ಟಿನಲ್ಲಿ ದರ್ಶನ್ ಅಪರಾಧಿ ಎಂದು ಸಾಬೀತಾದರೆ ಮರಣದಂಡನೆ ವಿಧಿಸುವುದಂತೂ ಖಚಿತ ಎನ್ನಲಾಗುತ್ತಿದೆ. ಹೊಸದಾಗಿ ಜಾರಿಗೆ ತರಲಾದ ಕಾನೂನಿನ ಪ್ರಕಾರ, ತನಿಖಾಧಿಕಾರಿಗಳು ಅಪರಾಧದ ದೃಶ್ಯವನ್ನು ವೀಡಿಯೊ ಮಾಡಬೇಕು. ಅಲ್ಲದೆ, ಪ್ರಕರಣದ ವಿಚಾರಣೆ ಮುಗಿದ ನಂತರ 45 ದಿನಗಳಲ್ಲಿ ತೀರ್ಪು ನೀಡಬೇಕು. ಸಾಮೂಹಿಕ ಹತ್ಯೆ, ಸಾಮೂಹಿಕ ಅತ್ಯಾಚಾರ ಮತ್ತು ದರೋಡೆಯಂತಹ ಪ್ರಕರಣಗಳನ್ನು ದಾಖಲಿಸಲು ಇದುವರೆಗೆ ಯಾವುದೇ ನಿರ್ದಿಷ್ಟ ವಿಭಾಗ ಇರಲಿಲ್ಲ. ಈ ಹೊಸ ವ್ಯವಸ್ಥೆಯಲ್ಲಿ ಇರಲಿದೆ ಎಂದು ಕೇಂದ್ರ ತಿಳಿಸಿದೆ. ಈ ವೇಳೆ ಕೊಲೆ ಪ್ರಕರಣದಲ್ಲೂ ಗರಿಷ್ಠ ಗಲ್ಲು ಶಿಕ್ಷೆ ನೀಡಲು ಅವಕಾಶವಿದೆ ಎನ್ನಲಾಗಿದೆ.
Board Exam Cancelled For 5, 8, And 9th Students: 2024 -25 ಶೈಕ್ಷಣಿಕ ವರ್ಷದಲ್ಲಿ SSLC ಮತ್ತು…
Prohibition Of Mobile Use In School And College: ಸದ್ಯ ಎಲ್ಲ ವಯೋಮಾನದವರು ಕೂಡ ಮೊಬೈಲ್ ಅನ್ನು ಬಳಸುತ್ತಾರೆ.…
Vijayalakshmi Clarification About Darshan And Pavitra Gowda Relationship: ರೇಣುಕಾಸ್ವಾಮಿ ಕೊಲೆ ವಿಚಾರವಾಗಿ ದರ್ಶನ್ ಜಾಳು ಸೇರುತ್ತಿದ್ದಂತೆ ದರ್ಶನ್…
Team India Dance Video Viral: ಜೂನ್ 29 ಶನಿವಾರ ನಡೆದ India ಮತ್ತು South Africa ಪಂದ್ಯದಲ್ಲಿ ಟೀಮ್…
Gold Rate Hike Today: ದೇಶದಾದ್ಯಂತ ಚಿನ್ನದ ಬೆಲೆಯಲ್ಲಿ (Gold Rate) ಐತಿಹಾಸಿಕ ಏರಿಕೆ ಕಂಡು ಬರುತ್ತಿದೆ. ಚಿನ್ನದ ಬೇಡಿಕೆ…
Darshan And Pavithra Gowda Meet: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣ ದಿನಕೊಂದು ತಿರುವು ಪಡೆದುಕೊಳ್ಳುತ್ತಿದೆ. ತಮ್ಮ ಗೆಳತಿಗೆ…