Darshan Arrest: ನಟ ದರ್ಶನ್ ಅರೆಸ್ಟ್ ….! ಈ ಕಾರಣಕ್ಕೆ ಬೆಳ್ಳಂಬೆಳಿಗ್ಗೆ ನಟ ದರ್ಶನ್ ಅರೆಸ್ಟ್

ಬೆಳ್ಳಂಬೆಳಿಗ್ಗೆ ನಟ ದರ್ಶನ್ ಅವರನ್ನ ಅರೆಸ್ಟ್ ಮಾಡಿದ ಪೊಲೀಸರು

Darshan Arrested In Murder Case: ಸ್ಯಾಂಡಲ್ ವುಡ್ ನ ಸ್ಟಾರ್ ನಟ Darshan ಸಿನಿಮಾಗಳ ಹೊರತಾಗಿ ಆಗಾಗ ಹೊಸ ಹೊಸ ವಿವಾದಕ್ಕೆ ಸಿಕ್ಕಿಹಾಕಿಕೊಳ್ಳುತ್ತಾರೆ. ದರ್ಶನ್ ಅವರಿಗೆ ವಿವಾದಗಳು ಹೊಸತೇನಲ್ಲ. ಸದ್ಯ ನಟ ದರ್ಶನ್ ಅವರು ಗಂಭೀರ ಆರೋಪದಲ್ಲಿ ಸಿಲುಕಿದ್ದಾರೆ. ಸದ್ಯ ದರ್ಶನ್ ಅರೆಸ್ಟ್ ಆಗಿದ್ದು, ಸ್ಯಾಂಡಲ್ ವುಡ್ ಹಾಗೂ ಅಭಿಮಾನಿಗಳಿಗೆ ಶಾಕ್ ಎದುರಾಗಿದೆ.

ಈ ಹಿಂದೆ ಕೂಡ ನಟ ದರ್ಶನ್ ಹಾಗೂ ಪವಿತ್ರ ಗೌಡ ಅವರ ವಿಚಾರವಾಗಿ ಸಾಕಷ್ಟು ಸುದ್ದಿಗಳು ವೈರಲ್ ಆಗಿದ್ದವು. ಸದ್ಯ ನಟ ದರ್ಶನ ಪವಿತ್ರ ಗೌಡ ವಿಚಾರವಾಗಿ ಅರೆಸ್ಟ್ ಆಗಿರುವ ಬಗ್ಗೆ ಮಾಹಿತಿ ಲಭಿಸಿದೆ. ಅಷ್ಟಕ್ಕೂ ಆಗಿದ್ದೇನು…? ಎನ್ನುವ ಬಗ್ಗೆ ತಿಳಿಯಲು ಈ ಲೇಖನವನ್ನು ಓದಿ.

Darshan Arrested In Murder Case
Image Credit: Filmibeat

ನಟ ದರ್ಶನ್ ಅರೆಸ್ಟ್ ….!
ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಬಂಧಿಸಲಾಗಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ರೇಣುಕಾ ಸ್ವಾಮಿಯನ್ನು ಹತ್ಯೆ ಮಾಡಲಾಗಿತ್ತು. ನಟ ದರ್ಶನ್ ಸೂಚನೆ ಮೇರೆಗೆ ಈ ಕೊಲೆ ನಡೆದಿದೆ ಎನ್ನಲಾಗಿದೆ. ಈ ಪ್ರಕರಣ ಸಂಚಲನ ಮೂಡಿಸಿದೆ. ನಟ ದರ್ಶನ್ ಅವರನ್ನು ಮೈಸೂರಿನ ಫಾರ್ಮ್ ಹೌಸ್ ನಲ್ಲಿ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪವಿತ್ರಾ ಗೌಡ ದರ್ಶನ್ ಜೊತೆ ಕ್ಲೋಸ್ ಆಗಿದ್ದಾರೆ. ದರ್ಶನ್ ಜೊತೆ ಇರೋ ಫೋಟೋಗಳನ್ನು ಪವಿತ್ರಾ ಗೌಡ ಹಂಚಿಕೊಂಡಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರು ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದರು. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿ ಕೊಲೆಯಾಗಿದ್ದರು. ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ನಾಲ್ವರು ಆರೋಪಿಗಳು ಒಪ್ಪಿಕೊಂಡಿದ್ದಾರೆ. ಘಟನೆ ವೇಳೆ ದರ್ಶನ್ ಕೂಡ ಇದ್ದರು ಎನ್ನಲಾಗಿದೆ.

Join Nadunudi News WhatsApp Group

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡಿದ್ದಕ್ಕೆ ನಡೆದಿದೆ ಕೊಲೆ
ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕಾಗಿ ರೇಣುಕಾ ಸ್ವಾಮಿ ಕೊಲೆ ನಡೆದಿದೆ ಎನ್ನುವ ಬಗ್ಗೆ ವರದಿಯಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಲಾಗಿದೆ. ಜೂನ್ 9 ರಂದು ಈ ಘಟನೆ ನಡೆದಿದ್ದು, ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತರಲಾಗಿತ್ತು. ಅವರನ್ನು ವಿನಯ್ ಎಂಬುವರಿಗೆ ಸೇರಿದ ಶೆಡ್‌ ನಲ್ಲಿ ಇರಿಸಲಾಗಿತ್ತು. ಈ ವೇಳೆ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆದಿದೆ. 4 ಜನ ಸೇರಿ ಹಲ್ಲೆ ನಡೆಸಿದ ತಂಡದಲ್ಲಿ ದರ್ಶನ್ ಇದ್ದರು ಎಂಬ ಮಾಹಿತಿ ಇದೆ. ಮೃತ ದೇಹವನ್ನು ಕೊಂದು ಮೋರಿಗೆ ಎಸೆಯಲಾಯಿತು. ವಿಜಯನಗರ ಎಸಿಪಿ ಚಂದನ್ ತಂಡ ದರ್ಶನ್ ಅವರನ್ನು ವಶಕ್ಕೆ ಪಡೆದಿದೆ.

Darshan Arrested latest News
Image Credit: News 18

Join Nadunudi News WhatsApp Group