Image Credit: Original Source
Darshan Wig New Update: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ಪೊಲೀಸ್ ಕಸ್ಟಡಿಯಲ್ಲಿರುವ ಬಗ್ಗೆ ಎಲ್ಲರಿಗು ತಿಳಿದೇ ಇದೆ. ನಟ ದರ್ಶನ್ ಸೇರಿದಂತೆ ಒಟ್ಟು 17 ಮಂದಿ ಆರೋಪಿಗಳನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಆರೋಪಿಗಳನ್ನು ಸದ್ಯ ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ.
ಇನ್ನು ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳು ಕಳೆದ 9 ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿದ್ದರೆ. ಪ್ರಕರಣದ ತನಿಖೆಯ ವೇಳೆ ಹತ್ಯೆಗೆ ಸಂಬಂಧಪಟ್ಟ ಅನೇಕ ಅಪ್ಡೇಟ್ ಲಭಿಸಿದೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಆರೋಗ್ಯ ತಪಾಸಣೆಗೆ ಕರೆದೊಯ್ಯಲಾಗಿದೆ. ಈ ವೇಳೆ ನಟ ದರ್ಶನ್ ಬಗ್ಗೆ ಇನ್ನು ತಿಳಿದಿರದ ಒಂದು ಅಚ್ಚರಿ ಮಾಹಿತಿ ಹೊರಬಿದ್ದಿದೆ.
ದರ್ಶನ್ ತಲೆಯಲ್ಲಿ ಕೂದಲಿಲ್ವಾ….?
ಆರೋಪಿಗಳ ವಿಚಾರಣೆ ನಾನಾ ರೀತಿಯಲ್ಲಿ ನಡೆಯುತ್ತಿದ್ದು, ಆರೋಪಿಗಳಿಗೆ ಪ್ರಕರಣಕ್ಕೆ ಸಂಬಂಧಿಸಿದ ಎಲ್ಲ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ. ಸದ್ಯ ಎಲ್ಲಾ ಆರೋಪಿಗಳನ್ನು ಆರೋಗ್ಯ ತಪಾಸಣೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆತರಲಾಗಿದೆ. ಅರೋಗ್ಯ ತಪಾಸಣೆಯ ಸಲುವಾಗಿ ನಟ ದರ್ಶನ್ ತಲೆಗೆ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆದಿದ್ದಾರೆ ಎನ್ನಲಾಗಿದೆ. ವಿಗ್ ತೆಗಿಸಿದ ವಿಚಾರ ಕೇಳುತ್ತಿದ್ದಂತೆ ದರ್ಶನ್ ತಲೆಯಲ್ಲಿ ಕೂದಲಿಲ್ವಾ….? ಎನ್ನುವ ಪ್ರಶ್ನೆ ಕೇಳಿಬರುತ್ತಿದೆ. ದರ್ಶನ್ ಅವರ ಕೂದಲಿನ ಮಾದರಿಯನ್ನು ಸಂಗ್ರಹಿಸಲು ಪೊಲೀಸರು ಅವರ ವಿಗ್ ಅನ್ನು ತೆಗೆದುಹಾಕಿದ್ದಾರೆ ಎಂದು ವರದಿಯಾಗಿದೆ.
ದರ್ಶನ್ ಹಾಕಿದ ವಿಗ್ ಕಿತ್ತು ಹಾಕಿದ ಪೊಲೀಸರು
ಕಳೆದ ಒಂಬತ್ತು ದಿನಗಳಿಂದ ಪೊಲೀಸ್ ಕಸ್ಟಡಿಯಲ್ಲಿರುವ ಎಲ್ಲ ಆರೋಪಿಗಳನ್ನು ನಾಳೆ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎ-1 ಆರೋಪಿ ಪವಿತ್ರಾ ಗೌಡ, ಎ-2 ಆರೋಪಿ ನಟ ದರ್ಶನ್ ಸೇರಿದಂತೆ ಎಲ್ಲಾ ಆರೋಪಿಗಳನ್ನು ವೈದ್ಯಕೀಯ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇನ್ನು ಎಲ್ಲ ಆರೋಪಿಗಳಂತೆ ದರ್ಶನ್ ಕೂದಲಿನ ಸ್ಯಾಂಪಲ್ ಸಂಗ್ರಹಿಸಲು ದರ್ಶನ್ ಹಾಕಿದ್ದ ವಿಗ್ ಅನ್ನು ಪೊಲೀಸರು ತೆಗೆದಿದ್ದಾರೆ ಎಂದು ವರದಿಯಾಗಿದೆ. ಆರೋಪಿ ದರ್ಶನ್ ಅವರ ರಕ್ತ ಮತ್ತು ಕೂದಲಿನ ಮಾದರಿಯನ್ನು ಪೊಲೀಸರು ಪಡೆದುಕೊಂಡಿದ್ದಾರೆ ಎನ್ನಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಡಿಎನ್ ಎ ಪರೀಕ್ಷೆ ಆರಂಭಿಸಿದ್ದಾರೆ. ಪ್ರಕರಣದ ತನಿಖೆ ಆದಷ್ಟು ಮುಗಿದಿದ್ದು, ರೇಣುಕಾಸ್ವಾಮಿ ಹತ್ಯೆ ಪ್ರಕರಣ ಯಾವ ತಿರುವು ಪಡೆಯುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.
Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…
BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…
KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…
Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…
New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…