ಫ್ಯಾಮಿಲಿ ಜೊತೆಗೆ ಗೋವಾಕ್ಕೆ ಪ್ರವಾಸಕ್ಕೆ ತೆರಳಿದ್ದಂತ ನಟ ದಿಗಂತ್, ಸಮುದ್ರ ತಟದಲ್ಲಿ ಸೋಮರ್ ಸಾಲ್ಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದ ಪರಿಣಾಮ, ಅಪಘಾತಗೊಂಡು ಬೆನ್ನು ಮೂಳೆ, ಕಾಲಿಗೆ ಬಲವಾದಂತ ಪೆಟ್ಟುಗೊಂಡು, ಗಂಭೀರ ಸ್ಥಿತಿಯನ್ನು ತಲುಪಿದ್ದಾರೆ.ಈ ಹಿನ್ನಲೆಯಲ್ಲಿ ಅವರನ್ನು ಗೋವಾದಿಂದ ಇಂದು ಮಧ್ಯಾಹ್ನವೇ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮಾಡಲಾಗಿದೆ. ಗೋವಾದಲ್ಲಿ ಅಪಘಾತಕ್ಕೆ ಒಳಗಾದಂತ ನಟ ದಿಗಂತ್ ಅವರನ್ನು, ಕೂಡಲೇ ಸಮೀಪದ ಆಸ್ಪತ್ರೆಗೆ ದಾಖಲಿಸಿ, ಇಂದು ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ.ಸೊಮಾರ್ ಸಾಲ್ಟ್ ಮಾಡುವಾಗ ಸ್ವಲ್ಪ ಎತ್ತರದಿಂದ ಮಾಡಿದರೆ ಏನೂ ಆಗುತ್ತಿರಲಿಲ್ಲ.
ದಿಗಂತ ಅವರು ಸ್ವಲ್ಪ ಕೆಳಗಿನಿಂದ ಸೊಮಾರ್ ಸಾಲ್ಟ್ ಮಾಡಿದ್ದಾರೆ ಎನಿಸುತ್ತದೆ. ಈ ಬಳಿಕ, ಹೆಚ್ಚಿನ ಚಿಕಿತ್ಸೆಗಾಗಿ ಇದೀಗ, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ಕರೆತರಲಾಗುತ್ತಿದೆ ಎಂಬುದಾಗಿ ಅವರ ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ. ಅಂದಹಾಗೇ ನಟ ದಿಗಂತ್ ಗೋವಾಕ್ಕೆ ಪತ್ನಿ ಐಂದ್ರಿತಾ ರೈ ಜೊತೆಗೆ ಫ್ಯಾಮಿಲಿ ಟ್ರಿಪ್ ತೆರಳಿದ್ದರು. ಈ ಸಂದರ್ಭದಲ್ಲಿ ಸಮುದ್ರದಲ್ಲಿ ಸೋಮರ್ ಸಾಲ್ಟ್ ಮಾಡುತ್ತಿದ್ದಂತ ಸಂದರ್ಭದಲ್ಲಿ ಅಪಘಾತಗೊಂಡಿದ್ದರು.
ಸ್ಯಾಂಡಲ್ವುಡ್ ನಟ ದಿಗಂತ್ ಮಂಚಾಲೆ ಅವರ ಕುತ್ತಿಗೆ ಪೆಟಟಾಗಿದ್ದು, ಕೆಲವೇ ಗಂಟೆಗಳಲ್ಲಿ ಏರ್ಲಿಫ್ಟ್ ಮೂಲಕ ಮೂಲಕ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಿದ್ದಾರೆ. ಈ ವೇಳೆ ದಿಗಂತ್ಗೆ ಎನು ಆಗಿಲ್ಲ, ಆತಂಕ ಪಡಬೇಡಿ ಎಂದು ಅಭಿಮಾನಿಗಳಿಗೆ ದಿಗಂತ್ ಕುಟುಂಬಸ್ಥರು ಮನವಿ ಮಾಡಿದ್ದಾರೆ ಇದೀಗ ಕುಟುಂಬ ಸಮೇತ ಗೋವಾ ಪ್ರವಾಸಕ್ಕೆ ಹೋದ ಸಂದರ್ಭದಲ್ಲಿ ಸಮುದ್ರ ತಟದಲ್ಲಿ ಸೊಮರ್ ಸಾಲ್ಟ್ ಹೊಡೆಯುವ ವೇಳೆ ಮಿಸ್ಸಾಗಿ ದಿಗಂತ್ ಕುತ್ತಿಗೆಗೆ ಪೆಟ್ಟು ಬಿದ್ದು, ಅಪಘಾತವಾಗಿತ್ತು.
ಆದರೆ ಗೋವಾದಲ್ಲಿ ಪ್ರಥಮ ಚಿಕಿತ್ಸೆ ನೀಡಲಾಗುತ್ತಿದೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕರೆತರಲಾಗುತ್ತಿದೆ. ಪತ್ನಿ ಐಂದ್ರಿತಾ ರೇ ಕೂಡ ದಿಗಂತ್ ಜೊತೆ ಇದ್ದಾರೆ.ಫ್ಯಾಮಿಲಿ ಜೊತೆ ಗೋವಾಗೆ ಟ್ರಪ್ ಹೋಗಿದ್ದ ವೇಳೆಯಲ್ಲಿ ದಿಗಂತ್ ಕುತ್ತಿಗೆಗೆ ಬಲವಾದ ಪೆಟ್ಟು ಬಿದ್ದಿರುವ ಬಗ್ಗೆ ದಿಗಂತ್ ಆಪ್ತರಿಂದ ಮಾಹಿತಿ ಲಭ್ಯವಾಗಿದ್ದು, ಕೆಲವೇ ಗಂಟೆಗಳಲ್ಲಿ ಏರ್ ಲಿಫ್ಟ್ ಮೂಲಕ ಬೆಂಗಳೂರಿನ ಮಣಿಪಾಲ್ಗೆ ದಿಗಂತ್ ಅವರನ್ನು ಕುಟುಂಬಸ್ಥರು ಕರೆತಂದಿದ್ದಾರೆ. ದಿಗಂತ್ಗೆ ಆರಾಮ ಆಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.