Marriage Offer: ನಮ್ಮ ಪಕ್ಷ ಬಂದರೆ ಅವಿವಾಹಿತ ಪುರುಷರಿಗೆ ಮದುವೆ ಭಾಗ್ಯ, ಪುರುಷರಿಗೆ ಆಫರ್ ಘೋಷಣೆ.

ಅವಿವಾಹಿತ ಪುರುಷರಿಗೆ ಮದುವೆ ಭಾಗ್ಯ ಘೋಷಣೆ ಮಾಡಿದ ಪಕ್ಷೇತರ ಅಭ್ಯರ್ಥಿ.

Non-Party Candidate Manifesto: ರಾಜ್ಯ ವಿಧಾನಸಭಾ ಚುನಾವಣೆ (Assembly Election) ಹತ್ತಿರವಾಗುತ್ತಿದೆ. ವಿಧಾನಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜಕೀಯ ಮುಖಂಡರು ತಮ್ಮ ತಮ್ಮ ರಾಜಕೀಯ ಪ್ರಚಾರ ಕಾರ್ಯದಲ್ಲಿ ಬ್ಯುಸಿ ಆಗಿದ್ದಾರೆ.ರಾಜ್ಯ ವಿಧಾನಸಭಾ ಚುನಾವಣೆಯ ಹಿನ್ನೆಲೆ ರಾಜಕೀಯ ಮುಖಂಡರು ಮತಭೇಟೆಯಲ್ಲಿ ಬ್ಯುಸಿ ಆಗಿದ್ದಾರೆ.

non party candidate manifesto
Image Credit: moneycontrol

ವಿಶೇಷ ಪ್ರಣಾಳಿಕೆ ಬಿಡುಗಡೆ ಮಾಡಿದ ಪಕ್ಷೇತರ ಅಭ್ಯರ್ಥಿ
ವಿವಿಧ ರೀತಿಯ ಯೋಜನೆಗಳನ್ನು ಜಾರಿಗೊಳಿಸುವುದಾಗಿ ರಾಜಕೀಯ ಮುಖಂಡರು ಭರವಸೆ ನೀಡಿದ್ದಾರೆ. ಇದೀಗ ಬೆಳಗಾವಿ ಜಿಲ್ಲೆಯ ಪಕ್ಷೇತರ ಅಭ್ಯರ್ಥಿಯ ಬಿಡುಗಡೆ ಮಾಡಿರುವ ಪ್ರಣಾಳಿಕೆ ಎಲ್ಲರ ಗಮನ ಸೆಳೆದಿದೆ. ಸೋಶಿಯಲ್ ಮೀಡಿಯಾದಲ್ಲಿ ಈ ಪ್ರಣಾಳಿಕೆ ಸಾಕಷ್ಟು ವೈರಲ್ ಆಗಿವೆ. ಪಕ್ಷೇತರ ಅಭ್ಯರ್ಥಿಯ ಪ್ರಣಾಳಿಕೆಯಲ್ಲಿ ಏನಿದೆ ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.

ನಮ್ಮ ಪಕ್ಷ ಬಂದರೆ ಅವಿವಾಹಿತ ಪುರುಷರಿಗೆ ಮದುವೆ ಭಾಗ್ಯ
ವಧು -ವರರಿಗೆ ಮದುವೆಯ ಭಾಗ್ಯವನ್ನು ಘೋಷಿಸುವ ಮೂಲಕ ಪುರುಷರಿಗೆ ವಿಶೇಷ ಆಫರ್ ಅನ್ನು ಘೋಷಣೆ ಮಾಡಿದ್ದಾರೆ. ಬೆಳಗಾವಿ ಜಿಲ್ಲೆ ಅರಂಬಾವಿ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಗುರುಪುತ್ರ ಕೆಂಪಣ್ಣ ಕೂಳೂರು ಹಾಗೂ ಗೋಕಾಕ ಪಕ್ಷೇತರ ಅಭ್ಯರ್ಥಿ ಪುಂಡಲೀಕ ಕುಳ್ಳೂರು ವಧು ವರರ ಮದುವೆ ಭಾಗ್ಯವನ್ನು ಘೋಷಣೆ ಮಾಡಿದ್ದಾರೆ.

Karnataka Assembly Election Offer.
Image Credit: vijaykarnataka

ಪಕ್ಷೇತರರಾಗಿ ಅರಭಾವಿ ಹಾಗೂ ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಈ ಸಹೋದರರು ಸ್ಪರ್ಧೆಗೆ ಇಳಿದಿದ್ದಾರೆ ಎನ್ನುವ ಮಾಹಿತಿ ತಿಳಿದುಬಂದಿದೆ. ಈ ಇಬ್ಬರು ಅಭ್ಯರ್ಥಿಗಳು ಎರಡು ಮತಕ್ಷೇತ್ರದ ಮದುವೆಯಾಗದ ಯುವಕರಿಗೆ ಮದುವೆ ಮಾಡಿಸುವ ಭರವಸೆಯನ್ನು ಪ್ರಣಾಳಿಕೆಯ ಮೂಲಕ ನೀಡಿದ್ದಾರೆ. ಇದೀಗ ಸೋಶಿಯಲ್ ಮೀಡಿಯಾದಲ್ಲಿ ಈ ಅಭ್ಯರ್ಥಿಗಳ ಪ್ರಣಾಳಿಕೆ ವೈರಲ್ ಆಗುತ್ತಿದೆ.

Join Nadunudi News WhatsApp Group

Join Nadunudi News WhatsApp Group