Image Credit: Original Source
Employees Working Hour New Update: ಕೇಂದ್ರದಲ್ಲಿ ಅಧಿಕಾರಕ್ಕೆ ಬಂದಿರುವ ಎನ್ ಡಿಎ ಸರ್ಕಾರ ಸರ್ಕಾರಿ ನೌಕರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ತಡವಾಗಿ ಬರುವ ಹಾಗೂ ಬೇಗ ಹೊರಡುವ ನೌಕರರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ. ಅನೇಕ ಅಧಿಕಾರಿಗಳು/ಸಿಬ್ಬಂದಿಗಳು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆ (AEBAS) ಮೂಲಕ ಹಾಜರಾತಿಯನ್ನು ನೋಂದಾಯಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿ, ಈ ಅಧಿಸೂಚನೆಯನ್ನು ಹೊರಡಿಸಲಾಗಿದೆ.
ಅನೇಕ ಉದ್ಯೋಗಿಗಳು ನಿಯಮಿತವಾಗಿ ತಡವಾಗಿ ಬರುವುದನ್ನು ಗಮನಿಸಲಾಗಿದೆ. ಅಧಿಕಾರಿಗಳು/ಸಿಬ್ಬಂದಿಗಳು ತಡವಾಗಿ ಬರುತ್ತಿದ್ದು, ಪ್ರತಿದಿನ ಬೇಗ ಕಚೇರಿ ಬಿಡುತ್ತಿರುವುದನ್ನು ಸಂಬಂಧಪಟ್ಟ ಅಧಿಕಾರಿಗಳು ಗಮನಿಸಿದ್ದಾರೆ. ಹೀಗಾಗಿ ಸರ್ಕಾರೀ ನೌಕರರಿಗೆ ಕೇಂದ್ರ ಸರ್ಕಾರ ಹೊಸ ನಿಯಮವನ್ನು ಪರಿಚಯಿಸಿದೆ.
ಇನ್ಮುಂದೆ ಸರ್ಕಾರೀ ನೌಕರರು ಕಡ್ಡಾಯವಾಗಿ ಈ ಸಮಯಕ್ಕೆ ಕೆಲಸಕ್ಕೆ ಬರಬೇಕು
ಇನ್ನು ಮುಂದೆ ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರುವಂತೆ ಸೂಚನೆ ನೀಡಲಾಗಿದೆ. ಇದು 15 ನಿಮಿಷಗಳ ಕಾಲಾವಕಾಶವನ್ನು ಒಳಗೊಂಡಿರುತ್ತದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ (DoPT) ಸುತ್ತೋಲೆ ಹೊರಡಿಸಿದೆ. ಆಧಾರ್-ಸಕ್ರಿಯಗೊಳಿಸಿದ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಬಳಸಿಕೊಂಡು ಬೆಳಿಗ್ಗೆ 9:15 ರೊಳಗೆ ತಮ್ಮ ಕಚೇರಿಗಳನ್ನು ತಲುಪಲು ಮತ್ತು ಅವರ ಹಾಜರಾತಿಯನ್ನು ಹಾಕಲು ನೌಕರರಿಗೆ ನಿರ್ದೇಶಿಸಿದೆ.
ಈ ತಪ್ಪು ಮಾಡಿದರೆ ನೌಕರರ ಅರ್ಧ ದಿನದ ರಜೆ ಕಟ್
ಉನ್ನತ ಅಧಿಕಾರಿಗಳು ಸೇರಿದಂತೆ ಎಲ್ಲ ಅಧಿಕಾರಿಗಳು ಬೆಳಗ್ಗೆ 9:15 ರೊಳಗೆ ಕೆಲಸಕ್ಕೆ ಬರದಿದ್ದರೆ ಅರ್ಧ ದಿನದ ಕ್ಯಾಶ್ಯುವಲ್ ರಜೆ ಕಡಿತಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ. ಕೇಂದ್ರ ಸರ್ಕಾರಿ ಕಚೇರಿಗಳು ಕಡ್ಡಾಯವಾಗಿ ಬೆಳಗ್ಗೆ 9 ರಿಂದ ಸಂಜೆ 5.30 ರ ವರೆಗೆ ಕಾರ್ಯನಿರ್ವಹಿಸಲಿವೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರಿ ನೌಕರರು ತಡವಾಗಿ ಆಗಮಿಸುವುದು ಮತ್ತು ಬೇಗ ನಿರ್ಗಮಿಸುವುದನ್ನು ಗಂಭೀರವಾಗಿ ಪರಿಗಣಿಸಿ ತಡೆಯಬೇಕು ಎಂದು ಕೇಂದ್ರ ಸರ್ಕಾರ ಹೇಳಿದೆ. ಈ ನಿಟ್ಟಿನಲ್ಲಿ ಇನ್ನುಮುಂದೆ ನಿಯಮಗಳು ಕಠಿಣಗೊಳ್ಳಲಿದೆ.
Pavitra Gowda Divorce Story: ಸದ್ಯ ರಾಜ್ಯದೆಲ್ಲೆಡೆ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಬಾರಿ ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ರೇಣುಕಾಸ್ವಾಮಿ…
Rohith Sharma New Record In T20 world Cup 2024: ಪ್ರಸ್ತುತ ನಡೆಯುತ್ತಿರುವ T20 ವಿಶ್ವಕಪ್ ಪಂದ್ಯದ ಬಗ್ಗೆ…
New Rule From July 2024: ಸದ್ಯ 2024 ರ ಆರು ತಿಂಗಳು ಮುಗಿಯುತ್ತಿದೆ. 2024 ರ ಪ್ರತಿ ತಿಂಗಳಿನಲ್ಲಿ…
Ananth Ambani Marriage Invitation: ಸದ್ಯ ಮುಕೇಶ್ ಅಂಬಾನಿ (Mukesh ambani) ಪುತ್ರನ ಮದುವೆಯ ದಿನಾಂಕ ಹತ್ತಿರವಾಗುತ್ತಿದೆ. ಅದೆಷ್ಟೋ ಕೋಟಿ…
Today Gold Rate Hike: ದೇಶಿಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ದಿನದಿಂದ ದಿನಕ್ಕೆ ಏರಿಕೆಯತ್ತ ಮುಖಮಾಡುತ್ತಿದೆ. ಚಿನ್ನದ ಬೆಲೆ ಏರಿಕೆ…
Monty Panesar About Virat Kohli: ಸದ್ಯ ಟೀಮ್ ಇಂಡಿಯಾ ಫೈನಲ್ ತಲುಪಿದೆ. ಇಂದು ಟೀಮ್ ಇಂಡಿಯಾ ಫೈನಲ್ ಪಂದ್ಯವಾಡಲಿದೆ.…