Ads By Google

Forest Land: ಸರ್ಕಾರೀ ಜಾಗದಲ್ಲಿ ಉಳುಮೆ ಮಾಡುತ್ತಿರುವವರಿಗೆ ಬಂಪರ್ ಗುಡ್ ನ್ಯೂಸ್, ರೈತನೇ ಭೂಮಿಯ ಒಡೆಯ

forest land for farmers

Image Credit: Original Source

Ads By Google

Forest Land In India: ಕೃಷಿ ಮಾಡುವ ರೈತರಿಗೆ ಸರ್ಕಾರದಿಂದ ಶುಭಸುದ್ದಿ ಬಂದಿದೆ. ಕೃಷಿಕರಿಗಾಗಿ ರಾಜ್ಯ ಸರ್ಕಾರ ಈ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದು, ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರಿಗೆ ಈ ನಿಯಮ ಬಹಳ ಸಹಾಯಕ ಆಗಿದ್ದು, ಈ ಕುರಿತು ಸರ್ಕಾರ ಹೊಸ ಆದೇಶವನ್ನು ಹೊರಡಿಸಿದೆ. ಇನ್ನುಮುಂದೆ ಕೃಷಿ ಮಾಡುವ ಅರಣ್ಯ ಭೂಮಿಯು ಕೃಷಿ ಮಾಡುತ್ತಿರುವ ರೈತರ ಜಮೀನಾಗಿರುತ್ತದೆ ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ಹೀಗಿದೆ.

Image Credit: Vijaykarnataka

ಕೃಷಿ ಮಾಡುತ್ತಿರುವ ಅರಣ್ಯ ಭೂಮಿಯ ಕುರಿತು ಹೊಸ ನಿಯಮ ಜಾರಿ

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವ ರೈತರು ಇನ್ನು ಮುಂದೆ ಆ ಜಮೀನನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ. ಈ ಕುರಿತು ರಾಜ್ಯ ಸರ್ಕಾರ ಹೊಸ ಆದೇಶವನ್ನು ಹೊರಡಿಸಿದ್ದು, ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಿರುವ 13,750 ಪ್ರಕರಣಗಳ 31,864 ಎಕರೆ ಭೂಮಿ ಇದೆ, ಅರ್ಜಿ ಸಲ್ಲಿಸಿದ 7 ಸಾವಿರ ರೈತರಿಗೆ ಹಕ್ಕುಪತ್ರ ವಿತರಣೆ ಮಾಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ತಿಳಿಸಿದ್ದಾರೆ.

Image Credit: Kannada News Today

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲಾಗುವುದು

ಅರಣ್ಯ ಭೂಮಿಯಲ್ಲಿ ಕೃಷಿ ಮಾಡುತ್ತಿರುವವರಿಗೆ ಸಂಬಂಧಿಸಿದಂತೆ ಈ ಪೈಕಿ 7 ಸಾವಿರ ಪ್ರಕರಣಗಳಿಗೆ ಹಕ್ಕು ಪತ್ರ ನೀಡಲಾಗುವುದು. ಆದರೆ 3 ಎಕರೆಗಿಂತ ಹೆಚ್ಚಿನ ಭೂಮಿ ನೀಡುವುದಿಲ್ಲ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಅರಣ್ಯ ಇಲಾಖೆಗೆ ಸೇರಿದ ಭೂಮಿಯಲ್ಲಿ ಅರಣ್ಯ ಸಂರಕ್ಷಣಾ ಕಾಯಿದೆ 1980 ರ ಜಾರಿಗೂ ಮುನ್ನ ಕೃಷಿ ಮಾಡುತ್ತಿರುವವರಿಗೆ ಹಕ್ಕು ಪತ್ರ ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ಜನವರಿ ಒಳಗಾಗಿ 7 ಸಾವಿರ ಜನರಿಗೆ ಹಕ್ಕು ಪತ್ರ ನೀಡಲಾಗುವುದು ಎಂದು ಅರಣ್ಯ ಸಚಿವ ಈಶ್ವರ್‌ ಖಂಡ್ರೆ ಅವರು ಮಾಹಿತಿ ನೀಡಿದ್ದಾರೆ.

Ads By Google
Nagarathna Santhosh: Nagarathna Santhosh has done Degree in Commerce and has knowledge about News field. He started writing in 2019. Since then he has been associated with Nadunudi. In case of any complain or feedback, please contact me @nadunudi.in