Congress Promises: ಯಾರು ಯಾರಿಗೆ ಸಿಗಲಿದೆ ಕಾಂಗ್ರೆಸ್ ನೀಡಿದ ಐದು ಭರವಸೆಯ ಭಾಗ್ಯ, ಸ್ಪಷ್ಟನೆ ಕೊಟ್ಟ ಪರಮೇಶ್ವರ್.
ಜಿ. ಪರಮೇಶ್ವರ್ ಅವರು ಕಾಂಗ್ರೆಸ್ ನೀಡಿದ ಐದು ಭರವಸೆಯ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.
G. Parameshwara About Congress Promises: ರಾಜ್ಯದಲ್ಲಿ ಇದೀಗ ಕಾಂಗ್ರೆಸ್ (Congress) ತನ್ನ ಅಧಿಕಾರವನ್ನು ಗಿಟ್ಟಿಸಿಕೊಂಡಿದೆ. 135 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಸರ್ಕಾರ ರಚನೆಯ ಸಿದ್ಧತೆಯಲ್ಲಿದೆ. ಇನ್ನು ಇನ್ನು ಚುನಾವಣೆಯ ಸಲುವಾಗಿ ವಿವಿಧ ಪಕ್ಷಗಳು ಜನರಿಗೆ ಸಾಕಷ್ಟು ಭರವಸೆಗಳನ್ನು ನೀಡಿತ್ತು. ಅದರಲ್ಲೂ ಕಾಂಗ್ರೆಸ್ ಸರ್ಕಾರ ಐದು ಭರವಸೆಗಳನ್ನು ನೀಡುವ ಘೋಷಣೆ ಹೊರಡಿಸಿತ್ತು.
![G. Parameshwara About Congress Promises](https://nadunudi.in/wp-content/uploads/2023/05/congress-promises.png)
ಪ್ರಸ್ತುತ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಿದೆ. ಹಾಗಾಗಿ ರಾಜ್ಯದ ಜನತೆಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್ ನೀಡಿರುವ ಲಭ್ಯತೆಗಳ ಬಗ್ಗೆ ಕುತೂಹಲರಾಗಿದ್ದಾರೆ. ಕಾಂಗ್ರೆಸ್ ಘೋಷಿಸಿರುವ ಐದು ಭರವಸೆಗಳ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ. ಇದೀಗ ಕಾಂಗ್ರೆಸ್ ನೀಡಿರುವ ಐದು ಭರವಸೆಗಳ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಜಿ ಪರಮೇಶ್ವರ್ (G. Parameshwara) ಮಾತನಾಡಿದ್ದಾರೆ.
ಐದು ಭರವಸೆಗಳಿಗೆ ಕಂಡೀಷನ್ ಇರುತ್ತದೆ ಎಂದ ಕಾಂಗ್ರೆಸ್ ಅಧ್ಯಕ್ಷ
ಕರ್ನಾಟಕದ ಏಳನೇ ಮುಖ್ಯಮಂತ್ರಿಯಾಗಿದ್ದ ಜಿ ಪರಮೇಶ್ವರ್ ಅವರು ಇದೀಗ ಕಾಂಗ್ರೆಸ್ ಘೋಷಣೆ ಮಾಡಿದ ಐದು ಕಂಡೀಷನ್ ಬಗ್ಗೆ ಮಾತನಾಡಿದ್ದಾರೆ. ಐದು ಕಂಡೀಷನ್ ಗಳಿಗೆ ನಾವು ಬದ್ಧರಾಗಿರುತ್ತೇವೆ ಎಂದು ಹೇಳಿದ್ದಾರೆ. 200 ಯೂನಿಟ್ ವಿದ್ಯುಚ್ಛಕ್ತಿ ನೀಡುವುದನ್ನು ಪ್ರಾಯೋಗಿಕವಾಗಿ ಇಲಾಖೆ ಜೊತೆ ಸೇರಿ ಚರ್ಚೆ ಮಾಡುತ್ತೇವೆ ಎಂದಿದ್ದಾರೆ.
![G. Parameshwar clarified the five promises given by the Congress.](https://nadunudi.in/wp-content/uploads/2023/05/congress.png)
ಯಾರಿಗೆ ಲಭ್ಯವಾಗಲಿದೆ ಕಾಂಗ್ರೆಸ್ ನ ಐದು ಭರವಸೆಗಳು
ಪ್ರತಿ ಮನೆಯ ಒಡತಿಗೆ ಮಾಸಿಕ 2000 ವೇತನ, ಮಹಿಳೆಯರಿಗೆ ಉಚಿತ ಬಸ್ ಪಾಸ್, ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂ. ವೇತನ, ವರ್ಷಕ್ಕೆ ಐದು ಗ್ಯಾಸ್ ಸಿಲಿಂಡರ್ ನೀಡುವ ಐದು ಗ್ಯಾರೆಂಟಿಗಳಿಗೆ ಕಂಡಿಷನ್ ಇರುತ್ತದೆ, ಕಂಡೀಷನ್ ಇಲ್ಲದೆ ಏನು ಆಗುವುದಿಲ್ಲ ಎಂದು ಎಂದು ಪರಮೇಶ್ವರ್ ಅವರು ಹೇಳಿದ್ದಾರೆ.
ಹಾಗೆಯೆ ರಾಜ್ಯದ ಮುಖ್ಯಮಂತ್ರಿಯ ಆಯ್ಕೆಯ ಬಗ್ಗೆ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿಯ ಆಯ್ಕೆ ಆದ ಮೇಲೆ ಐದು ಭರವಸೆಗಳ ಕಂಡೀಷನ್ ಬಗ್ಗೆ ಮಾಹಿತಿ ನೀಡಲಾಗುತ್ತದೆ ಎಂದು ಕಾಂಗ್ರೆಸ್ ಅಧ್ಯಕ್ಷ ಜಿ ಪರಮೇಶ್ವರ್ ಮಾತನಾಡಿದ್ದಾರೆ.