Image Credit: Original Source
Gruha Lakshmi 8th Installment: ಗೃಹ ಲಕ್ಷ್ಮಿ ಯೋಜನೆಗೆ ಸಂಭಂದಿಸಿದಂತೆ ರಾಜ್ಯ ಸರ್ಕಾರ ದಿನಕ್ಕೊಂದು ಅಪ್ಡೇಟ್ ಬಿಡುಗಡೆ ಮಾಡುತ್ತಿದೆ. ಯೋಜನೆಯ ಲಾಭವನ್ನು ಎಲ್ಲಾ ಅರ್ಹರಿಗೂ ತಲುಪಿಸಲು ಸರ್ಕಾರ ಸಾಕಷ್ಟು ಬದಲಾವಣೆ ಮಾಡುತ್ತಿದೆ.
ಈವರೆಗೆ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 7 ಕಂತುಗಳ ಹಣವನ್ನು ಬಿಡಿಗಡೆ ಮಾಡಿದೆ. ಇದೀಗ 8 ನೇ ಕಂತಿನ ಹಣದ ಬಿಡುಗಡೆಗೆ ಸಮಯ ಬಂದಿದೆ. ರಾಜ್ಯ ಸರ್ಕಾರ 8 ನೇ ಕಂತಿನ ಹಣದ ಬಿಡುಗಡೆಗೆ ದಿನಾಂಕ ನಿಗದಿ ಮಾಡಿದ್ದು, ಯೋಜನೆಯ ಲಾಭ ಪಡೆಯಲು ಫಲಾನುಭವಿಗಳು ಈ ಎಲ್ಲಾ ಕೆಲಸಗಳನ್ನು ಮಾಡುವುದು ಅಗತ್ಯವಾಗಿದೆ.
ಗೃಹಲಕ್ಷ್ಮಿ 8 ನೇ ಕಂತಿನ ಹಣ ಬಿಡುಗಡೆಗೆ ದಿನಾಂಕ ನಿಗದಿ
ಈಗಾಗಲೇ ಸರ್ಕಾರ ಗೃಹಲಕ್ಷ್ಮಿ ಯೋಜನೆಯ ಸಮಸ್ಯೆಯೇ ಪರಿಹಾರಕ್ಕೆ ಕಂಡುಕೊಳ್ಳವು ವಿವಿಧ ರೀತಿಯ ಕ್ರಮ ಕೈಗೊಂಡಿದೆ. ಆದರು ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ ಎನ್ನಬಹುದು. ಇನ್ನು ಯೋಜನೆಯ ಲಾಭ ಯಾರ ಖಾತೆಗೆ ಜಮಾ ಆಗುತ್ತಿದೆಯೋ ಅಂತವರಿಗೆ ಸರ್ಕಾರ ಮಾಸಿಕ ಹಣ ಬಿಡುಗಡೆ ಮಾಡುತ್ತಲೇ ಇದೆ.
ಸದ್ಯ ರಾಜ್ಯ ಸರ್ಕಾರ 8ನೇ ಕಂತಿನ ಹಣ ಬಿಡುಗಡೆಗೆ ದಿನಾಂಕವನ್ನು ನಿಗದಿ ಮಾಡಿದೆ. ಏಪ್ರಿಲ್ ಮೊದಲ ಅಥವಾ ಎರಡನೇ ವಾರದಲ್ಲಿ ಫಲಾನುಬಾಹಿಗಳು 8 ನೇ ಕಂತಿನ ಹಣ ಜಮಾ ಆಗಲಿದೆ. ಗೃಹ ಲಕ್ಷ್ಮಿ ಯೋಜನೆಯಡಿ ಮಹಿಳೆಯರು ಇಲ್ಲಿಯವರೆಗೆ 16,000 ಹಣವನ್ನು ಪಡೆದಿದ್ದಾರೆ. ಇನ್ನು ಯಾರು ಹಣವನ್ನು ಪಡೆದಿಲ್ಲವೋ ಅಂತವರು ಆದಷ್ಟು ಬೇಗ ತಮ್ಮ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ಯೋಜನೆಯ ಫಲಾನುಭವಿಗಳು 8 ನೇ ಕಂತಿನ ಹಣ ಪಡೆಯಲು ತಕ್ಷಣ ಈ ಕೆಲಸ ಮಾಡಬೇಕಾಗಿದೆ.
ಗೃಹಲಕ್ಷ್ಮಿ ಯೋಜನೆಯ 8 ನೇ ಕಂತಿನ ಹಣ ಬಂದಿಲ್ವಾ…? ತಕ್ಷಣ ಈ ಕೆಲಸ ಮಾಡಿ
•ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ KYC ಅಪ್ಡೇಟ್ ಅನ್ನು ಕಡ್ಡಾಯಗಳಿಸಿದೆ. KYC ನವೀಕರಣ ಆಗದ ಮಹಿಳೆಯರ ಖಾತೆಗೆ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ. ನೀಡಿರುವ ಬ್ಯಾಂಕ್ ಖಾತೆಗೆ ನೀವು ಮತ್ತೆ KYC ಮಾಡಬೇಕು. ಅಂದರೆ ಬ್ಯಾಂಕ್ ಖಾತೆಗೆ ಮತ್ತೊಮ್ಮೆ ಆಧಾರ್ ಸೀಡಿಂಗ್ ಮಾಡಿ ನಂತರ ಹಣ ಜಮೆಯಾಗುತ್ತದೆ.
•ಇನ್ನು KYC Update ನ ಜೊತೆಗೆ NPCI Link ಕೂಡ ಅಗತ್ಯವಾಗಿದೆ. ಫಲಾನುಭವಿಗಳು ತಕ್ಷಣ NPCI ಲಿಂಕ್ ಮಾಡಬೇಕಿದೆ. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳಬಹುದು.
•ಇನ್ನು ನಿಮ್ಮ ಮೊಬೈಲ್ ನಂಬರ್ ಗೆ ಬ್ಯಾಂಕ್ ಅಕೌಂಟ್ ಹಗೂ ಆಧಾರ್ ಲಿಂಕ್ ಆಗುವುದು ಕೂಡ ಮುಖ್ಯವಾಗಿದೆ. ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಆಗದೆ ಇದ್ದರೆ ನಿಮ್ಮ ಖಾತೆಗೆ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವ ಎನ್ನುವ ಬಗ್ಗೆ ನಿಮಗೆ ಸಂದೇಶ ರವಾನೆ ಆಗುವುದಿಲ್ಲ.
•ಇನ್ನು ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿದ ಬ್ಯಾಂಕ್ ಅಕೌಂಟ್ ಸರಿಯಾಗಿದೆಯೇ ಎನ್ನುವುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ನಿಮ್ಮ ಖಾತೆ ಕ್ಲೋಸ್ ಆಗಿದ್ದರೆ ಹಣ ಜಮಾ ಆಗುವುದು ಕಷ್ಟ.
Post Office Monthly Income Scheme: ಅಂಚೆ ಇಲಾಖೆಯ ವಿವಿಧ ಯೋಜನೆಗಳಲ್ಲಿ ಮಾಸಿಕ ಸಣ್ಣ ಮೊತ್ತದ ಹೂಡಿಕೆಯಲ್ಲಿ ದೊಡ್ಡ ಮೊತ್ತದ…
Aadhar Link For Ration Card Deadline Extended: ಒಂದಕ್ಕಿಂತ ಹೆಚ್ಚು ಪಡಿತರ ಚೀಟಿಗಳನ್ನು ಹೊಂದಿರುವ ಜನರು ವಿವಿಧೆಡೆ ಉಚಿತ…
Darshan Case New Update: ಸದ್ಯ ನಟ ದರ್ಶನ್ ಸೇರಿದಂತೆ 17 ಜನ ಆರೋಪಿಗಳನ್ನು ಜುಲೈ 18 ರವರೆಗೆ ನ್ಯಾಯಾಂಗ…
Darshan Case New Update: ಸದ್ಯ ಜುಲೈ 4 ರ ವರೆಗೆ ನಟ ದರ್ಶನ್ ಹಾಗೂ ಪವಿತ್ರ ಗೌಡ ಸೇರಿದಂತೆ…
Bag And Uniform For Anganwadi Children's: ಪ್ರಸ್ತುತ 2024 -25 ರ ಶೈಕ್ಷಣಿಕ ವರ್ಷ ಆರಂಭವಾಗಿದೆ. ರಾಜ್ಯ ಶಿಕ್ಷಣ…
Darshan Meet Pavithra Gowda Friend Samatha: ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕಷ್ಟು ಅಪ್ಡೇಟ್ ಗಳು ಹೊರಬೀಳುತ್ತಿದೆ.…