Gruha Lakshmi Latest Update: ಸದ್ಯ ರಾಜ್ಯದಲ್ಲಿ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ ರಾಜ್ಯದ ಅರ್ಹ ಮಹಿಳೆಯರಿಗೆ ಮಾಸಿಕವಾಗಿ 2000 ಹಣವನ್ನು ಬಿಡುಗಡೆ ಮಾಡುತ್ತಿದೆ. ಅರ್ಹ ಫಲಾನುಭವಿಗಳು ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ.
ಸರ್ಕಾರ ಈಗಾಗಲೇ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ. ಜೂನ್ ನಲ್ಲಿ ಗೃಹ ಲಕ್ಷ್ಮಿ ಫಲಾನುಭವಿಗಳು 11 ನೇ ಕಂತಿನ ಹಣವನ್ನು ಪಡೆದಿದ್ದಾರೆ. ಆದರೆ ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಮಹಿಳೆಯರು ಸರಕಾರವನ್ನು ದೂರುತ್ತಿದ್ದಾರೆ. ಇದಕ್ಕೆ ಕಾರಣ ಏನಿರಬಹುದು ಎನ್ನುವ ಬಗ್ಗೆ ಮಾಹಿತಿ ತಿಳಿಯೋಣ.
ರಾಜ್ಯ ಸರ್ಕಾರದ ವಿರುದ್ಧ ಗೃಹಿಣಿಯರ ಆಕ್ರೋಶ
ಗೃಹಿಣಿಯರು ಕಳೆದ ಹನ್ನೊಂದು ತಿಂಗಳಿನಿಂದ ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಪಡೆಯುತ್ತಿದ್ದಾರೆ. ಗೃಹಲಕ್ಷ್ಮಿ ಯೋಜನೆಯಡಿ ಗೃಹಿಣಿಯರು ಪ್ರತಿ ತಿಂಗಳು 2000 ರೂಪಾಯಿಗಳನ್ನು ತಮ್ಮ ಬ್ಯಾಂಕ್ ಖಾತೆಗೆ ಜಮಾ ಮಾಡಿಕೊಳ್ಳುತ್ತಿದ್ದಾರೆ. ಸದ್ಯ ರಾಜ್ಯ ಸರ್ಕಾರ 11 ಕಂತಿನ ಹಣ ಬಿಡುಗಡೆ ಮಾಡಿದ್ದು, 12 ನೇ ಕಂತಿನ ಹಣದ ಬಿಡುಗಡೆಗಾಗಿ ಸಿದ್ಧತೆ ಮಾಡಿಕೊಂಡಿದೆ.
ಆದಾಗ್ಯೂ, ಗೃಹ ಲಕ್ಷ್ಮಿ ಹಣ ಜಮಾ ಆಗದ ಮಹಿಳೆಯರು ಸರ್ಕಾರವನ್ನು ದೂರುತ್ತಿದ್ದಾರೆ. ಗೃಹ ಲಕ್ಷ್ಮಿ ವಿವಿಧ ಕಂತುಗಳ ಹಣ ಮಹಿಳೆಯರ ಖಾತೆಗೆ ಜಮಾ ಆಗದೆ ಇರುವುದಕ್ಕೆ ಮಹಿಳೆಯರು ಸರಕಾರದ ವಿರುದ್ಧ ಆಕ್ರೋಶ ಹೊರಹಾಕುತ್ತಿದ್ದಾರೆ. ಸದ್ಯ ಗೃಹ ಲಕ್ಷ್ಮಿ ಮಹಿಳೆಯರು ಗೃಹ ಲಕ್ಷ್ಮಿ ಕಂತುಗಳ ಹಣವನ್ನು ಪಡೆಯಲು ಈ ಎಲ್ಲ ಕೆಲಸಗಳನ್ನು ಮಾಡಿಕೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.
ಗೃಹಲಕ್ಷ್ಮಿ 2000 ರೂ. ಜಮಾ ಆಗಲು ತಕ್ಷಣ ಈ ಕೆಲಸ ಮುಗಿಸಿ
•ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಫಲಾನುಭವಿಗಳಿಗೆ KYC ಅಪ್ಡೇಟ್ ಅನ್ನು ಕಡ್ಡಾಯಗಳಿಸಿದೆ. KYC ನವೀಕರಣ ಆಗದ ಮಹಿಳೆಯರ ಖಾತೆಗೆ ಯಾವುದೇ ಕಾರಣಕ್ಕೂ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗುವುದಿಲ್ಲ. ನೀಡಿರುವ ಬ್ಯಾಂಕ್ ಖಾತೆಗೆ ನೀವು ಮತ್ತೆ KYC ಮಾಡಬೇಕು.
•ಇನ್ನು KYC Update ನ ಜೊತೆಗೆ NPCI Link ಕೂಡ ಅಗತ್ಯವಾಗಿದೆ. ಫಲಾನುಭವಿಗಳು ತಕ್ಷಣ NPCI ಲಿಂಕ್ ಮಾಡಬೇಕಿದೆ. ನಿಮ್ಮ ಹತ್ತಿರದ ಬ್ಯಾಂಕ್ ಶಾಖೆಗೆ ಭೇಟಿ ನೀಡಿ ನೀವು ಈ ಕೆಲಸವನ್ನು ಪೂರ್ಣಗೊಳಿಸಿಕೊಳ್ಳಬಹುದು.
•ಇನ್ನು ನಿಮ್ಮ ಮೊಬೈಲ್ ನಂಬರ್ ಗೆ ಬ್ಯಾಂಕ್ ಅಕೌಂಟ್ ಹಗೂ ಆಧಾರ್ ಲಿಂಕ್ ಆಗುವುದು ಕೂಡ ಮುಖ್ಯವಾಗಿದೆ. ಮೊಬೈಲ್ ನಂಬರ್ ಗೆ ಆಧಾರ್ ಲಿಂಕ್ ಆಗದೆ ಇದ್ದರೆ ನಿಮ್ಮ ಖಾತೆಗೆ ಯೋಜನೆಯ ಹಣ ಜಮಾ ಆಗಿದೆಯಾ ಅಥವಾ ಇಲ್ಲವ ಎನ್ನುವ ಬಗ್ಗೆ ನಿಮಗೆ ಸಂದೇಶ ರವಾನೆ ಆಗುವುದಿಲ್ಲ.
•ಇನ್ನು ಅರ್ಜಿ ಸಲ್ಲಿಕೆಯ ವೇಳೆ ನೀವು ನೀಡಿದ ಬ್ಯಾಂಕ್ ಅಕೌಂಟ್ ಸರಿಯಾಗಿದೆಯೇ ಎನ್ನುವುದನ್ನು ಒಮ್ಮೆ ಪರಿಶೀಲಿಸಿಕೊಳ್ಳಿ. ನಿಮ್ಮ ಖಾತೆ ಕ್ಲೋಸ್ ಆಗಿದ್ದರೆ ಹಣ ಜಮಾ ಆಗುವುದು ಕಷ್ಟ.
Team India Stuck In The Storm: ಸದ್ಯ T20 World Cup 2024 ರಲ್ಲಿ ಭಾರತ ತಂಡ ದಕ್ಷಿಣ…
Free Gas Cylinder Apply Latest Update: ದೇಶದಲ್ಲಿ ಹೆಚ್ಚುತ್ತಿರುವ ಗ್ಯಾಸ್ ಸಿಲಿಂಡರ್ ಗಳ ಬೆಲೆಗೆ ಬ್ರೇಕ್ ಹಾಕಲು ಕೇಂದ್ರ…
Gruha Lakshmi New Rule: ರಾಜ್ಯದ ಜನತೆ ಸದ್ಯ ಗೃಹ ಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ಪಡೆಯುತ್ತಿದ್ದಾರೆ. ರಾಜ್ಯ…
7th Pay Latest News: ರಾಜ್ಯ ಸರ್ಕಾರೀ ನೌಕರರು ಹಲವು ಸಮಯದಿಂದ 7 ನೇ ವೇತನ ಪರಿಷ್ಕರಣೆಗಾಗಿ ಕಾಯುತ್ತಿದ್ದಾರೆ. ಸರ್ಕಾರ…
Crop Compensation Installments: ಕಳೆದ ವರ್ಷ ಬೆಳೆ ಹಾನಿಗೊಳಗಾದ ರೈತರಿಗೆ ರಾಜ್ಯ ಸರ್ಕಾರ ಬೆಳೆ ಪರಿಹಾರ ಮೊತ್ತವನ್ನು ನೀಡುತ್ತಿದೆ .…
Shawarma Ban In Karnataka: ಸದ್ಯ ರಾಜ್ಯ ಸರ್ಕಾರ ಜನಸಾಮನ್ಯರಿಗಾಗಿ ಅನೇಕ ಸೌಲಭ್ಯವನ್ನು ನೀಡುವುದರ ಜೊತೆಗೆ ಜನರ ಜೀವಕ್ಕೆ ಹಾನಿಯಾಗುವಂತಹ…