Gruha Lakshmi NPCI: ಗೃಹಲಕ್ಷ್ಮಿ ಯೋಜನೆಯಲ್ಲಿ ದಿಡೀರ್ ದೊಡ್ಡ ಬದಲಾವಣೆ, 2000 ರೂ ಪಡೆಯಲು ತಕ್ಷಣ ಕೆಲಸ ಮಾಡಿ

ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಲಾಭವನ್ನು ಪಡೆಯಲು ಈ ಕೆಲಸ ಮಾಡುವುದು ಅವಶ್ಯಕವಾಗಿದೆ.

Gruha Lakshmi NPCI Update: ರಾಜ್ಯ ಸರ್ಕಾರ ರಾಜ್ಯದ ಅರ್ಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಡಿ ಮಾಸಿಕ 2000 ಹಣವನ್ನು ತಿಂಗಳವಾರು ಬಿಡುಗಡೆ ಮಾಡುತ್ತಿದೆ. ರಾಜ್ಯದಲ್ಲಿ ಗೃಹ ಲಕ್ಷ್ಮಿ ಅರ್ಹ ಫಲಾನುಭವಿಗಳು ಈಗಾಗಲೇ 5 ಕಂತಿನ ಹಣವನ್ನು ಪಡೆದಿದ್ದಾರೆ. ಗೃಹಿಣಿಯರು ಒಟ್ಟಾಗಿ ಈವರೆಗೆ ಗೃಹ ಲಕ್ಷ್ಮಿ ಯೋಜನೆಯಡಿ 10 ಸಾವಿರ ಹಣವನ್ನು ಪಡೆದುಕೊಂಡಿದ್ದಾರೆ.

ಇನ್ನು ಫೆಬ್ರವರಿಯಲ್ಲಿ ಗೃಹ ಲಕ್ಷ್ಮಿ 6 ನೇ ಕಂತಿನ ಹಣ ಬಿಡುಗಡೆಯಾಗುವುದಾಗಿ ಮಾಹಿತಿ ಲಭಿಸಿದೆ. ಆದರೆ ಗೃಹ ಲಕ್ಷ್ಮಿ 6 ನೇ ಕಂತಿನ ಹಣವನ್ನು ಪಡೆಯಲು ನೀವು ಸರ್ಕಾರ ಈ ಹೊಸ ನಿಯಮ ಪಾಲಿಸುವುದು ಅಗತ್ಯವಾಗಿದೆ. ಅದೇನು ಹೊಸ ನಿಯಮ ಎನ್ನುವ ಬಗ್ಗೆ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Gruha Lakshmi NPCI Update
Image Credit: etvbharat

ಗೃಹ ಲಕ್ಷ್ಮಿ ಯೋಜನೆಗೆ ರಾಜ್ಯ ಸರ್ಕಾರದಿಂದ ಹೊಸ ನಿಯಮ ಜಾರಿ
ಗೃಹ ಲಕ್ಷ್ಮಿ ಯೋಜನೆಯ ಮಾಸಿಕ 2000 ರೂ ಹಣ ನಿಮ್ಮ ಖಾತೆಗೆ ಜಮಾ ಆಗಬೇಕಿದ್ದರೆ ನೀವು ಮುಖ್ಯವಾಗಿ Aadhaar E -KYC ಅಪ್ಡೇಟ್ ಮಾಡುವುದು ಅವಶ್ಯಕವಾಗಿದೆ. ನಿಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಗೆ ಲಿಂಕ್ ಮಾಡಿದರೆ ಮಾತ್ರ DBT ಮೂಲಕ ನಿಮ್ಮ ಖಾತೆಗೆ ಹಣ ಜಮಾ ಆಗುತ್ತದೆ.

ಹಾಗೆಯೆ ನಿಷ್ಕ್ರಿಯವಾಗಿರುವ ಬ್ಯಾಂಕ್ ಖಾತೆಗೇ ಹಣ ಜಮಾ ಮಾಡಲು ಸಾದ್ಯವಾಗುವಿಲ್ಲ. ಹೀಗಾಗಿ ಬ್ಯಾಂಕ್ ಖಾತೆಯ ಸ್ಟೇಟಸ್ ಚೆಕ್ ಮಾಡಿಕೊಳ್ಳುವುದು ಅಗತ್ಯವಾಗಿದೆ. ನೀವು ಗೃಹ ಲಕ್ಷ್ಮಿ ಯೋಜನೆಗಾಗಿ ಎಲ್ಲ ರೀತಿಯ ಕೆಲಸವನ್ನು ಮಾಡಿದ್ದೂ, ಈ ಒಂದು ಕೆಲಸ ಬಾಕಿಯಿದ್ದರೆ ನಿಮಗೆ ಈ ತಿಂಗಳ ಹಣ ಜಮಾ ಆಗಲು ಸಾಧ್ಯವಿಲ್ಲ. ನೀವು 6 ನೇ ಕಂತಿನ ಲಾಭವನ್ನು ಪಡೆಯಲು ಈ ಕೆಲಸ ಮಾಡುವುದು ಅವಶ್ಯಕವಾಗಿದೆ.

Gruha Lakshmi Scheme NPCI Latest
Image Credit: Karnataka Today

ಗೃಹ ಲಕ್ಷ್ಮಿ ಮಾಸಿಕ 2000 ಪಡೆಯಲು NPCI ಕಡ್ಡಾಯ
ಸದ್ಯ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಮಾಸಿಕ 2000 ರೂ ಹಣ ಪಡೆಯಲು ಹೊಸ ನಿಯಮವನ್ನು ರೂಪಿಸಿದೆ. ಗೃಹ ಲಕ್ಷ್ಮಿ ಪಾಲನುಭವಿಗಳಿಗೆ NPCI ಕಡ್ಡಾಯಗೊಳಿಸಿದೆ. ಸದ್ಯ ಗೃಹ ಲಕ್ಷ್ಮಿ ಫಲಾನುಭವಿಗಳು E -KYC, ಆಧಾರ್ ಸೀಡಿಂಗ್ ಮಾಡಿಸುವುದರ ಜೊತೆಗೆ ಇನ್ನುಮುಂದೆ NPCI ಕೂಡ ಮಾಡುವುದು ಅಗತ್ಯವಾಗಿದೆ.

Join Nadunudi News WhatsApp Group

ಇನ್ನು ಮುಂದೆ ಗೃಹ ಲಕ್ಷ್ಮಿ ಫಲಾನುಭವಿ ಪ್ರತಿಯೊಬ್ಬರೂ National Payment Corporation of India (NPCI) ಮಾಡಬೇಕು. ನಿಮ್ಮ ಹತ್ತಿರದ ಬ್ಯಾಂಕ್‌ ಗೆ ಭೇಟಿ ನೀಡುವ ಮೂಲಕ NPCI ಅನ್ನು ಮಾಡಬಹುದು. ಆಧಾರ್ ಕಾರ್ಡ್, ಪಡಿತರ ಚೀಟಿ ಜೊತೆಗೆ ಬ್ಯಾಂಕ್ ವಿವರಗಳನ್ನು ನೀಡಿದರೆ NPCI ಮಾಡಿಕೊಡಲಾಗುತ್ತದೆ. ಗೃಹ ಲಕ್ಷ್ಮಿ ಯೋಜನೆಯ 6 ನೇ ಕಂತಿನ ಹಣ ಪಡೆಯಲು NPCI ಕಡ್ಡಾಯವಾಗಿದೆ. NPCI ಆಗದಿದ್ದರೆ 6 ನೇ ಕಂತಿನ ಹಣ ಜಮಾ ಆಗುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ.

Join Nadunudi News WhatsApp Group