Gruha Lakshmi: ಗೃಹಲಕ್ಷ್ಮಿ ಯೋಜನೆಯ ಇನ್ನೊಂದು ಬಿಗ್ ಅಪ್ಡೇಟ್, ಇಂತಹ ಮಹಿಳೆಯರಿಗೆ ಮಾತ್ರ ಸಿಗುತ್ತೆ 6000 ರೂ

ಗೃಹ ಲಕ್ಷ್ಮಿ ಯೋಜನೆಯಡಿ ಇಂತಹ ಮಹಿಳೆಯರಿಗೆ ಸಿಗಲಿದೆ 6000 ರೂಪಾಯಿ

Gruha Lakshmi Latest Update: ಸದ್ಯ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ Gruha Lakshmi ಯೋಜನೆಯು ಇನ್ನು ಕೂಡ ಸಂಪೂರ್ಣವಾಗಿ ಅರ್ಹರಿಗೆ ತಲುಪುತ್ತಿಲ್ಲ.

ಯೋಜನೆಗೆ ಸಂಬಂಧಪಟ್ಟ ಎಲ್ಲ ದೋಷಗಳನ್ನು ಸರಿಪಡಿಸಿದರು ಕೂಡ ಒಂದಲ್ಲ ಒಂದು ಕಾರಣದಿಂದ ಅರ್ಹರ ಖಾತೆಗೆ ಹಣ ಜಮಾ ಆಗುತ್ತಿಲ್ಲ. ಈಗಾಗಲೇ ರಾಜ್ಯ ಸರ್ಕಾರ ಯೋಜನೆಯನ್ನು ಯಶಸ್ವಿಗೊಳಿಸಲು ಸಾಕಷ್ಟು ಕ್ರಮ ಕೈಗೊಂಡಿದೆ. ಸರ್ಕಾರ ಹೇಳಿರುವಂತೆ ಸಮಸ್ಯೆಗಳನ್ನು ಸರಿಪಡಿಸಿಕೊಂಡರೆ ಅರ್ಹರ ಖಾತೆಗೆ ಹಣ ಜಮಾ ಆಗಲಿದೆ.

Gruha Lakshmi 2024
Image Credit: News Guru Kannada

ಗೃಹ ಲಕ್ಷ್ಮಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಇನ್ನು ಕರ್ನಾಟಕ ಸರ್ಕಾರ ಮಹಿಳಾ ಮತ್ತು ಕಲ್ಯಾಣ ಇಲಾಖೆ ವತಿಯಿಂದ ಗೃಹಿಣಿಯರ ಬ್ಯಾಂಕ್ ಖಾತೆಗೆ ಪ್ರತಿ ತಿಂಗಳು ಗೃಹಲಕ್ಷ್ಮಿ ಹಣವನ್ನು ನೇರ ವರ್ಗಾವಣೆ ಮಾಡಲಾಗುತ್ತಿದೆ. ಆದರೆ ನಾನಾ ಕಾರಣಗಳಿಂದ ಕಳೆದ ಆರು ತಿಂಗಳಿಂದ ಲಕ್ಷಗಟ್ಟಲೆ ಮಹಿಳೆಯರಿಗೆ ಗೃಹಲಕ್ಷ್ಮಿ ಭಾಗ್ಯ ಲಭಿಸಿಲ್ಲ. ಇದೇ ಕಾರಣಕ್ಕೆ ಹಣ ಸಿಗದವರಿಗೆ ಸರ್ಕಾರ ಹಣ ನೀಡಲು ಮುಂದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಸಿದ್ದರು ಹಣ ಸಿಗದೇ ಇರುವವರು ಹಾಗೂ ಕೆಲ ಕಂತುಗಳು ಹಣ ಸಿಗದವರ ಮಾಹಿತಿಯನ್ನು ಸರ್ಕಾರ ಪಡೆದುಕೊಂಡಿದೆ.

ಪ್ರತಿ ಗ್ರಾಮಕ್ಕೂ ಅಧಿಕಾರಿಗಳನ್ನು ಕಳುಹಿಸಲಾಗಿದೆ. ಬ್ಯಾಂಕ್‌ ಗಳಲ್ಲಿ ಖಾತೆ ಹೊಂದಿದ್ದರೆ ಮತ್ತು ಹಲವು ವರ್ಷಗಳಿಂದ ಖಾತೆ ಸಕ್ರಿಯವಾಗಿಲ್ಲದಿದ್ದರೆ ಅಂತಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆ ಹಣ ಠೇವಣಿ ಆಗಿರುವುದಿಲ್ಲ. ಬ್ಯಾಂಕ್ ಖಾತೆಗಳಲ್ಲಿ ದೋಷ ಕಂಡುಬಂದರೆ, ಅಂಚೆ ಇಲಾಖೆ ಮೂಲಕ ಹೊಸ ಖಾತೆ ತೆರೆಯಲು ಮತ್ತು ಗೃಹಲಕ್ಷ್ಮಿ ಯೋಜನೆಯ ಪ್ರಯೋಜನಗಳನ್ನು ಒದಗಿಸಲು ಸರ್ಕಾರ ಕ್ರಮ ಕೈಗೊಂಡಿದೆ.

Gruha Lakshmi Scheme Big Update
Image Credit: News Guru Kannada

ಗೃಹ ಲಕ್ಷ್ಮಿ ಯೋಜನೆಯಡಿ ಇಂತಹ ಮಹಿಳೆಯರಿಗೆ ಸಿಗಲಿದೆ 6000 ರೂ.
ಬ್ಯಾಂಕ್ ಖಾತೆ ಜತೆಗೆ ಇಕೆವೈಸಿ ಕೊರತೆಯಿಂದ ಹಣ ಪಾವತಿಯಾಗದಿದ್ದರೆ ಅಂತಹ ಖಾತೆಗಳನ್ನು ಸರಿಪಡಿಸುವ ಪ್ರಕ್ರಿಯೆ ನಡೆಯುತ್ತಿದೆ. ಗೃಹಲಕ್ಷ್ಮಿ ಯೋಜನೆ ಫಲಾನುಭವಿ ಖಾತೆಗಳಿಗೆ Aadhaar Seeding, NPCI Mapping ಕಡ್ಡಾಯವಾಗಿದೆ. ಈ ಕೆಲಸ ಮಾಡದೇ ಇರುವವರೂ ಕೆವೈಸಿ ಸಂಬಂಧಿತ ಕೆಲಸ ಮಾಡುತ್ತಿದ್ದಾರೆ. ತಾಂತ್ರಿಕ ಸಮಸ್ಯೆಗಳನ್ನು ಬಗೆಹರಿಸಿ ಶೀಘ್ರವೇ ಹಣ ಜಮಾ ಮಾಡಲು ಸರ್ಕಾರ ಮುಂದಾಗಿದೆ. ಎಲ್ಲ ಕಂತುಗಳ ಹಣವನ್ನು ಒಮ್ಮೆಲೇ ಜಮಾ ಮಾಡಲು ಸರ್ಕಾರ ನಿರ್ಧರಿದೆ.

Join Nadunudi News WhatsApp Group

ಗೃಹ ಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಎಲ್ಲ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ಯೋಜನೆಗಳ ಎಲ್ಲ ಕಂತುಗಳ ಹಣವನ್ನು ಸರ್ಕಾರ ಒಂದೇ ಬಾರಿಗೆ ಜಮಾ ಮಾಡಲಿದೆ. ಅಂಗನವಾಡಿ ಕಾರ್ಯಕರ್ತರು ಅಥವಾ ಆಶಾ ಕಾರ್ಯಕರ್ತರ ಬಳಿ ಹೋಗಿ ನಿಮ್ಮ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬಹುದು. ಎಲ್ಲ ಸಮಸ್ಯೆ ಸರಿಯಾದರೆ ರಾಜ್ಯ ಸರ್ಕಾರ ಒಮ್ಮೆಲೇ ನಿಮ್ಮ ಖಾತೆಗೆ 6000 ರೂ ಹಣವನ್ನು ಜಮಾ ಮಾಡುತ್ತದೆ. ಹೀಗಾಗಿ ಗೃಹ ಲಕ್ಷ್ಮೀ ಪಲಾನುಭವಿಗಳು ಆದಷ್ಟು ಬೇಗ ತಮ್ಮ ದೋಷಗಳನ್ನು ಸರಿಪಡಿಸಿಕೊಂಡು ಯೋಜನೆಯ ಲಾಭ ಪಡೆದುಕೊಳ್ಳುವುದು ಉತ್ತಮ.

Join Nadunudi News WhatsApp Group