Gruha Lakshmi: ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರಿಗೆ ಇನ್ನೊಂದು ಗೂಸ್ ನ್ಯೂಸ್, ಸರ್ಕಾರದ ಮಹತ್ವದ ಘೋಷಣೆ.
ಗೃಹ ಲಕ್ಷ್ಮಿ ಯೋಜನೆಯ ಕುರಿತಂತೆ ಇನ್ನೊಂದು ಘೋಷಣೆ ಮಾಡಿದ ಸರ್ಕಾರ.
Gruha Lakshmi Latest Update: ಸದ್ಯ ರಾಜ್ಯದಲ್ಲಿ Gruha Lakshmi ಯೋಜನೆ ಅನುಷ್ಠಾನಗೊಂಡರು ಕೂಡ ಬಗೆಹರಿಯದ ಸಮಸ್ಯೆಯಾಗಿ ಉಳಿದಿದೆ. ಯೋಜನೆ ಅನುಷ್ಠಾನಗೊಂಡು ಮೂರ್ನಾಲ್ಕು ತಿಂಗಳಾದರೂ ಕೂಡ ಇನ್ನು ಕೂಡ ಗೃಹ ಯೋಜನೆಯ ಲಾಭ 100% ಅರ್ಹರಿಗೆ ಲಭ್ಯವಾಗುತ್ತಿಲ್ಲ. ಜನರು ಗೃಹ ಲಕ್ಷ್ಮಿ ಹಣ ಜಮಾ ಆಗುವ ಬಗ್ಗೆ ಸರ್ಕಾರಕ್ಕೆ ಮೇಲಿನ ಮೇಲೆ ಪ್ರಶ್ನೆ ಹಾಕುತ್ತಲೇ ಇದ್ದಾರೆ. ಇನ್ನು ರಾಜ್ಯ ಸರ್ಕಾರ ಆದಷ್ಟು ಬೇಗ ಎಲ್ಲ ಸಮಸ್ಯೆಯನ್ನು ಬಗೆಹರಿಸಿ ಹಣ ಜಮಾ ಮಾಡುತ್ತೇವೆ ಎನ್ನುವ ಭರವಸೆ ನೀಡುತ್ತಿದ್ದಾರೆ.
![gruha lakshmi yojana updates](https://nadunudi.in/wp-content/uploads/2023/11/gruha-lakshmi-yojana-new-updates.png)
ಗೃಹಲಕ್ಷ್ಮಿ ಹಣ ಜಮಾ ಆಗುವ ಬಗ್ಗೆ ಬಿಗ್ ಅಪ್ಡೇಟ್
ಸರ್ಕಾರದ ಭರವಸೆ ಭರವಸೆಯಾಗಿಯೇ ಉಳಿದಿದೆ ಹೊರತು ಇನ್ನೂ ಕೂಡ ಗೃಹ ಲಕ್ಷ್ಮಿ ಅರ್ಹ ಮಹಿಳೆಯರ ಖಾತೆಗೆ ಜಮಾ ಆಗಿಲ್ಲ. ಸ್ಫಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ನು ಕೂಡ ಗೃಹ ಲಕ್ಷ್ಮಿ ಯೋಜನೆಯ ಹಣ ಜಮಾ ಆಗದೆ ಇರುವ ಮಹಿಳೆಯರಿಗೆ ಮಹತ್ವದ ಮಾಹಿತಿ ಹೊರಡಿಸಿದ್ದಾರೆ. ಈ ಬಾರಿ ಸಮಸ್ಯೆಯನ್ನು ನಿವಾರಿಸುವುದಾಗಿ ಹೇಳಿಕೆ ನೀಡಿದ್ದಾರೆ. ಗೃಹ ಲಕ್ಷ್ಮಿ ಹಣ ಅರ್ಹರ ಖಾತೆಗೆ ಜಮಾ ಮಾಡಲು ಸರ್ಕಾರ ಮಹತ್ವದ ಘೋಷಣೆ ಹೊರಡಿಸಿದೆ.
ಗೃಹಲಕ್ಷ್ಮಿ ಹಣ ಪಡೆಯುತ್ತಿರುವ ಮಹಿಳೆಯರಿಗೆ ಇನ್ನೊಂದು ಗೂಸ್ ನ್ಯೂಸ್
ಗೃಹ ಲಕ್ಷ್ಮಿ ಯೋಜನೆಯಡಿ ಸರ್ಕಾರ ಮಾಸಿಕ 2000 ಹಣವನ್ನು ಅರ್ಹ ಪಾಲನುಭವಿಗಳ ಖಾತೆಗೆ BDT ಮೂಲಕ ಜಮಾ ಮಾಡುತ್ತಿದೆ. ಆದರೆ ಗೃಹ ಲಕ್ಷ್ಮಿ ಅಷ್ಟು ಅರ್ಜಿದಾರರಿಗೆ ಯೋಜನೆಯ ಹಣ ಜಮಾ ಆಗದೆ ಇರುವುದು ದೊಡ್ಡ ಪ್ರಶ್ನೆಯಾಗಿ ಉಳಿದಿದೆ. ಸದ್ಯ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಸಭೆ ನಡೆಸಿ ಈ ಬಗ್ಗೆ ಚರ್ಚಿಸಿದ್ದಾರೆ.
ರಾಜ್ಯದಲ್ಲಿ ಗೃಹ ಲಕ್ಷ್ಮಿ ಯೋಜನೆಗೆ 1.17 ಕೋಟಿ ಫಲಾನುಭವಿಗಳು ನೋಂದಣಿಯಾಗಿದ್ದು, 1 .10 ಕೋಟಿ ಫಲಾನುಭವಿಗಳಿಗೆ ನೆರವು ವರ್ಗಾವಣೆ ಮಾಡಲಾಗಿದೆ. ಇನ್ನುಳಿದ 2 ಲಕ್ಷ ಫಲಾನುಭವಿಗಳಿಗೆ ಹಣ ಜಮಾ ಮಾಡಲು ತಾಂತ್ರಿಕ ದೋಷಗಳು ಎದುರಾಗುತ್ತಿರುವುದರಿಂದ ಸಮಸ್ಯೆಯನ್ನು ನಿವಾರಿಸುವತ್ತ ಗಮನ ಹರಿಸಲಾಗುತ್ತಿದೆ.
![gruha lakshmi yojana karnataka](https://nadunudi.in/wp-content/uploads/2023/11/gruha-lakshmi-yojana-latest-announce.jpg)
ಸರ್ಕಾರದ ಮಹತ್ವದ ಘೋಷಣೆ
ಅಂಗನವಾಡಿ ಕಾರ್ಯಕರ್ತೆಯರು ಫಲಾನುಭವಿಗಳನ್ನು ಬ್ಯಾಂಕಿಗೆ ಕರೆದೊಯ್ದು ಸಮಸ್ಯೆ ಬಗೆಹರಿಸಲಾಗುತ್ತಿದೆ. ಕೆಲವೇ ದಿನಗಲ್ಲಿ ಈ ಪ್ರಕ್ರಿಯೆ ಪೂರ್ಣಗೊಳಿಸಿ ಎಲ್ಲ ಅರ್ಹ ಫಲಾನುಭವಿಗಳಿಗೆ ನೆರವು ಕ್ರಮ ಕೈಗೊಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿಕೆ ನೀಡಿದ್ದಾರೆ.
ಡಿಸೆಂಬರ್ ಒಳಗೆ ಅರ್ಹ ಫಲಾನುಭವಿಗಳಿಗೆ ನಗದು ವರ್ಗಾವಣೆ ಮಾಡುವಂತೆ ಸಿದ್ದರಾಮಯ್ಯ ಘೋಷಿಸಿದ್ದಾರೆ. ಗೃಹ ಲಕ್ಷ್ಮಿ ಫಲಾನುಭವಿಗಳು ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್ ಮತ್ತು ಇತರ ಸಮಸ್ಯೆಗಳಿಗೆ ಸಂಬಂಧಿಸಿದ್ದರೆ, ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗೃಹಲಕ್ಷ್ಮಿ ಅದಾಲತ್ ಆಯೋಜಿಸಿ ಸಮಸ್ಯೆ ಪರಿಹರಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಅವರು ಸೂಚಿಸಿದ್ದಾರೆ.