Image Source: India Today
Here is the total cost of kempegowda statue: ಪ್ರಧಾನಿ ನರೇಂದ್ರ ಮೋದಿ(Narendra Modi)ಯವರ ಬೆಂಗಳೂರು(Bangalore) ಭೇಟಿ ಹಲವು ಕಾರಣಗಳಿಗೆ ಸದ್ದು ಮಾಡುತ್ತಿದ್ದು ವಂದೇ ಭಾರತ್ ಎಕ್ಸ್ಪ್ರೆಸ್(Vande Bharat Express) ರೈಲು ಉದ್ಘಾಟನೆಯಿಂದ ಹಿಡಿದು ಕೆಂಪೇಗೌಡ ಪ್ರತಿಮೆ ಅನಾವರಣದವರೆಗೂ ಕೂಡ ನರೇಂದ್ರ ಮೋದಿ ಕೆಲವಾರು ಕಾರ್ಯಕ್ರಮಗಳನ್ನು ಚಾಲನೆ ಕೊಟ್ಟಿದ್ದಾರೆ.
ಹೌದು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿನ ಹೊಸ ಟರ್ಮಿನಲ್(Terminal) ಉದ್ಘಾಟನೆ ಮೂರು ಕಾಮಗಾರಿಗಳು ಕೆಂಪೇಗೌಡ ಪ್ರತಿಮೆ ಅನಾವರಣ ಹಾಗೂ ಮೋದಿ ಕಾರ್ಯಕ್ರಮ ಆಯೋಜನೆ ಹೀಗೆ ಒಟ್ಟು ಆಗಿರುವ ವೆಚ್ಚ ಸುಮಾರು 48 ಕೋಟಿ ರೂ ಎಂಬುದು ತಿಳಿದುಬಂದಿದೆ.
ಇದು ದಿ ಫೈಲ್ನಲ್ಲಿ ಪ್ರಕಟವಾದ ವರದಿಯನ್ನ ಆಧರಿಸಿ ಮಾಹಿತಿ ನೀಡಿರುವುದಾಗಿದ್ದು ವಂದೇ ಭಾರತ್ ಎಕ್ಸ್ಪ್ರೆಸ್ ರೈಲು ಭಾರತ್ ಗೌರವ್ ಕಾಶಿ ದರ್ಶನ್ ರೈಲು ಉದ್ಘಾಟನೆಯ ಕಾರ್ಯಕ್ರಮಗಳ ವೆಚ್ಚ ಇದರಲ್ಲಿಲ್ಲ.ದಿಬಫೈಲ್ ವರದಿ ಪ್ರಕಾರ ಏರ್ಪೋರ್ಟ್ ಬಳಿಯ ಮೂರು ಕಾಮಗಾರಿಗಳು ಮತ್ತು ವ್ಯವಸ್ಥೆಗೆ ಅಂದಾಜು 45.73 ಕೋಟಿ ರೂ ಖರ್ಚಾಗಿದ್ದು ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮದ ಆಯೋಜನೆಗೆ 2.75 ಕೋಟಿ ವೆಚ್ಚವಾಗಬಹುದು ಎಂದು ಹೇಳಲಾಗಿದೆ.
ಇನ್ನು ಕೆಐಎಎಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಕೆಂಪೇಗೌಡ ಪ್ರತಿಮೆ ನಿರ್ಮಾಣವಾಗಿದ್ದು ಪ್ರಧಾನಿ ಮೋದಿ ಈ ಪ್ರತಿಮೆಯನ್ನು ಅನಾವರಣಗೊಳಿಸಿದರು. ಪ್ರಗತಿ ಪ್ರತಿಮೆ ಎಂದೇ ಹೆಸರಿಸಲಾಗಿರುವ ಕೆಂಪೇಗೌಡರ ಈ ಪ್ರತಿಮೆಯನ್ನು ಕಂಚಿನಿಂದ ನಿರ್ಮಿಸಲಾಗಿದ್ದು ವಿಶ್ವದ ನಗರ ನಿರ್ಮಾತೃ ವ್ಯಕ್ತಿಗಳ ಮೊದಲ ಮತ್ತು ಅತಿದೊಡ್ಡ ಪ್ರತಿಮೆ ಇದು ಎಂಬ ದಾಖಲೆ ಬರೆದಿದೆ.
ಹೌದು ಲಂಡನ್ನ ವರ್ಲ್ಡ್ ಬುಕ್ ಆಫ್ ರೆಕಾರ್ಡ್ನಲ್ಲಿ ಇದು ಸ್ಥಾನ ಪಡೆದಿದ್ದು ಬೆಂಗಳೂರು ಕಟ್ಟಿದ ಕೆಂಪೇಗೌಡರ ಈ ಬೃಹತ್ ಪ್ರತಿಮೆ ಕಟ್ಟಲು ಅಂದಾಜು 100 ಕೋಟಿ ರೂ ಆಗಿರಬಹುದು. ಇನ್ನು 108 ಅಡಿ ಎತ್ತರದ ಈ ಪ್ರತಿಮೆಯಲ್ಲಿ ಕೆಂಪೇಗೌಡರ ಕೈಯಲ್ಲಿ ಇರುವ ಖಡ್ಗವೇ 4 ಟನ್ ತೂಗುತ್ತದೆಯಂತೆ.
ಇನ್ನು ಕೆಂಪೇಗೌಡ ಪ್ರತಿಮೆ ನಿರ್ಮಾಣ ವಿಚಾರ ರಾಜಕೀಯವಾಗಿ ವಿವಾದಕ್ಕೆ ಒಳಗಾಗಿದ್ದು ಹೌದು. ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರತಿಮೆ ನಿರ್ಮಿಸಲು ಹಾಗೂ ಹೆರಿಟೇಜ್ ಥೀಮ್ ಪಾರ್ಕ್ ನಿರ್ಮಿಸಲು ಸರ್ಕಾರ ಯಾಕೆ ಹಣ ಕೊಟ್ಟಿದೆ ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ.
ಇನ್ನು ವಿಮಾನ ನಿಲ್ದಾಣ ಸ್ಥಾಪಿಸಲು ಸರ್ಕಾರ ಬಿಐಎಎಲ್ಗೆ ಜಮೀನು ಮತ್ತು ಹಣ ಎರಡನ್ನೂ ಒದಗಿಸಿತ್ತು. ಆದರೂ ಅಲ್ಲಿ ಪ್ರತಿಮೆ ಹಾಗೂ ಥೀಮ್ ಪಾರ್ಕ್ ನಿರ್ಮಿಸಲು ಸರ್ಕಾರ ಮತ್ತೆ ಕೈಯಿಂದ ಹಣ ನೀಡಿರುವುದಕ್ಕೆ ವಿಪಕ್ಷಗಳು ಆಕ್ಷೇಪಿಸಿದ್ದು ಹೆರಿಟೇಜ್ ಥೀಮ್ ಪಾರ್ಕ್ ಅನ್ನು 23 ಎಕರೆ ಪ್ರದೇಶದಲ್ಲಿ 84 ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಿರುವುದು ತಿಳಿದುಬಂದಿದೆ.
ಇನ್ನು ಉದ್ಘಾಟನೆಯಾದ ಏರ್ಪೋರ್ಟ್ನ ಎರಡನೇ ಟರ್ಮಿನಲ್ ಅನ್ನು 5 ಸಾವಿರ ಕೋಟಿ ರೂ ವೆಚ್ಚದಲ್ಲಿ ನಿರ್ಮಿಸಲಾಗಿದ್ದು ಸದ್ಯ ಈಗ ಬೆಂಗಳೂರಿನ ಈ ಏರ್ಪೋರ್ಟ್ಗೆ ಎರಡು ಟರ್ಮಿನಲ್ಗಳು ಸಿಕ್ಕಂತಾಗಿದ್ದು ಪ್ರಯಾಣಿಕರ ಸೇವೆ ಸಾಮರ್ಥ್ಯ ದುಪ್ಪಟ್ಟಾಗುತ್ತದೆ. ಹೌದು ಮುಂಚೆ ವರ್ಷಕ್ಕೆ 2.5 ಕೋಟಿ ಪ್ರಯಾಣಿಕರಿಗೆ ಏರ್ಪೋರ್ಟ್ನಲ್ಲಿ ಅವಕಾಶ ಇದ್ದು ಸದ್ಯ ಈಗ ವರ್ಷಕ್ಕೆ 5-6 ಕೋಟಿ ಪ್ರಯಾಣಿಕರು ಬೆಂಗಳೂರಿನಿಂದ ವಿಮಾನದಲ್ಲಿ ಪ್ರಯಾಣಿಸಲು ಸಾಧ್ಯವಾಗುತ್ತದೆ.
ಇನ್ನು ಏರ್ಪೋರ್ಟ್ ಟರ್ಮಿನಲ್ ಮಾತ್ರವಲ್ಲದೆ 25 ಸಾವಿರ ಕೋಟಿ ರೂ ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ನರೇಂದ್ರ ಮೋದಿ ಶುಕ್ರವಾರ ಚಾಲನೆ ಕೊಟ್ಟಿದ್ದು ಇದಾದ ನಂತರ ಪ್ರಧಾನಿ ಸಾರ್ವಜನಿಕ ಸಭೆ ಉದ್ದೇಶಿಸಿ ಮಾತನಾಡಿದರು. ಹೌದು ಕೇಂದ್ರ ಸಚಿವ ಪ್ರಲ್ಹಾದ ಜೋಷಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಚಿವರಾದ ಅಶ್ವತ್ಥ ನಾರಾಯಣ ಮತ್ತಿತರರು ಈ ಕಾರ್ಯಕ್ರಮದಲ್ಲಿ ಮೋದಿ ಜೊತೆಗಿದ್ದು ಇದಾದ ನಂತರ ಪ್ರಧಾನಿ ಮೋದಿ ತಮಿಳುನಾಡು ಆಂದ್ರ ಮತ್ತು ತೆಲಂಗಾಣಕ್ಕೆ ತೆರಳಲಿದ್ದಾರೆ.
ತಮಿಳುನಾಡಿನ ದಿಂಡಿಗಲ್ನ ಗಾಂಧಿಗ್ರಾಂ ರೂರಲ್ ಇನ್ಸ್ಟಿಟ್ಯೂಟ್ನ 36ನೇ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದು ಆಂಧ್ರದ ವಿಶಾಖಪಟ್ಟಣಂನಲ್ಲಿ ಹಲವು ಯೋಜನೆಗಳಿಗೆ ಚಾಲನೆ ಕೊಡಲಿದ್ದಾರೆ. ನಂತರ ತೆಲಂಗಾಣದ ರಾಮಗುಂಡಂನಲ್ಲಿರುವ ಆರ್ಎಫ್ಸಿಎಲ್ ಘಟಕಕ್ಕೆ ಭೇಟಿ ನೀಡಿ 9500 ಕೋಟಿ ರೂ ಮೊತ್ತದ ರೈಲು ಹಾಗೂ ರಸ್ತೆ ಕಾಮಗಾರಿಗಳಿಗೆ ಅಡಿಗಲ್ಲು ಹಾಕಲಿದ್ದಾರೆ.
Maruti Suzuki Alto Features: ಭಾರತೀಯ ಆಟೋ ವಲಯದಲ್ಲಿ Maruti Suzuki ಕಂಪನಿಯು ಹೆಚ್ಚಿನ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಕಂಪನಿಯು ವಿವಿಧ…
PM Kisan Amount Hike Latest Update: ಸದ್ಯ ದೇಶದಲ್ಲಿ ಫೆಬ್ರವರಿ 24, 2019 ರಂದು, ಭೂಮಿ ಹೊಂದಿರುವ ರೈತರಿಗೆ…
Lalu Prasad Yadav About Modi: ಸದ್ಯ ರಾಜ್ಯದಲ್ಲಿ ರಾಜಕೀಯದ ವಿಚಾರಗಳು ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಅದರಲ್ಲೂ ಸತತ ಮೂರನೇ…
Samantha And Naga Chaitanya Divorce Reason: ತೆಲುಗು ಇಂಡಸ್ಟ್ರಿಯಲ್ಲಿ ಬೆಸ್ಟ್ ಕಪಲ್ ಆಗಿದ್ದ ಸಮಂತಾ ಹಾಗೂ ನಾಗಚೈತನ್ಯ ವಿಚ್ಛೇದನ…
July 6th Gold Rate: ದೇಶದಲ್ಲಿ ಮತ್ತೆ ಚಿನ್ನದ ಬೆಲೆ (Gold Price) ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಿದೆ. ಜನಸಾಮಾನ್ಯರಿಗೆ…
7th Pay Latest Update: ರಾಜ್ಯ ಸರ್ಕಾರೀ ನೌಕರರು ಬಹು ದಿನಗಳಿಂದ 7 ನೇ ವೇತನ ಆಯೋಗ ವರದಿಯ ಬಗ್ಗೆ…