Image Credit: Original Source
India Won T20 World Cup 2024: ನಿನ್ನೆ ನೆಡೆದ T20 ವಿಶ್ವಕಪ್ 2024 ರ ಫೈನಲ್ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾವನ್ನು ಸೋಲಿಸುವ ಮೂಲಕ ವಿಶ್ವಕಪ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.
ಈ ಹಿಂದೆ 2007 ರಲ್ಲಿ MS Dhoni ನಾಯಕ್ತ್ವದ ಭಾರತ ತಂಡ T20 ವಿಶ್ವಕಪ್ ಅನ್ನು ಗೆದ್ದುಕೊಂಡಿತ್ತು. ಇದೀಗ 2024 ರ ವಿಶ್ವಕಪ್ ಟ್ರೋಫಿಯನ್ನು ರೋಹಿತ್ ಶರ್ಮ ನಾಯಕ್ತ್ವದ ಭಾರತ ತಂಡ ದಕ್ಷಿಣ ಆಫ್ರಿಕಾದ ವಿರುದ್ಧ ಜಯವನ್ನು ಸಾದಿಸುವ ಮೂಲಕ ಕಪ್ ಅನ್ನು ಗೆದ್ದುಕೊಂಡಿದೆ.
ಟ್ರೋಪಿ ಗೆದ್ದ ಖುಷಿಗೆ ಭಾವುಕರಾದ ಆಟಗಾರರು
ಚಾಂಪಿಯನ್ ಆದ ತಕ್ಷಣ ನಾಯಕ ರೋಹಿತ್ ಶರ್ಮಾ, ಹಾರ್ದಿಕ್ ಪಾಂಡ್ಯ, ವಿರಾಟ್ ಕೊಹ್ಲಿ ಮತ್ತು ಇತರ ಆಟಗಾರರು ಭಾವುಕರಾದರು. ಪಂದ್ಯ ಮುಗಿದ ನಂತರ ಅವರೆಲ್ಲರೂ ಪರಸ್ಪರ ಅಪ್ಪಿಕೊಳ್ಳುವ ಮೂಲಕ ಕಣ್ಣೀರು ಹಾಕಿದರೂ. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಡಿದ ಭಾರತ ತಂಡ 20 ಓವರ್ ಗಳಲ್ಲಿ 7 ವಿಕೆಟ್ ಕಳೆದುಕೊಂಡು 176 ರನ್ ಗಳಿಸಿದೆ. ಈ ರನ್ ಗಳ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 16 ನೇ ಓವರ್ ಗೆ 4 ವಿಕೆಟ್ ಕಳೆದುಕೊಂಡು 151 ರನ್ ಗಳಿಸಿ ಗೆಲುವಿನ ಹಾದಿಯಲ್ಲಿತ್ತು.
ದಕ್ಷಿಣ ಆಫ್ರಿಕಾ 25 ಎಸೆತ ಗಳಲ್ಲಿ 24 ರನ್ ಗಳಿಸಬೇಕಿತ್ತು. ಆದರೆ ಭಾರತ ತಂಡದ ಬೌಲರ್ ಗಳ ಉತ್ತಮ ಪ್ರದರ್ಶನದಿಂದ ದಕ್ಷಿಣ ಆಫ್ರಿಕಾ 8 ವಿಕೆಟ್ ಕಳೆದುಕೊಂಡು 169 ರನ್ ಗಳಿಸಿ ಸೋಲನ್ನು ಅನುಭವಿಸಿದೆ. ಈ ಮೂಲಕ ಎರಡು ಬಾರಿ T20 ವಿಶ್ವಕಪ್ ಗೆದ್ದ ಏಷ್ಯಾದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಭಾರತ ತಂಡ ಪಾತ್ರವಾಗಿದೆ.
ಭಾರತದ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ 76 ರನ್ ಗಳಿಸಿದರೆ. ಅಕ್ಷರ್ ಪಟೇಲ್ 47 ರನ್ ಗಳಿಸಿ ತಂಡವನ್ನು ಸ್ಪರ್ಧಾತ್ಮಕ ಮೊತ್ತಕ್ಕೆ ಕೊಂಡೊಯ್ದಿದ್ದಾರೆ. ಒಟ್ಟಾರೆಯಾಗಿ, ಇಂಗ್ಲೆಂಡ್ ಮತ್ತು ವೆಸ್ಟ್ ಇಂಡೀಸ್ ನಂತರ ಎರಡು ಬಾರಿ ಟ್ರೋಫಿ ಗೆದ್ದ ಮೂರನೇ ತಂಡವಾಗಿದೆ. ಈ ಗೆಲುವು ICC ಟ್ರೋಪಿಗಾಗಿ ಭಾರತದ ದೀರ್ಘಕಾಲದ ಕಾಯುವಿಕೆಯನ್ನು ಕೊನೆಗೊಳಿಸಿದೆ.
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…
Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…
Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…
Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…
Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…
Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…