Guarantee Scheme: ಸರ್ಕಾರದಿಂದ ಉಚಿತ ಯೋಜನೆಯ ಲಾಭ ಪಡೆಯುತ್ತಿರುವವರಿಗೆ ಬಿಗ್ ಅಪ್ಡೇಟ್, ಇನ್ನೊಂದು ಘೋಷಣೆ
ಸರ್ಕಾರದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್, ಸರ್ಕಾರದ ಘೋಷಣೆ
Karnataka Govt Guarantee Scheme Update: ರಾಜ್ಯದಲ್ಲಿ ಮೇ ನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸರ್ಕಾರ ತನ್ನ ಅಧಿಕಾರವನ್ನು ಪಡೆದುಕೊಂಡಿದೆ. ಕಾಂಗ್ರೆಸ್ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಗೆಲುವಿಗಾಗಿ ಐದು ಉಚಿತ ಗ್ಯಾರಂಟಿ ಯೋಜನಗಳನ್ನು ಘೋಷಿಸಿತ್ತು.
ಹೀಗಾಗಿ ಜನರು ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲವನ್ನು ನೀಡಿದ್ದು, ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವನ್ನು ಆರಂಭಿಸಿದೆ. ಚುನಾವಣೆಯಲ್ಲಿ ಗೆದ್ದ ಕಾರಣ ಸರ್ಕಾರ ಐದು ಉಚಿತ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ.
![Karnataka Govt Guarantee Scheme Update](https://nadunudi.in/wp-content/uploads/2024/01/Karnataka-Govt-Guarantee-Scheme-Update.png)
ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಬಿಗ್ ಅಪ್ಡೇಟ್
ಈಗಾಗಲೇ ರಾಜ್ಯದ ಅರ್ಹ ಫಲಾನುಭವಿಗಳು ರಾಜ್ಯ ಸರ್ಕಾರದ ಶಕ್ತಿ ಯೋಜನೆ, ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನಭಾಗ್ಯ ಹಾಗೂ ಯುವ ನಿಧಿ ಯೋಜನೆಯ ಲಾಭವನ್ನು ಪಡೆಯುತ್ತಿದ್ದಾರೆ. ಐದು ಯೋಜನೆಗಳು ರಾಜ್ಯದಲ್ಲಿ ತಲೆ ಎತ್ತಿಕೊಂಡಿದೆ ಎನ್ನಬಹುದು.
ಬಡವರ ಪಾಲಿಗೆ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಬೆಳಕಾಗಿ ಬಂದಿವೆ ಎಂದರೆ ತಪ್ಪಾಗಲಾರದು. ಇನ್ನು ರಾಜ್ಯ ಸರ್ಕಾರ ಉಚಿತ ಗ್ಯಾರಂಟಿ ಯೋಜನೆಗಳಿಂದ ಯಾರು ಕೂಡ ವಂಚಿತರಾಗಬಾರದು ಎನ್ನುವ ಕಾರಣಕ್ಕೆ ವಿವಿಧ ಕ್ರಮ ಕೈಗೊಳ್ಳುತ್ತಿದೆ. ಸದ್ಯ ರಾಜ್ಯ ಸರ್ಕಾರ ರಾಜ್ಯದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದೆ. ಸರ್ಕಾರದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಈ ಮಾಹಿತಿ ಉಪಯುಕ್ತವಾಗಲಿದೆ.
![Karnataka Govt Guarantee Scheme](https://nadunudi.in/wp-content/uploads/2024/01/Karnataka-Govt-Guarantee-Scheme.png)
ಸರ್ಕಾರದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಗುಡ್ ನ್ಯೂಸ್
ಸದ್ಯ ರಾಜ್ಯ ಸರ್ಕಾರ ಸರ್ಕಾರದ ಉಚಿತ ಗ್ಯಾರಂಟಿ ಫಲಾನುಭವಿಗಳಿಗೆ ಸಿಹಿ ಸುದ್ದಿ ನೀಡಿದೆ. ಹೌದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾರಿಗೊಳಿಸಿರುವ ಉಚಿತ ಗ್ಯಾರಂಟಿ ಯೋಜನೆಗಳು ಪ್ರಯೋಜನವನ್ನು ಪ್ರತಿ ಅರ್ಹರಿಗೆ ತಲುಪಿಸುವ ಕಾರಣದಿಂದ ಜನರಲ್ಲಿ ಗ್ಯಾರಂಟಿ ಯೋಜನೆಗಳ ಅರಿವು ಮೂಡಿಸುವುದು ಅಗತ್ಯವಿದೆ. ಈ ಕಾರಣಕ್ಕೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಮತ್ತು ಜಿಲ್ಲಾ ಮಟ್ಟದಲ್ಲಿ “ಗ್ಯಾರಂಟಿ ಫಲಾನುಭವಿಗಳ ಸಮಾವೇಶ” ಆಯೋಜಿಸಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಈ ಬಗ್ಗೆ ಕಾರ್ಮಿಕ ಇಲಾಖಾ ಹಾಗು ಜಿಲಾ ಉಸ್ತುವಾರಿ ಸಚಿವರಾದ ಸಂತೋಷ್ ಅವರು ಮಾಹಿತಿ ನೀಡಿದ್ದಾರೆ.