Ration Card E-KYC Update Last Date: ರಾಜ್ಯದ ಪ್ರತಿಯೊಬ್ಬ ನಾಗರಿಕನಿಗೂ ಆಧಾರ್ ಕಾರ್ಡ್ (AAdhaar Card) ಹೇಗೆ ಮುಖ್ಯವೋ ಹಾಗೆ ಪ್ರತಿ ಕುಟುಂಬಕ್ಕೂ ಪಡಿತರ ಚೀಟಿ ಕೂಡ ಅಷ್ಟೇ ಮುಖ್ಯ ಆಗಿರುತ್ತದೆ. ರಾಜ್ಯದಲ್ಲಿ ಸರ್ಕಾರ ಒಂದಾದ ಮೇಲೊಂದು ಯೋಜನೆಗಳನ್ನು ಜಾರಿಗೆ ತರುತ್ತಿದೆ ಇಂತಹ ಎಲ್ಲಾ ಯೋಜನೆಗಳಿಗೂ ಪಡಿತರ ಚೀಟಿ ಬಹಳ ಮುಖ್ಯ ಆಗಿರುತ್ತದೆ ಹಾಗಾಗಿ ನಿಮ್ಮ ಪಡಿತರ ಚೀಟಿಯನ್ನು ರದ್ದಾಗದಂತೆ ನೋಡಿಕೊಳ್ಳುವುದು ಬಹಳ ಮುಖ್ಯ ಆಗಿದೆ.
ಅಷ್ಟೇ ಅಲ್ಲದೇ ಪಡಿತರ ಚೀಟಿ ನಮಗೆ ಗುರುತಿನ ಪುರಾವೆ ಆಗಿ ಕೂಡ ಕೆಲಸ ಮಾಡುತ್ತದೆ. ಹಾಗು ಕೆಲವು ಇಲಾಖೆಯಲ್ಲಿ ನಮ್ಮ ಕೆಲಸ ಆಗಬೇಕೆಂದರೆ ಪಡಿತರ ಚೀಟಿ ಬಹಳ ಮುಖ್ಯ ಆಗಿರುತ್ತದೆ. ಆದ್ದರಿಂದ ಪಡಿತರ ಚೀಟಿ ಕುರಿತು ಇರುವ ಈ ಪ್ರಮುಖ ವಿಚಾರಗಳನ್ನು ತಿಳಿದುಕೊಳ್ಳಿ.
ರೇಷನ್ ಕಾರ್ಡ್ ಗೆ ಇಕೆವೈಸಿ ಮಾಡಿಸುವುದು ಕಡ್ಡಾಯವಾಗಿದೆ
ಇಂದಿನ ಕಾಲದಲ್ಲಿ ಅಸಲಿ ರೇಷನ್ ಕಾರ್ಡ್ ಯಾವುದು, ನಕಲಿ ರೇಷನ್ ಕಾರ್ಡ್ ಯಾವುದು ಎಂಬುದನ್ನು ತಿಳಿಯುವುದು ಬಹಳ ಕಷ್ಟ ಆಗಿರುವುದರಿಂದ ಸರಕಾರ ಪಡಿತರ ಚೀಟಿಗಳಿಗೆ ಇಕೆವೈಸಿ ಕಡ್ಡಾಯಗೊಳಿಸಿದೆ. ನಕಲಿ ಪಡಿತರ ಚೀಟಿಯಿಂದ ಯೋಜನೆಗಳನ್ನು ದುರುಪಯೋಗ ಪಡಿಸಿಕೊಳ್ಳುತ್ತಿರುವ ಕಾರಣ ಪಡಿತರ ಚೀಟಿಗೆ E-KYC ಕಡ್ಡಾಯಗೊಳಿಸಿದ್ದಲ್ಲದೇ, E-KYC ಮಾಡಿಸದೇ ಇರುವ ಪಡಿತರ ಚೀಟಿಗಳನ್ನು ರದ್ದುಗೊಳಿಸುವುದಾಗಿ ಸೂಚನೆ ನೀಡಲಾಗಿದೆ. ಪಡಿತರ ಚೀಟಿಯನ್ನು ಇಕೆವೈಸಿ ಮಾಡಿಸಲು ಸರ್ಕಾರ ಡಿಸೆಂಬರ್ 30 ರ ತನಕ ಕಾಲಾವಕಾಶ ನೀಡಿದ್ದು, ಇದನ್ನು ಮಾಡಿಸದೇ ಹೋದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗುವ ಸಾಧ್ಯತೆಯಿದೆ.
E-KYC ಮಾಡಿಸುವ ವಿಧಾನ
ಪಡಿತರ ಚೀಟಿಗೆ ಇಕೆವೈಸಿ ಮಾಡಿಸಲು ಮೊದಲನೇದಾಗಿ ಗ್ರಾಹಕರು ತಮ್ಮ ಬ್ಯಾಂಕಿನ ಅಧಿಕೃತ ಪೋರ್ಟಲ್ ಅನ್ನು ತೆರೆಯಬೇಕು ಮತ್ತು ಲಾಗ್ ಇನ್ ಮಾಡಬೇಕು. ಅದರ ನಂತರ ಕೆವೈಸಿ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಸೂಚನೆಗಳನ್ನು ಅನುಸರಿಸಿ ಮತ್ತು ನಿಮ್ಮ ಹೆಸರು, ವಿಳಾಸ, ಹುಟ್ಟಿದ ದಿನಾಂಕ ಇತ್ಯಾದಿಗಳನ್ನು ನಮೂದಿಸಿ. ಆಧಾರ್, ಪ್ಯಾನ್ ಮತ್ತು ಇತರ ಅಗತ್ಯ ದಾಖಲೆಗಳ ಸ್ಕ್ಯಾನ್ ಮಾಡಿದ ಪ್ರತಿಗಳನ್ನು ನಂತರ ಅಪ್ಲೋಡ್ ಮಾಡಬೇಕು.
ಈ ದಾಖಲೆಗಳನ್ನು ಎರಡೂ ಬದಿಗಳಲ್ಲಿ ಸ್ಕ್ಯಾನ್ ಮಾಡುವುದು ಕಡ್ಡಾಯವಾಗಿದೆ. ಪ್ರಕ್ರಿಯೆ ಪೂರ್ಣಗೊಂಡ ನಂತರ ಸಬ್ಮಿಟ್ ಆಯ್ಕೆಯ ಮೇಲೆ ಕ್ಲಿಕ್ ಮಾಡಿ. ಇದು ನಿಮಗೆ ಸೇವಾ ವಿನಂತಿ ಸಂಖ್ಯೆಯನ್ನು ನೀಡುತ್ತದೆ. ಕೆವೈಸಿ ನವೀಕರಣ ಮಾಹಿತಿಯನ್ನು ನಂತರ ಗ್ರಾಹಕರಿಗೆ ಸಂದೇಶ ಅಥವಾ ಮೇಲ್ ಮೂಲಕ ತಿಳಿಸಲಾಗುತ್ತದೆ. ಈ ವಿಧಾನವಾಗಿ ಪಡಿತರ ಚೀಟಿಯನ್ನು ಡಿಸೆಂಬರ್ 30 ರ ಒಳಗೆ E-KYC ಮಾಡಿಸಿಕೊಳ್ಳತಕ್ಕದ್ದು.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…