Kodi Mutt Swamiji: ಕಾಂಗ್ರೆಸ್ ಎಷ್ಟು ವರ್ಷ ಅಧಿಕಾರದಲ್ಲಿ ಇರಲಿದೆ, ಇನ್ನೊಂದು ಭವಿಷ್ಯ ನುಡಿದ ಕೊಡಿ ಮಠದ ಸ್ವಾಮೀಜಿ.

ಕಾಂಗ್ರೆಸ್ ಆಡಳಿತದ ಬಗ್ಗೆ ಕೊಡಿ ಮಠದ ಸ್ವಾಮಿಗಳು ಇನ್ನೊಂದು ಭವಿಷ್ಯವನ್ನ ನುಡಿದಿದ್ದಾರೆ.

Kodi Mutt Swamiji About Congress Government: ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅದಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು.

ಅದರಂತೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮದ್ಯೆ ಇದೀಗ ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ. ಇತ್ತೀಚಿಗೆ ಕೋಲಾರ ತಾಲೂಕಿನ ಸಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಕೋಡಿಮಠದ ಶ್ರೀ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ.

The Swami of Kodi Math has predicted how many years the Congress will be in power
Image Credit: oneindia

ಕೋಡಿ ಮಠದ ಶ್ರೀಗಳ ಭವಿಷ್ಯ
ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ. ಇನ್ನು ಒಂದು ಗಂಡಾಂತರ ದೇಶಕ್ಕೆ ಕಾದಿದೆ. ಈ ವರ್ಷ ಅಚಾನಕ್ಕಾಗಿ ಗುಡುಗು ಮಿಂಚು ಬರಲಿದೆ. ಎರಡು ಮೂರೂ ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ.

ಎಲ್ಲೊ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದಿದ್ದರು. ಇದೀಗ ಸಿದ್ದರಾಮಯ್ಯ ಕಾಂಗ್ರೆಸ್ ಸರ್ಕಾರದ ಬಗ್ಗೆ ಮತ್ತೊಂದು ನಿಗೂಢವಾದ ಭವಿಷ್ಯ ನುಡಿದಿದ್ದಾರೆ.

The swamis of the Kodi Math have predicted another prediction about the Congress rule.
Image Credit: theprint

ಕಾಂಗ್ರೆಸ್ ಸರ್ಕಾರದ ಬಗ್ಗೆ ನಿಗೂಢವಾಗಿ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಕರುನಾಡಿಗೆ ಕೆಲವೊಂದು ಆಪತ್ತು ಇದೆ. ಕೆಲ ಸಾವು ನೋವುಗಳು ಆಗುತ್ತವೆ. ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತದೆ. ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ ಎಂದು ಹೇಳಿದ್ದಾರೆ.

Join Nadunudi News WhatsApp Group

ಅಲ್ಲದೆ ಇಂದು ಕಾಂಗ್ರೆಸ್ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಬಡವರಿಗೆ ಗ್ಯಾರೆಂಟಿ ಒಳ್ಳೆಯದ್ದೇ. ಯಾವ ಹೆಣ್ಣಿಗೆ ಸ್ವತಂತ್ರ ಇರಲಿಲ್ಲವೋ ಅಂತಹ ಹೆಣ್ಣು ಈಗ ಸ್ವತಂತ್ರವಾಗಿ ಹೊರಗಡೆ ಬಂದಿದ್ದಾರೆ ಎಂದು ಶಕ್ತಿ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

He prophesied about the Congress government and future disasters
Image Credit: vistaranews

ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಅಧಿಕಾರ ನಡೆಸುವ ವಿಚಾರಕ್ಕ ಪ್ರತಿಕ್ರಿಯಿಸಿದ ಶ್ರೀಗಳು, ಬಾಯಿಯ ವಾಸನೆ ಮೂಗಿಗೆ ಬಡಿಯುವುದಿಲ್ಲ, ಆದರೆ ಊರಿನಲ್ಲಿನ ಎಲ್ಲಾ ವಾಸನೆ ಮೂಗಿಗೆ ಮುಟ್ಟುತ್ತೆ ಎಂದು ನಿಗೂಢ ಅರ್ಥದಲ್ಲಿ ಮಾತನಾಡಿದರು. ಕೋಡಿಮಠದ ಸ್ವಾಮೀಜಿಯ ಈ ನಿಗೂಢ ಮಾತು ಕಾಂಗ್ರೆಸ್ ಸರ್ಕಾರ 5 ವರ್ಷ ಇರುತ್ತಾ ಎಂಬ ಗೊಂದಲಕ್ಕೆ ಒಳಗಾಗಿದೆ.

Join Nadunudi News WhatsApp Group