Kodi Mutt: ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದ ಕೊಡಿ ಮಠದ ಸ್ವಾಮೀಜಿ, ಒಂದೇ ಪಕ್ಷಕ್ಕೆ ಬರಲಿದೆ.
ಕರ್ನಾಟಕದ ಚುನಾವಣೆಯ ಫಲಿತಾಂಶದ ಬಗ್ಗೆ ಕೊಡಿ ಮಠದ ಸ್ವಾಮಿಗಳು ಭವಿಷ್ಯವನ್ನ ನುಡಿದಿದ್ದಾರೆ.
Kodi Mutt Swamiji About Karnataka Eelection: ವಿಧಾನಸಭಾ ಚುನಾವಣೆ (Assembly Election) ಹತ್ತಿರಬರುತ್ತಿದೆ. ಎಲ್ಲ ಪಕ್ಷದ ಅಭ್ಯರ್ಥಿಗಳು ಚುನಾವಣಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. 2023 ರ ಕರ್ನಾಟಕ ವಿಧಾನಸಭಾ ಚುನಾವಣಾ ಬಾರಿ ಪೈಪೋಟಿಯಲ್ಲಿ ಇದೆ ಎನ್ನಬಹುದು. ಬಿಜೆಪಿ, ಕಾಂಗ್ರೆಸ್ ಹಾಗು ಜೆಡಿಎಸ್ (JDS) ಈ ಬಾರಿ ಚುನಾವಣೆಯಲ್ಲಿ ಬಾರಿ ಪೈಪೋಟಿಗೆ ಇಳಿದಿದೆ.
ಈಗಾಗಲೇ ಈ ಮೂರೂ ಸರ್ಕಾರಗಳು ಜನರಿಗೆ ಸಾಕಷ್ಟು ಭರವಸೆಯನ್ನು ನೀಡಿದೆ. ಆದರಿಂದ ಜನರು ಈ ಬಾರಿ ಯಾವ ಪಕ್ಷಕ್ಕೆ ಮತ ಚಲಾಯಿಸಬೇಕೆಂಬ ಗೊಂದಲದಲ್ಲಿ ಇದ್ದಾರೆ. ಈ ನಡುವೆ ಕೋಡಿಮಠ ಶ್ರೀಗಳು ಚುನಾವಣೆಯ ಬಗ್ಗೆ ಭವಿಷ್ಯ ನುಡಿದಿದ್ದಾರೆ.
![Mr. Kodi mutt has predicted the election.](https://nadunudi.in/wp-content/uploads/2023/05/kodi-mutt-swamiji.png)
ವಿಧಾನಸಭಾ ಚುನಾವಣೆಯ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀಗಳು ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದಾರೆ. ರಾಜಕೀಯ, ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಇವರ ಭವಿಷ್ಯಗಳು ನಿಖರವಾಗಿರುತ್ತದೆ ಎಂಬ ನಂಬಿಕೆ ಇದೆ.
![kodi mutt swami said that only one party will get majority in the state.](https://nadunudi.in/wp-content/uploads/2023/05/basavaraj-bommai-and-siddaramaiah.png)
ರಾಜ್ಯದಲ್ಲಿ ಒಂದೇ ಪಕ್ಷ ಬಹುಮತ ಪಡೆದುಕೊಳ್ಳುತ್ತದೆ ಎಂದ ಕೋಡಿಮಠದ ಶ್ರೀಗಳು
ರಾಜ್ಯದಲ್ಲಿ ಪ್ರಸ್ತುತ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು ಕೋಡಿಮಠ ಶ್ರೀಗಳು ಈ ಕುರಿತಾಗಿ ಭವಿಷ್ಯ ವಾಣಿ ನುಡಿದಿದ್ದಾರೆ.
ರಾಜ್ಯದಲ್ಲಿ ಒಂದು ಪಕ್ಷ ಮಾತ್ರ ಅಧಿಕಾರಕ್ಕೆ ಬರುತ್ತದೆ. ಈ ಬಾರಿ ಸಮಿಶ್ರ ಸರ್ಕಾರ ಅಧಿಕಾರಕ್ಕೆ ಬರುವುದಿಲ್ಲ. ಒಂದೇ ಪಕ್ಷ ಬಹುಮತ ಪಡೆದುಕೊಳ್ಳುತ್ತದೆ ಎಂದು ಕೋಡಿ ಮಠದ ಶ್ರೀಗಳು ಹೇಳಿದ್ದಾರೆ. ಇದೀಗ ಶ್ರೀಗಳ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.