Kodi Mutt: ಘೋರ ದುರಂತದ ಬಗ್ಗೆ ಇನ್ನೊಂದು ಭವಿಷ್ಯ ನುಡಿದ ಕೊಡಿ ಮಠದ ಸ್ವಾಮಿಗಳು, ಅಪಾಯ ಕಟ್ಟಿಟ್ಟ ಬುತ್ತಿ.

ಮುಂದಿನ ದಿನಗಳಲ್ಲಿ ಆಗಲಿರುವ ಇನ್ನೊಂದು ಜಲಪ್ರಳಯದ ಬಗ್ಗೆ ಕೊಡಿ ಮಠದ ಸ್ವಾಮಿಗಳು ಭವಿಷ್ಯವನ್ನ ನುಡಿದಿದ್ದಾರೆ.

Kodi Mutt Swamiji Latest Predict: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀಗಳು ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ. ರಾಜಕೀಯ, ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಇವರ ಭವಿಷ್ಯಗಳು ನಿಖರವಾಗಿರುತ್ತದೆ ಎಂಬ ನಂಬಿಕೆ ಸಾಕಷ್ಟು ಜನರಿಗೆ ಇದೆ.

Kodi Mutt Swamiji Latest Predict
Image Source: Youtube

ಮತ್ತೊಂದು ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅಧಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದೀಗ ಕೋಡಿಮಠದ ಸ್ವಾಮೀಜಿ ಮತ್ತೊಂದು ಭವಿಷ್ಯ ನುಡಿದಿದ್ದಾರೆ.

ಮಳೆಯಾಗುವ ಬಗ್ಗೆ ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ
ಮುಂದಿನ ದಿನಗಳಲ್ಲಿ ಉತ್ತಮ ಮಳೆಯಾಗಲಿದ್ದು ಜಲಪ್ರಳಯ ಆಗುವ ಲಕ್ಷಣಗಳಿವೆ. ಒಂದೆರಡು ರಾಷ್ಟ್ರಗಳು ಮುಳುಗುವ ಸಾಧ್ಯತೆ ಇದೆ. ಪ್ರಕೃತಿ ಮುನಿದಿದ್ದು ಸರಿಯಾಗಲಿದೆ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ವಿಜಯದಶಮಿಯಿಂದ ಸಂಕ್ರಾಂತಿಯ ತನಕ ಜಗತ್ತಿನಲ್ಲಿ ದುರ್ಘಟನೆ ನಡೆಯುತ್ತದೆ. ಆಳುವವರು ಅರಿತರೆ ಗಂಡಾತರದಿಂದ ಪಾರಾಗಬಹುದು ಎಂದು ಸ್ವಾಮಿಗಳು ಹೇಳಿದ್ದಾರೆ.

Kodi Mutt Swamiji Latest Predict
Image Source: Youtube

ಇಲ್ಲಾ ಗಂಡಾಂತರ ಕಟ್ಟಿಟ್ಟ ಬುತ್ತಿ ಎಂದು ಸರ್ಕಾರಗಳಿಗೆ ಸ್ವಾಮೀಜಿ ಸಲಹೆ ನೀಡಿದರು. ಕರುನಾಡಿಗೂ ಕೆಲವೊಂದು ಆಪತ್ತು ಇದೆ. ಕೆಲವು ಸಾವು ನೋವುಗಳು ಆಗುತ್ತವೆ. ದೈವ ಕೃಪೆಯಿಂದ ಪಾರಾಗಬಹುದು. ಭಾರತದಲ್ಲಿ ನಾನು ಹೇಳಿದಂತೆ ಒಂದು ಘಟನೆ ಆಗುತ್ತದೆ. ತಪ್ಪಿಸುವಂತದ್ದು ಆಳುವವರ ಕೈಯಲ್ಲಿದೆ ಅನ್ನುವುದನ್ನು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

ಇನ್ನು ಬೇರೆ ಎಲ್ಲೊ ಬಾಂಬ್ ಸ್ಫೋಟದಂತಹ ಘಟನೆಗಳು ಸಂಭವಿಸಿ ವಿಷಾನಿಲದಿಂದ ಭಾರತದಲ್ಲಿ ಜನರು ಅಕಾಲಿಕವಾಗಿ ಸಾವನ್ನಪ್ಪುವ ಸಂಭವ ಇದೆ ಎಂದು ಸಹ ಸ್ವಾಮೀಜಿ ಹೇಳಿದ್ದಾರೆ.

Join Nadunudi News WhatsApp Group

Join Nadunudi News WhatsApp Group