Kodi Mutt Predict: ದೇಶಕ್ಕೆ ಕಾದಿದೆ ಇನ್ನೊಂದು ಗಂಡಾಂತರ, ಇನ್ನೊಂದು ಆಘತಕಾರಿ ಭವಿಷ್ಯ ನುಡಿದ ಕೊಡಿ ಮಠದ ಸ್ವಾಮಿಗಳು.
ಆಘಾತಕರ ಭವಿಷ್ಯ ನುಡಿದ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ.
Kodi Mutt Swamiji Predict: ನಿಖರ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಶ್ರೀಗಳು ವಿಧಾನಸಭಾ ಚುನಾವಣೆ ಫಲಿತಾಂಶದ ಬಗ್ಗೆ ಭವಿಷ್ಯ ನುಡಿದಿದ್ದರು. ಆ ಭವಿಷ್ಯ ಇದೀಗ ನಿಜವಾಗಿದೆ.
ರಾಜಕೀಯ, ವಿದ್ಯಮಾನ, ಮಳೆ ಮೊದಲಾದ ವಿಚಾರಗಳ ಬಗ್ಗೆ ಕೋಡಿಮಠ ಶ್ರೀಗಳಾದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯವಾಣಿ ನುಡಿಯುತ್ತಾರೆ. ಇವರ ಭವಿಷ್ಯಗಳು ನಿಖರವಾಗಿರುತ್ತದೆ ಎಂಬ ನಂಬಿಕೆ ಸಾಕಷ್ಟು ಜನರಿಗೆ ಇದೆ.
ಕೋಡಿಮಠದ ಶ್ರೀಗಳ ಭವಿಷ್ಯ
ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಕೋಡಿಮಠದ ಸ್ವಾಮೀಜಿ ನುಡಿದಿದ್ದ ಭವಿಷ್ಯ ನಿಜವಾಗಿದೆ. ಯಾವುದೇ ಪಕ್ಷಗಳು ಒಟ್ಟಾಗಿ ಹೋಗುವುದಿಲ್ಲ. ಪಕ್ಷಾಂತರಗಳು ಹೆಚ್ಚಲಿವೆ. ಆದರೆ ಒಂದೇ ಪಕ್ಷ ಅದಿಕಾರವನ್ನು ಹಿಡಿಯಲಿದೆ ಎಂದು ಹೇಳಿದ್ದರು. ಅದರಂತೆ ಈಗ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಏಕಾಂಗಿಯಾಗಿ ಅಧಿಕಾರಕ್ಕೆ ಬಂದಿದೆ. ಇದರ ಮದ್ಯೆ ಇದೀಗ ಕೋಡಿಮಠದ ಡಾ. ಶಿವಾನಂದ ಮಹಾ ಸ್ವಾಮೀಜಿ ಮತ್ತೊಂದು ಆಘಾತಕರ ಭವಿಷ್ಯ ನುಡಿದಿದ್ದಾರೆ.
ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು
ಇಂದು ಜೂನ್ 8 ರಂದು ಕೋಲಾರ ತಾಲೂಕಿನ ಸಾಗಟೂರು ಗ್ರಾಮದ ಯೋಗಿ ನಾರಾಯಣ ಮಠಕ್ಕೆ ಕೋಡಿಮಠದ ಶ್ರೀ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಅವರು ಈ ಹಿಂದೆ ಹೇಳಿದಂತೆ ರಾಜ್ಯದಲ್ಲಿ ಬಹುಮತದ ಸರ್ಕಾರ ಬಂದಿದೆ. ಈ ವರ್ಷದಲ್ಲಿ ದೊಡ್ಡ ಅವಘಡ ನಡೆಯುತ್ತೆ ಎಂದು ಹೇಳಿದ್ದೆ ಅದರಂತೆ ರೈಲು ದುರಂತ ನಡೆದಿದೆ. ಇನ್ನು ಒಂದು ಗಂಡಾಂತರ ದೇಶಕ್ಕೆ ಕಾದಿದೆ.
ಈ ವರ್ಷ ಅಚಾನಕ್ಕಾಗಿ ಗುಡುಗು ಮಿಂಚು ಬರಲಿದೆ. ಎರಡು ಮೂರೂ ರಾಷ್ಟ್ರಗಳು ನೀರಿನಲ್ಲಿ ಮುಳುಗಡೆಯಾಗಲಿದೆ. ಎಲ್ಲೊ ನಡೆದ ಬಾಂಬ್ ದಾಳಿಯಿಂದ ಸಾಕಷ್ಟು ನಮಗೆ ಅನಾಹುತ ಸಂಭವಿಸಲಿದೆ ಎಂದು ಆಘಾತಕಾರಿ ಭವಿಷ್ಯ ನುಡಿದರು. ಅಲ್ಲದೆ ಗಿಡ, ಮರ, ದೈವದ ಆರಾದ್ಯದ ಸಂಕೇತ ಮತ್ತೆ ಕೈವಾರ ತಾತನ್ಯನವರು ಹುಟ್ಟಿ ಬರುವ ಸಂಕೇತ ಇದೆ. ಅಂತಹ ಸೂಚನೆ ಈಗಾಗಲೇ ಸಿಕ್ಕಿದೆ ಎಂದಿದ್ದಾರೆ.