ದೇಶದಲ್ಲಿ ದಿನದಿನಕ್ಕೆ ಹೊಸ ಹೊಸ ಯೋಜನೆ ಜಾರಿಗೆ ಬರುತ್ತಿದೆ ಎಂದು ಹೇಳಿದರೆ ತಪ್ಪಾಗಲ್ಲ. ಜನರಿಗೆ ಅನುಕೂಲ ಆಗಲಿ ಅನ್ನುವ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರ ಹಲವು ಯೋಜನೆಯನ್ನ ಜಾರಿಗೆ ತಂದಿದ್ದು ಈ ಯೋಜನೆಯ ಲಾಭವನ್ನ ಜನರು ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ದೇಶದಲ್ಲಿ ಕೋಟಿ ಕೋಟಿ ಜನರು ಪಡಿತರ ಚೀಟಿಯನ್ನ ಬಳಕೆ ಮಾಡುತ್ತಿದ್ದು ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ ಹೋಗಿ ಪಡಿತರ ದಾನ್ಯವನ್ನ ಪಡೆದುಕೊಳ್ಳುತ್ತಿದ್ದಾರೆ ಎಂದು ಹೇಳಬಹುದು. ಇನ್ನು ನಮಗೆ ಬಂದಿರುವ ಮಾಹಿತಿಯ ಪ್ರಕಾರ ದೇಶದಲ್ಲಿ ಸರ್ಕಾರ ಸುಮಾರು 81 ಕೋಟಿಗೂ ಅಧಿಕ ಜನರಿಗೆ ಆಹಾರ ದಾನ್ಯವನ್ನ ಪೂರೈಕೆ ಮಾಡುತ್ತಿದೆ ಎಂದು ತಿಳಿದು ಬಂದಿದೆ.
ಇನ್ನು ದೇಶದಲ್ಲಿ ಈಗ ಪ್ರತಿ ತಿಂಗಳು ಆಹಾರ ದಾನ್ಯವನ್ನ ಪಡೆದುಕೊಳ್ಳುತ್ತಿರುವವರಿಗೆ ಕೇಂದ್ರ ಸರ್ಕಾರ ಬಂಪರ್ ಗುಡ್ ನ್ಯೂಸ್ ನೀಡಿದ್ದು ಇದರಿಂದ ಜನರಿಗೆ ಬಹಳ ಅನುಕೂಲ ಆಗಲಿದೆ ಎಂದು ಹೇಳಬಹುದು. ಹಾಗಾದರೆ ಏನದು ಗುಡ್ ವಸ್ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತೀವಿ ಪೂರ್ತಿಯಾಗಿ ಓದಿ ಮತ್ತು ಇದರ ಬಗ್ಗೆ ನಿಮ್ಮ ಅನಿಸಿಕೆಯನ್ನ ನಮಗೆ ತಿಳಿಸಿ. ಕೇಂದ್ರ ಸರ್ಕಾರವು ಪಡಿತರ ಚೀಟಿದಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಡಿತರ ಚೀಟಿದಾರರಿಗೆ ಮೇರಾ ರೇಷನ್ ಅಪ್ಲಿಕೇಷನ್ ಅಭಿವೃದ್ಧಿ ಪಡಿಸಿದೆ.
ಇನ್ನು ಈ ಮೇರಾ ರೇಷನ್ ಅಪ್ಲಿಕೇಶನ್ ಪಡಿತರ ಚೀಟಿದಾರರಿಗೆ ಬಹಳ ಸಹಕಾರಿಯಾಗಲಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ಮೇರಾ ರೇಷನ್ ಅಪ್ಲಿಕೇಶನ್ ಹೆಚ್ಚಾಗಿ ವಲಸೆ ಜನರಿಗೆ ಬಹಳ ಸಹಕಾರಿ ಆಗಲಿದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟನೆಯನ್ನ ನೀಡಿದೆ. ಇನ್ನು ಈ ಮೇರಾ ಪಡಿತರ ಮೊಬೈಲ್ ಅಪ್ಲಿಕೇಶನ್ ಪಡಿತರ ಕಾರ್ಡ್ ದಾರರಿಗೆ, ವಿಶೇಷವಾಗಿ ವಲಸೆ ಫಲಾನುಭವಿಗಳಿಗೆ ಹತ್ತಿರದ ನ್ಯಾಯ ಬೆಲೆ ಅಂಗಡಿಯನ್ನು ಗುರುತಿಸಲು ಮತ್ತು ಅವರ ಅರ್ಹತೆ ಮತ್ತು ಇತ್ತೀಚಿನ ವಹಿವಾಟುಗಳ ವಿವರಗಳನ್ನು ಪರಿಶೀಲಿಸಲು ಸಹಾಯಕವಾಗಿದೆ.
ಇನ್ನು ಮಾರ್ಚ್ 12 ನೇ ತಾರೀಕಿನಂದು ಬಿಡುಗಡೆಯಾಗಿರುವ ಈ ಅಪ್ಲಿಕೇಶನ್ ಅನ್ನುವ ಸುಮಾರು 5 ಹೆಚ್ಚು ಜನರು ಡೌನ್ಲೋಡ್ ಮಾಡಿ ಬಳಕೆ ಮಾಡುತ್ತಿದ್ದಾರೆ. ನ್ಯಾಷನಲ್ ಇನ್ಫರ್ಮ್ಯಾಟಿಕ್ಸ್ ಸೆಂಟರ್ (ಎನ್ ಐಸಿ) ಅಭಿವೃದ್ಧಿಪಡಿಸಿದ ಆಂಡ್ರಾಯ್ಡ್ ಆಧಾರಿತ ಮೊಬೈಲ್ ಅಪ್ಲಿಕೇಶನ್ ಪ್ರಸ್ತುತ ಹಿಂದಿ ಮತ್ತು ಇಂಗ್ಲಿಷ್ ನಲ್ಲಿ ಲಭ್ಯವಿದೆ, ಕ್ರಮೇಣ ಇದು 14 ಭಾಷೆಗಳಲ್ಲಿ ಲಭ್ಯವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ. ಸದ್ಯ ಈ ಅಪ್ಲಿಕೇಶನ್ ಇನ್ನಷ್ಟು ಡೌನ್ಲೋಡ್ ಮಾಡುತ್ತಿದ್ದು ಉಳಿದ ಭಾಷೆಯಲ್ಲಿ ಬಂದನಂತರ ಬಹುತೇಕ ಎಲ್ಲಾ ಜನರು ಡೌನ್ಲೋಡ್ ಮಾಡಲಿದ್ದಾರೆ ಎಂದು ಹೇಳಬಹುದು. ಸ್ನೇಹಿತರೆ ಈ ಅಪ್ಲಿಕೇಶನ್ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.