Image Source: Kannada News
Milk Price Hike In Karnataka: ಹಾಲು (Milk) ದಿನನಿತ್ಯ ಬಳಕೆಯ ಪದಾರ್ಥ ಆಗಿದ್ದು, ಪ್ರತಿಯೊಬ್ಬರ ಮನೆಯಲ್ಲೂ ಹೆಚ್ಚಾಗಿ ಹಾಲು ಬಳಕೆ ಮಾಡುತ್ತಾರೆ. ಆಗಸ್ಟ್ ನಲ್ಲಿ ಈಗಾಗಲೇ ಎಲ್ಲಾ ಕಂಪನಿಯ ಹಾಲು ಬೆಲೆಯಲ್ಲಿ ಭಾರಿ ಏರಿಕೆ ಆಗಿದ್ದನ್ನು ನೋಡಬಹುದು. ಎಷ್ಟೇ ಬೆಲೆ ಏರಿಕೆ ಆದರೂ ಹಾಲು ಅವಶ್ಯಕ ಆಗಿರುವುದರಿಂದ ಜನ ಸಾಮಾನ್ಯರು ಖರೀದಿಸಲೇ ಬೇಕಾಗಿದೆ.
ಹಾಲು ಬಳಸುವ ಗ್ರಾಹಕರಿಗೆ ಇನ್ನೊಂದು ಬಿಗ್ ಶಾಕ್ ಹೊರ ಬಂದಿದ್ದು, ಮತ್ತೆ ಹಾಲಿನ ದರದಲ್ಲಿ ಭಾರಿ ಏರಿಕೆ ಆಗುವ ಕುರಿತು ಪಶುಸಂಗೋಪನಾ ಸಚಿವ ಕೆ.ವೆಂಕಟೇಶ ಹೇಳಿದ್ದಾರೆ. ಅದರಲ್ಲೂ ನಂದಿನಿ ಹಾಲಿನ ಬೆಲೆಯಲ್ಲಿ ಬಾರಿ ಏರಿಕೆ ಆಗಲಿದೆ ಎಂಬ ವರದಿ ಆಗಿದೆ.
ಹಾಲಿನ ಬೆಲೆಯಲ್ಲಿ ಭಾರಿ ಏರಿಕೆ
ಸಚಿವ ಕೆ.ವೆಂಕಟೇಶ ಅವರು ನಂದಿನಿ ಹಾಲಿನ ಬೆಲೆಯನ್ನು ಏರಿಸುವ ಕುರಿತು ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು. ಕಳೆದ ಆಗಸ್ಟ್ ನಲ್ಲಿ ಪ್ರತೀ ಲೀಟರ್ಗೆ 3 ರೂ.ಹೆಚ್ಚಿಸಲಾಗಿತ್ತು. ಅದಾದ ಬಳಿಕ ಇದೀಗ ಮತ್ತೆ ನಂದಿನಿ ಹಾಲಿನ ಬೆಲೆ ಏರಿಕೆ ಮಾಡಲು ಕೆಎಂಎಫ್ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದರು. ಆಗಸ್ಟ್ ನಲ್ಲಿ ಬೆಲೆ ಏರಿಕೆಯ ನಂತರ ನಂದಿನಿ ಹಾಲಿನ ದರವು ಪ್ರತಿ ಲೀಟರ್ ಟೋನ್ಡ್ ಹಾಲಿಗೆ 42 ರೂ., ಹೋಮೋಜೆನೈಸ್ಡ್ ಹಾಲಿಗೆ 43 ರೂ., ಪಾಶ್ಚರೀಕರಿಸಿದ ಹಾಲಿಗೆ 46 ರೂ. ಮತ್ತು ಶುಭಂ ವಿಶೇಷ ಹಾಲಿಗೆ 48 ರೂ. ಆಗಿದೆ.
ರೈತರಿಗೆ ಸಹಾಯ ಆಗುವ ನಿಟ್ಟಿನಲ್ಲಿ ಈ ಕ್ರಮ ಜಾರಿ
ಹಾಲಿನ ಬೆಲೆಯನ್ನು ಮತ್ತೆ ಏರಿಕೆ ಮಾಡಲು ಬಹಳ ಪ್ರಮುಖ ಆದ ಕಾರಣವೇನೆಂದರೆ ಹಸುಗಳ ಮೇವಿನ ದರದಲ್ಲಿ ಏರಿಕೆ ಆಗಿರುವುದು. ಹಸು ಸಾಕುವವರಿಗೆ ಹಸುವಿಗೆ ಮೇವು ಹಾಕುವುದು ಬಹಳ ಕಷ್ಟ ಆಗುತ್ತಿದೆ, ಹುಲ್ಲು ಹಾಗು ಇನ್ನಿತರ ಹಸುವಿನ ಫುಡ್ ಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿದ್ದು, ಇದೇ ಕಾರಣಕ್ಕಾಗಿ ಹಾಲಿನ ಬೆಲೆಯಲ್ಲಿ ಏರಿಕೆ ಮಾಡಲಾಗುತ್ತಿದೆ ಎನ್ನಲಾಯಿತು, ರೈತರಿಗೆ ಪ್ರಯೋಜನವಾಗುವುದಾದರೆ ಈ ಕ್ರಮವನ್ನು ಪಕ್ಷಾತೀತವಾಗಿ ಬೆಂಬಲಿಸಲು ಸಿದ್ಧ ಎಂದು ಪರಿಷತ್ ಸದಸ್ಯರು ತಮ್ಮ ಬೆಂಬಲ ಸೂಚಿಸಿದ್ದಾರೆ.
ಸರಿಯಾದ ಬೆಂಬಲ ದೊರೆತರೆ ಹಾಲಿನ ಬೆಲೆಯಲ್ಲಿ ಏರಿಕೆ ಆಗಲಿದೆ
ಸದ್ಯದ ಸವಾಲುಗಳಿಗೆ ಸ್ಪಂದಿಸಿ ಸರ್ಕಾರವು ಈಗಾಗಲೇ ಹಾಲಿನ ಪ್ರೋತ್ಸಾಹಧನವನ್ನು 3 ರೂ.ಗಳಷ್ಟು ಹೆಚ್ಚಿಸಿದೆ ಮತ್ತು ಹಾಲಿನ ಬೆಲೆಯಲ್ಲಿ ಮತ್ತಷ್ಟು ಹೆಚ್ಚಳದ ಬಗ್ಗೆ ಮುಕ್ತ ಮನಸ್ಸು ಹೊಂದಿದೆ ಎಂದು ಅವರು ಹೇಳಿದರು. ಅಷ್ಟೇ ಅಲ್ಲದೆ ಎಲ್ಲಾ ಹಾಲು ಉತ್ಪದಕರಿಂದ ಬೆಂಬಲ ದೊರೆಯುವುದು ಮುಖ್ಯ ಆಗಿದೆ.
ನಂದಿನಿ ಬ್ರಾಂಡ್ನಲ್ಲಿ ಮಾರಾಟವಾಗುವ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಹಾಲಿನ ಚಿಲ್ಲರೆ ಮಾರಾಟ ಬೆಲೆ ಏರಿಕೆಗೆ ವಿರೋಧ ಪಕ್ಷಗಳು ಸೇರಿದಂತೆ ಎಲ್ಲರಿಂದ ಬೆಂಬಲ ದೊರೆತರೆ ಮಾತ್ರ ಸರ್ಕಾರವು ಮುಂದುವರಿಯುತ್ತದೆ ಎಂದು ಸಚಿವರು ಹೇಳಿದರು.
Sumalatha Ambareesh About Darshan: ಸದ್ಯ ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ…
Fujiyama Classic Electric Scooter: ದೇಶದಲ್ಲಿ ಇತ್ತೀಚಿಗೆ ಎಲೆಕ್ಟ್ರಿಕ್ ವಾಹನಗಳ (Electric Vehicle) ಬಿಡುಗಡೆ ಹೆಚ್ಚಾಗಿ ಕಂಡುಬಂದಿದೆ. ಗ್ರಾಹಕರಿಗೆ ಬೇಕಾದ…
Income Tax Notice Update: ದೇಶದಲ್ಲಿ ತೆರಿಗೆ ನಿಯಮಗಳು ಎಷ್ಟು ಕಠಿಣವಾಗಿದೆ ಎನ್ನುವ ಬಗ್ಗೆ ಎಲ್ಲರಿಗು ತಿಳಿದಿದೆ. ಆದಾಯ ಇಲಾಖೆಯು…
Vinay Rajkumar Marriage Photo Viral: ಸದ್ಯ ದೊಡ್ಮನೆಯ ಕುಡಿಯಾಗಿರುವ ಯುವ ರಾಜಕುಮಾರ್ ಅವರ ವಿಚ್ಛೇದನದ ಸುದ್ದಿ ಎಲ್ಲರಿಗು ತಿಳಿದಿರಬಹುದು.…
Renault Kwid Price And Feature: ಪ್ರಸ್ತುತ ದೇಶಿಯ ಮಾರುಕಟ್ಟೆಯಲ್ಲಿ ವಿಭಿನ್ನ ರೂಪಾಂತರ ಕಾರ್ ಗಳು ಲಭ್ಯವಿದೆ. ದೇಶದ ಜನಪ್ರಿಯ…
Gruha Lakshmi New Update: ಈಗಾಗಲೇ ರಾಜ್ಯ ಸರ್ಕಾರ ಗೃಹ ಲಕ್ಷ್ಮಿ ಯೋಜನೆಯಡಿ 11 ಕಂತುಗಳ ಹಣವನ್ನು ಬಿಡುಗಡೆ ಮಾಡಿದೆ.…