Image Credit: Original Source
New Rule For Govt Employees: ಪ್ರಸ್ತುತ ರಾಜ್ಯದಲ್ಲಿ ಅನೇಕ ರೀತಿಯ ಹೊಸ ಹೊಸ ನಿಯಮಗಳು ಜಾರಿಯಾಗಿವೆ. ರಾಜ್ಯ ಸರ್ಕಾರ ಇದೀಗ ಸರ್ಕಾರೀ ನೌಕರರಿಗೆ ಹೊಸ ಆದೇಶವನ್ನು ಹೊರಡಿಸಿದೆ. ಪ್ರತಿ ಸರ್ಕಾರೀ ನೌಕರರು ಕೂಡ ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸುವುದು ಅಗತ್ಯವಾಗಿದೆ. ಸರ್ಕಾರ ನಿಗದಿಪಡಿಪಡಿಸಿರುವ ದಿನಾಂಕದೊಳಗೆ ಈ ಕೆಲಸಗಳನ್ನು ಮುಗಿಸುವುದು ಅಗತ್ಯವಾಗಿದೆ.
ಎಲ್ಲಾ ಸರ್ಕಾರೀ ನೌಕರರಿಗೆ ಹೊಸ ಆದೇಶ
ಇನ್ನು 2023-24 ವರ್ಷಕ್ಕೆ ಸಂಬಂಧಿಸಿದಂತೆ ಏಪ್ರಿಲ್ ಅಂತ್ಯದೊಳಗೆ ಆಸ್ತಿ ಮತ್ತು ಋಣ ಪಟ್ಟಿಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರ ಎಲ್ಲಾ ನೌಕರರು/ಅಧಿಕಾರಿಗಳಿಗೆ ಸೂಚನೆ ನೀಡಿದೆ. ಮೇಲಿನವುಗಳಿಗೆ ಸಂಬಂಧಿಸಿದಂತೆ ಸದರಿ ಅಧಿಕೃತ ಜ್ಞಾಪಕ ಪತ್ರ ಮತ್ತು ಸುತ್ತೋಲೆಯಲ್ಲಿ, ಸರ್ಕಾರಿ ನೌಕರರು ತಮ್ಮ ಆಸ್ತಿ ಮತ್ತು ಹೊಣೆಗಾರಿಕೆಗಳ ಪಟ್ಟಿಯನ್ನು ಸಕಾಲದಲ್ಲಿ ಸಲ್ಲಿಸಲು ಸೂಚಿಸಲಾಗಿದೆ ಮತ್ತು ಪಟ್ಟಿಯನ್ನು ಸಕ್ಷಮ ಅಧಿಕಾರಿಗಳು ಪರಿಶೀಲಿಸಬೇಕು ಎಂದು ಸೂಚನೆ ನೀಡಲಾಗಿದೆ.
ಸರ್ಕಾರೀ ನೌಕರರಿಗೆ ಈ ಮಾರ್ಗಸೂಚಿಯನ್ನು ನೀಡಲಾಗಿದೆ
•ಎಲ್ಲಾ ಸರ್ಕಾರಿ ನೌಕರರಿಗೆ (ಗ್ರೂಪ್-ಡಿ ನೌಕರರು ಸೇರಿದಂತೆ) ನೀತಿ ನಿಯಮಗಳ 24 ರ ಉಪ ನಿಯಮ (2) ನಿಗದಿತ ನಮೂನೆಯಲ್ಲಿ ಮಾರ್ಚ್ 31-2024 ರಂತೆ ಅವರ ಆಸ್ತಿ ಮತ್ತು ಹೊಣೆಗಾರಿಕೆಗಳ ವಾರ್ಷಿಕ ಪಟ್ಟಿಗಳನ್ನು ಭರ್ತಿ ಮಾಡಬೇಕು ಮತ್ತು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ನಿಗದಿತ ಅಧಿಕಾರಿಗಳಿಗೆ ಸಲ್ಲಿಸಬೇಕು.
•ಗ್ರೂಪ್-ಸಿ ಮತ್ತು ಗ್ರೂಪ್-ಡಿ ನೌಕರರಿಗೆ ಸಂಬಂಧಿಸಿದಂತೆ, ಆಯಾ ಜಿಲ್ಲಾ ಮಟ್ಟದಲ್ಲಿ ಖಜಾನೆ ಇಲಾಖೆಯ ಕಚೇರಿಯ ಮುಖ್ಯಸ್ಥರು ತನಿಖಾ ಅಧಿಕಾರಿಯಾಗಿರುತ್ತಾರೆ.
•ತನಿಖಾ ಅಧಿಕಾರಿಗಳು ಈ ಪಟ್ಟಿಯಲ್ಲಿ ತೋರಿಸಿರುವ ವಹಿವಾಟುಗಳು ನಿಯಮಿತವಾಗಿದೆಯೇ ಮತ್ತು ನೌಕರರು ಗಳಿಸಿದ ಆಸ್ತಿಗಳು ಅವರು ಗಳಿಸಿದ ಆದಾಯಕ್ಕೆ ಅನುಗುಣವಾಗಿವೆಯೇ ಎಂದು ಬಹಳ ಎಚ್ಚರಿಕೆಯಿಂದ ಪರಿಶೀಲಿಸಬೇಕು, ಅಂತಹ ತನಿಖೆಯ ನಂತರ ಯಾವುದೇ ಉದ್ಯೋಗಿ ತನ್ನ ಗಳಿಸಿದ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಹೊಂದಿದ್ದರೆ ಅದಕ್ಕೆ ಸಮರ್ಥನೆಯನ್ನು ನೀಡದಿದ್ದರೆ, ಅವನ ವಿರುದ್ಧ ಶಿಸ್ತು ಕ್ರಮವನ್ನು ತೆಗೆದುಕೊಳ್ಳತಕ್ಕದ್ದು ಮತ್ತು ಅಂತಹ ಪ್ರಕರಣಗಳನ್ನು ಲೋಕಾಯುಕ್ತಕ್ಕೆ ತಪಾಸಣೆಗೆ ಒಪ್ಪಿಸಲು ಕ್ರಮ ಕೈಗೊಳ್ಳಬೇಕಾಗುತ್ತದೆ.
•ಅಂತಹ ಲೆಕ್ಕಪರಿಶೋಧನೆಯ ಫಲಿತಾಂಶವನ್ನು (ಅನುಬಂಧ-01 ರಲ್ಲಿ ಲಗತ್ತಿಸಲಾಗಿದೆ) ದೃಢೀಕರಣದೊಂದಿಗೆ 2 ತಿಂಗಳೊಳಗೆ ಖಜಾನೆ ಆಯುಕ್ತರಿಗೆ ತಿಳಿಸಬೇಕು.
•ಗ್ರೂಪ್ ‘ಸಿ’ ಮತ್ತು ‘ಡಿ’ ಉದ್ಯೋಗಿಗಳು ಖಜಾನೆ ಕಮಿಷನರೇಟ್ ಗೆ ಆಸ್ತಿ ಮತ್ತು ಋಣ ಪಟ್ಟಿಯನ್ನು ಕಳುಹಿಸುವ ಅಗತ್ಯವಿಲ್ಲ. ಇದನ್ನು ಆಯಾ ಜಿಲ್ಲಾ ಖಜಾನೆ ಮಟ್ಟದಲ್ಲಿ ಇರಿಸಲು ನಿರ್ದೇಶಿಸಲಾಗಿದೆ ಮತ್ತು ಖಜಾನೆ ಆಯುಕ್ತರು ಅದನ್ನು ಪ್ರತ್ಯೇಕವಾಗಿ ಅಥವಾ ಒಟ್ಟಾರೆಯಾಗಿ ಖಜಾನೆ ಆಯುಕ್ತರಿಗೆ ತರಲು ಅವಕಾಶವಿದೆ.
•ಗ್ರೂಪ್ ‘ಎ’ ಮತ್ತು ‘ಬಿ’ ಅಧಿಕಾರಿಗಳು ತಮ್ಮ ಆಸ್ತಿ ಮತ್ತು ಸಾಲ ಪಟ್ಟಿಯನ್ನು ಏಪ್ರಿಲ್ ಅಂತ್ಯದೊಳಗೆ ಖಜಾನೆ ಕಮಿಷನರೇಟ್ ಗೆ ಸಲ್ಲಿಸಬೇಕು. ಈ ನಿಯಮಗಳು ಮತ್ತು ಸೂಚನೆಗಳನ್ನು ನಿರ್ಲಕ್ಷಿಸುವ ನೌಕರರು/ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಈ ಮೂಲಕ ತಿಳಿಸಲಾಗಿದೆ.
Darshan Case Latest Update: ಹೊಸ ಕ್ರಿಮಿನಲ್ ಕಾನೂನನ್ನು ಜಾರಿಗೆ ತರಲು ಕಳೆದ ಫೆಬ್ರವರಿಯಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು. ಅದರಂತೆ ಜುಲೈ…
Karnataka Rain Alert: ಸದ್ಯ ರಾಜ್ಯದೆಲ್ಲೆಡೆ ವರುಣನ ಆರ್ಭಟ ಜೋರಾಗಿದೆ. ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಹಲವು ಪ್ರದೇಶದಲ್ಲಿ ಹಾನಿಯಾಗಿದೆ.…
Sumalatha Ambareesh Posted About Darshan: ಸ್ಯಾಂಡಲ್ ವುಡ್ ನ ಸ್ಟಾರ್ ನಟ ದರ್ಶನ್ ಅವರು ರೇಣುಕಾಸ್ವಾಮಿ ಆರೋಪದಡಿ ಜೈಲು…
Pavitra Gowda New Update: ಸದ್ಯ ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಾಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ನ್ಯಾಯಾಂಗ ಬಂಧನದಲ್ಲಿದ್ದಾರೆ.…
Govt Employees 7th Pay Latest Update: ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದರೆ ರಾಜ್ಯದ ಸರ್ಕಾರಿ ನೌಕರರ ಬೇಡಿಕೆಗಳನ್ನು…
Karnataka CM Change: ಸದ್ಯ ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ನಡೆಯುತ್ತಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದ…