New Govt Scheme: ರಾಜ್ಯದ ಮಹಿಳೆಯರಿಗೆ ಇನ್ನೊಂದು ಗುಡ್ ನ್ಯೂಸ್, ಜಾರಿಗೆ ಬಂತು 3 ಹೊಸ ಸರ್ಕಾರೀ ಯೋಜನೆ.
ರಾಜ್ಯದ ಮಹಿಳೆಯರು ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನು ಮೂರು ಯೋಜನೆಗಳ ಲಾಭವನ್ನು ಪಡೆಯಬಹುದಾಗಿದೆ.
New Govt Scheme For Women’s: ರಾಜ್ಯದಲ್ಲಿ Congress ಸರ್ಕಾರ ಗೃಹ ಲಕ್ಷ್ಮಿ, ಗೃಹ ಜ್ಯೋತಿ, ಶಕ್ತಿ ಯೋಜನೆ, ಅನ್ನ ಭಾಗ್ಯ, ಯುವ ನಿಧಿ ಯೋಜನೆಗಳನ್ನೂ ಅನುಷ್ಠಾನಗೊಳಿಸಿದೆ. ಕಾಂಗ್ರೆಸ್ ನ ಗ್ಯಾರಂಟಿ ಯೋಜನೆಗಳು ಹೆಚ್ಚಾಗಿ ಮಹಿಳೆಯರಿಗೆ ಅನುಕೂಲವನ್ನು ಮಾಡಿಕೊಟ್ಟಿದೆ.
ರಾಜ್ಯದಲ್ಲಿ ಮಹಿಳಾ ಸಬಲೀಕರಣದ ಉದ್ದೇಶದಿಂದ ಐದು ಯೋಜನೆಗಳಲ್ಲಿ ಎಲ್ಲವು ಕೂಡ ಮಹಿಳೆಯರಿಗೆ ಹೆಚ್ಚು ಲಾಭವನ್ನು ನೀಡುತ್ತಿದೆ. ಇನ್ನು ಶಕ್ತಿ ಯೋಜನೆ, ಗೃಹ ಲಕ್ಷ್ಮಿ, ಅನ್ನ ಭಾಗ್ಯ ಯೋಜನೆಯ ಲಾಭವನ್ನು ಮಹಿಳೆಯರು ನೇರವಾಗಿ ಪಡೆಯುತ್ತಿದ್ದಾರೆ.
ರಾಜ್ಯದ ಮಹಿಳೆಯರಿಗೆ ಇನ್ನೊಂದು ಗುಡ್ ನ್ಯೂಸ್
ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನಿತರ ಯೋಜನೆಗಳು ಕೂಡ ಮಹಿಳೆಯರಿಗಾಗಿ ಲಭ್ಯವಾಗುತ್ತಿದೆ. ರಾಜ್ಯದ ಮಹಿಳೆಯರು ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತಿದ್ದಾರೆ ಎನ್ನಬಹುದು. ಮಹಿಳೆರಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿರುವ ರಾಜ್ಯ ಸರ್ಕಾರ ಇದೀಗ ಮತ್ತೆ 3 ಯೋಜನೆಗಳನ್ನು ಮಹಿಳೆಯರಿಗಾಗಿ ಪರಿಚಯಿಸಲು ನಿರ್ಧರಿಸಿದೆ. ರಾಜ್ಯದ ಮಹಿಳೆಯರಿಗೆ ಉಚಿತ ಗ್ಯಾರಂಟಿ ಯೋಜನೆಗಳ ಜೊತೆಗೆ ಇನ್ನು ಮೂರು ಯೋಜನೆಗಳ ಲಾಭವನ್ನು ಪಡೆಯಬಹುದಾಗಿದೆ.
ಮಹಿಳೆಯರಿಗಾಗಿ ಜಾರಿಗೆ ಬಂತು 3 ಹೊಸ ಸರ್ಕಾರೀ ಯೋಜನೆ
1. ಬಡ್ಡಿ ರಹಿತ ಸಾಲ ಸೌಲಭ್ಯ
ರಾಜ್ಯ ಸರ್ಕಾರ ಮಹಿಳೆಯರಿಗಾಗಿ ಸ್ವಂತ ಉದ್ಯೋಗ ಆರಂಭಿಸಲು ಹೊಸ ಯೋಜನೆಯನ್ನು ಜಾರಿಗೆ ತರಲು ಯೋಜನೆ ಹಾಕಿಕೊಂಡಿದೆ. ಇದಕ್ಕಾಗಿ ಸಿದ್ದರಾಮಯ್ಯ ಸರ್ಕಾರ ಬಡ್ಡಿ ರಹಿತ ಸಾಲವನ್ನು ನೀಡಲು ಮುಂದಾಗಿದೆ. ಸ್ವಂತ ಉದ್ಯೋಗವನ್ನು ಆರಂಭಿಸುವ ಮಹಿಳೆಯರಿಗೆ ಈ ಯೋಜನೆಯಡಿ ಯಾವುದೇ ಬಡ್ಡಿ ಇಲ್ಲದೆ ಸಾಲವನ್ನು ಪಡೆದುಕೊಳ್ಳಬಹುದು.
2. ಮಾಸಾಶನ ಹೆಚ್ಚಳ
ಇನ್ನು ರಾಜ್ಯ ಸರ್ಕಾರ ಮಾಜಿ ದೇವದಾಸಿಯರಿಗಾಗಿ ಕೂಡ ವಿಶೇಷ ಯೋಜನೆಯನ್ನು ಜಾರಿಗೊಳಿಸಿದೆ. ಈ ಹಿಂದೆ ಸರ್ಕಾರ ಮಾಜಿ ದೇವದಾಸಿಯವರಿಗೆ 1500 ರೂ. ಮಾಸಾಶವನ್ನು ನೀಡುತ್ತಿತ್ತು. ಆದರೆ ಇನ್ನುಮುಂದೆ ಈ ಮಾಸಾಶನವನ್ನು 2000 ರೂ. ಗೆ ಹೆಚ್ಚಿಸಲು ಸರ್ಕಾರ ನಿರ್ಧರಿಸಿದೆ.
3. ಉಚಿತ ಸ್ಮಾರ್ಟ್ ಫೋನ್ ವಿತರಣೆ
ಈಗಾಗಲೇ ರಾಜ್ಯ ಸರ್ಕಾರ ಅಂಗನವಾಡಿ ಮಕ್ಕಳಿಗಾಗಿ ವಿಶೇಷ ಸೌಲಭ್ಯವನ್ನು ನೀಡಿದೆ. ಸದ್ಯ ರಾಜ್ಯ ಸರ್ಕಾರ ಅಂಗನವಾಡಿ ಶಿಕ್ಷಕಿಯರಿಗೆ ಉಚಿತ ಸ್ಮಾರ್ಟ್ ಫೋನ್ ಅನ್ನು ನೀಡಲು ನಿರ್ಧರಿಸಿದೆ. ಗ್ರಾಮೀಣ ಪ್ರದೇಶದ ಜನತೆಗೆ ನೀಡುವ ಸೌಲಭ್ಯದ ಬಗ್ಗೆ ಎಲ್ಲ ವಿವರವನ್ನು ನೋಂದಾಯಿಸಲು ಸ್ಮಾರ್ಟ್ ಫೋನ್ ಅನ್ನು ನೀಡಲು ನಿರ್ಧರಿಸಿದೆ.