Notice To Chikkanna: ಪೋಲೀಸರ ಮುಂದೆ ಸತ್ಯ ಒಪ್ಪಿಕೊಂಡ ಚಿಕ್ಕಣ್ಣ, ಅಷ್ಟಕ್ಕೂ ಚಿಕ್ಕಣ್ಣ ಮಾಡಿದ ತಪ್ಪೇನು…?
ನಟ ಚಿಕ್ಕಣ್ಣನಿಗೆ ಪೊಲೀಸರಿಂದ ನೋಟಿಸ್..!
Notice To Actor Chikkanna New Update: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಪೊಲೀಸರು ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ ಬಂಧಿತ ಆರೋಪಿಗಳನ್ನು ತನಿಖೆ ನಡೆಸುತ್ತಿದ್ದಾರೆ. ಪೊಲೀಸ್ ವಿಚಾರಣೆಯ ಸಮಯದಲ್ಲಿ ರೇಣುಕಾಸ್ವಾಮಿ ಕೊಲೆಗೆ ಸಂಬಂಧಿಸಿದಂತೆ ಅನೇಕ ಹೊಸ ಹೊಸ ಅಪ್ಡೇಟ್ ಗಳು ಹೊರಬೀದಿದ್ದೆ.
ರೇಣುಕಾಸ್ವಾಮಿ ಕೊಲೆ ಹಿಂದಿನ ಪ್ಲಾನ್ ನಲ್ಲಿ ಯಾರೆಲ್ಲ ಇದ್ದಾರೆ ಎನ್ನುವ ಬಗ್ಗೆ ಮಾಹಿತಿ ಒಂದೊಂದೇ ಬಹಿರಂಗವಾಗುತ್ತಿದೆ. ಸದ್ಯ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇನ್ನೋರ್ವ ಖ್ಯಾತ ನಟನ ಹೆಸರು ಕೂಡ ಕೇಳಿ ಬರುತ್ತಿದೆ ಎನ್ನುವ ಬಗ್ಗೆ ಮಾಹಿತಿ ವೈರಲ್ ಆಗಿದೆ.
![Actor Chikkanna In Renuka Swamy Murder Case](https://nadunudi.in/wp-content/uploads/2024/06/Actor-Chikkanna-In-Renuka-Swamy-Murder-Case.png)
ನಟ ಚಿಕ್ಕಣ್ಣನಿಗೆ ಪೊಲೀಸರಿಂದ ನೋಟಿಸ್..!
ಸದ್ಯ ದರ್ಶನ್ ಸೇರಿದಂತೆ ಒಟ್ಟು 19 ಆರೋಪಿಗಳನ್ನು ರೇಣುಕಾಸ್ವಾಮಿ ಕೊಲೆ ಪ್ರಕಣದಲ್ಲಿ ಬಂಧಿಸಲಾಗಿದೆ. ಶನಿವಾರ ಆರೋಪಿಗಳನ್ನು ಕೋರ್ಟ್ ಗೆ ಕರೆದೊಯ್ದಿದ್ದು, ವಿಚಾರಣೆ ನಡೆಸಿ ಹೆಚ್ಚಿನ ತನಿಖೆಯಾಗ್ಗಿ ಮತ್ತೆ 5 ದಿನ ಪೊಲೀಸ್ ಕಸ್ಟಡಿಗೆ ಆರೋಪಿಗಳನ್ನು ನೀಡಲಾಗಿದೆ. ಸದ್ಯ ಪ್ರಕರಣದ ತನಿಖೆ ಜೋರಾಗಿಯೇ ನಡೆಯುತ್ತಿದೆ. ಸದ್ಯ ಪ್ರಕರಣದ ತನಿಖೆಯ ಸಮಯಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್ ಗೆ ಸಂಬಂಧಿಸಿದಂತೆ ಬಿಗ್ ಟ್ವಿಸ್ಟ್ ಲಭಿಸಿದೆ. ಹೌದು, ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ಚಿಕ್ಕಣ್ಣ ಅವರಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಕೇಳಿಬರುತ್ತಿದೆ.
ರೇಣುಕಾಸ್ವಾಮಿ ಕೊಲೆಯಲ್ಲಿ ಚಿಕ್ಕಣ್ಣ ಪಾಲು ಇದೆಯಾ…?
ವರದಿಗಳ ಪ್ರಕಾರ, ಚಿಕ್ಕಣ್ಣ ಅವರು ಕೊಲೆಯಾಗುವ ಮೊದಲು ಬೆಂಗಳೂರಿನ ರಾಜರಾಜೇಶ್ವರಿ ನಗರದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್ ನಲ್ಲಿ ದರ್ಶನ್ ಆಯೋಜಿಸಿದ್ದ ಖಾಸಗಿ ಪಾರ್ಟಿಯಲ್ಲಿ ಭಾಗವಹಿಸಿದ್ದರು. ದರ್ಶನ್ ಮತ್ತು ಚಿಕ್ಕಣ್ಣ ಜೊತೆ ನಿರ್ಮಾಪಕರೊಬ್ಬರು ಪಾರ್ಟಿಯಲ್ಲಿ ಭಾಗವಹಿಸಿದ್ದರು. ಪಾರ್ಟಿ ಮುಗಿಸಿ ದರ್ಶನ್ ಅವರ ಮನೆಗೆ ಹೋಗಿ, ನಂತರ ಶೆಡ್ ಗೆ ತೆರಳಿದ್ದರು ಎನ್ನಲಾಗಿದೆ. ಪಾರ್ಟಿ ಮುಗಿದ ನಂತರ ರೇಣುಕಾ ಸ್ವಾಮಿ ಮೇಲೆ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿದೆ ಎಂದು ನಂಬಲಾಗಿದೆ.
![Notice To Actor Chikkanna New Update](https://nadunudi.in/wp-content/uploads/2024/06/Notice-To-Actor-Chikkanna-New-Update.png)
ತಮ್ಮ ತನಿಖೆಯ ಭಾಗವಾಗಿ ವಿಚಾರಣೆಗೆ ಹಾಜರಾಗುವಂತೆ ನಟ ಕಮ್ ಹಾಸ್ಯನಟ ಚಿಕ್ಕಣ್ಣ ಅವರಿಗೆ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ. ಕಾಮಾಕ್ಷಿಪಾಳ್ಯ ಪೊಲೀಸರು ಚಿಕ್ಕಣ್ಣ ಅವರನ್ನ ಪೊಲೀಸ್ ಠಾಣೆಗೆ ಕರೆಸಿ ವಿಚಾರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಸ್ಟೋನಿಬ್ರೂಕ್ ಪಬ್ ನಲ್ಲಿ ನಡೆದ ಘಟನೆ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಸಿಗುವ ಸಾಧ್ಯತೆಯಿದೆ ಎಂದು ಪೊಲೀಸರು ಪ್ರಸ್ತುತ ಪ್ರಸಿದ್ಧ ಹಾಸ್ಯನಟನಿಗೆ ಕೊಟ್ಟು ವಿಚಾರಣೆ ಮಾಡಿದ್ದಾರೆ
![Actor Chikkanna Latest News](https://nadunudi.in/wp-content/uploads/2024/06/Actor-Chikkanna-Latest-News.png)