Old Pension: ಸರ್ಕಾರೀ ನೌಕರರ ಪಿಂಚಣಿಯಲ್ಲಿ ದೊಡ್ಡ ಬದಲಾವಣೆ, ಪಿಂಚಣಿ ವಿಷಯವಾಗಿ ಸಿದ್ದರಾಮಯ್ಯ ಮಹತ್ವದ ನಿರ್ಧಾರ
ರಾಜ್ಯ ಸರ್ಕಾರೀ ನೌಕರರಿಗೆ ಪಿಂಚಣಿ ವಿಷಯವಾಗಿ ಭರ್ಜರಿ ನ್ಯೂಸ್.
Old Pension Scheme Latest Update: ಸದ್ಯ ರಾಜ್ಯದಲ್ಲಿ ಸರ್ಕಾರೀ ನೌಕರರಿಗೆ Old Pension ನೀಡುವ ಕುರಿತು ಸರ್ಕಾರ ಚಿಂತನೆ ನಡೆಸುತ್ತಿದೆ. ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಹಳೆಯ ಪಿಂಚಣಿ ಕುರಿತು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದಾರೆ.
ಈಗಾಗಲೇ ರಾಜ್ಯ ಸರ್ಕಾರ ಸಾಕಷ್ಟು ಬರಿ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗುವ ಬಗ್ಗೆ ಮಾಹಿತಿ ನೀಡುತ್ತಿದೆ. ತುಟ್ಟಿಭತ್ಯೆ ಹೆಚ್ಚಳದ ನಿರೀಕ್ಷೆಯಲ್ಲಿರುವ ಸರ್ಕಾರೀ ನೌಕರರು ಹಳೆಯ ಪಿಂಚಣಿ ವ್ಯವಸ್ಥೆ ಜಾರಿಗಾಗಿ ಕಾಯುತ್ತಿದ್ದಾರೆ. ಸರ್ಕಾರ ನೌಕರರಲ್ಲಿ ಹಳೆಯ ಪಿಂಚಣಿ ವ್ಯವಸ್ಥೆ ಯಾವಾಗ ಜಾರಿಗೆ ಬರುತ್ತದೆ ಎನ್ನುವ ಕುತೂಹಲ ಹೆಚ್ಚಿದೆ.
![Old Pension Scheme](https://nadunudi.in/wp-content/uploads/2023/12/Old-Pension-Scheme.jpg)
ರಾಜ್ಯ ಸರ್ಕಾರೀ ನೌಕರರಿಗೆ ಪಿಂಚಣಿ ವಿಷಯವಾಗಿ ಭರ್ಜರಿ ನ್ಯೂಸ್
ಪ್ರಸ್ತುತ ಸರ್ಕಾರೀ ನೌಕರರು ಹೊಸ ಪಿಂಚಣಿ ವ್ಯವಸ್ಥೆಯ ಅಡಿಯಲ್ಲಿ ಪಿಂಚಣಿಯನ್ನು ಪಡೆಯುತ್ತಿದ್ದಾರೆ. ಆದರೆ ಹೊಸ ಪಿಂಚಣಿ ವ್ಯವಸ್ಥೆಯನ್ನು ರದ್ದುಗೊಳಿಸಿ, ಹಳೆ ಪಿಂಚಣಿ ವ್ಯಸ್ಥೆಯ ಅಡಿಯಲ್ಲಿ ಪಿಂಚಣಿ ನೀಡುವಂತೆ ಸರ್ಕಾರೀ ನೌಕರರು ಸರ್ಕಾರಕ್ಕೆ ಹಲವು ಸಮಯದಿಂದ ಮನವಿ ಮಾಡಿಕೊಳ್ಳುತ್ತ ಬಂದಿದ್ದಾರೆ. ಸದ್ಯ ಹಳೆಯ ಪಿಂಚಣಿ ವ್ಯವಸ್ಥೆ ಜಾರಿಯಾಗುವ ಕುರಿತು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಮಾಹಿತಿ ನೀಡಿದ್ದಾರೆ.
![Old Pension Scheme Latest Update](https://nadunudi.in/wp-content/uploads/2023/12/Old-Pension-Scheme-Latest-Update.jpg)
ಹಳೆ ಪಿಂಚಣಿ ಜಾರಿಗೆ ಸಮಿತಿ ಪುನರ್ ರಚನೆ
ರಾಜ್ಯದಲ್ಲಿ ದಿನಾಂಕ 01-03-2023 ರಂದು ಜಾರಿಯಲ್ಲಿರುವ ರಾಷ್ಟ್ರೀಯ ಪಿಂಚಣಿ ಯೋಜನೆಯನ್ನು ರದ್ದುಪಡಿಸಿರುವ ಸಂಬಂಧ ಈಗಾಗಲೇ ಹಳೆ ಪಿಂಚಣಿ ಯೋಜನೆಯನ್ನು ಮರು ಜಾರಿ ಮಾಡಿರುವ ರಾಜ್ಯಗಳಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಿರುವ ಕುರಿತು ಕ್ರೈಗೊಂಡಿರುವ ಕ್ರಮಗಳ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಸರ್ಕಾರದ ರಾಜ್ಯ ಸರ್ಕಾರ ಹೇಳಿಕೆ ನೀಡಿದೆ. ಹಳೆ ಪಿಂಚಣಿ ಜಾರಿ ಸಂಬಂಧ ಶೀಘ್ರವೇ ಸಮಿತಿ ರಚನೆ ಮಾಡಲಾಗುತ್ತದೆ ಎಂದು ಕಂದಾಯ ಸಚಿವರಾದ ಕೃಷ್ಣಬೈರೇಗೌಡ ಅವರು ಹೇಳಿಕೆ ನೀಡಿದ್ದಾರೆ.