Pavithra Gowda: ದರ್ಶನ್ ವಿರುದ್ಧವೇ ಹೇಳಿಕೆ ನೀಡಿದ ಪವಿತ್ರ ಗೌಡ, ಪೋಲೀಸರ ಮುಂದೆ ಸತ್ಯ ಹೇಳಿದ ಪವಿತ್ರ ಗೌಡ

ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ

Pavithra Gowda Latest Update: ಚಿತ್ರದುರ್ಗದ ರೇಣುಕಾಸ್ವಾಮಿ ಪ್ರಕರಣ ಸದ್ಯ ಕೊನೆಯ ಹಂತದಲ್ಲಿದೆ. ರೇಣುಕಾಸ್ವಾಮಿ ಪ್ರಕರಣದಲ್ಲಿ ಪೊಲೀಸರು ಒಟ್ಟು 17 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣದಲ್ಲಿ ಎ1 ಆರೋಪಿಯಾಗಿ ಪವಿತ್ರ ಗೌಡ ಹಾಗೂ ಎ2 ಆರೋಪಿಯಾಗಿ ನಟ ದರ್ಶನ್ ಸೇರಿದಂತೆ ಒಟ್ಟು 17 ಜನ ಆರೋಪಿಗಳು ನ್ಯಾಯಾಂಗ ಬಂದನದಲ್ಲಿದಾರೆ.

ಇನ್ನು ನ್ಯಾಯಾಲಯವು ಜುಲೈ 4 ರ ವರೆಗೆ ಆರೋಪಿಗಳನ್ನು ನ್ಯಾಯಾಂಗ ಬಂಧನದಲ್ಲಿ ಇರಿಸಿದೆ. ಸದ್ಯ ಪೊಲೀಸರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವಿಷಯಗಳನ್ನು ಕಲೆ ಹಾಕುತ್ತಿದ್ದಾರೆ. ಎಲ್ಲ ಆರೋಪಿಗಳನ್ನು ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ವಿಚಾರಣೆಯ ವೇಳೆ ದರ್ಶನ್ ಗೆಳತೀ ಪವಿತ್ರ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಅದೇನು ಎನ್ನುವ ಬಗ್ಗೆ ಈ ಲೇಖನದಲ್ಲಿ ಮಾಹಿತಿ ತಿಳಿಯೋಣ.

Pavitra Gowda Latest Update
Image Credit: Dailythanthi

ದರ್ಶನ್ ವಿರುದ್ಧ ಹೇಳಿಕೆ ನೀಡಿದ ಪವಿತ್ರ ಗೌಡ….!
ಪ್ರಕರಣದ ವಿಚಾರಣೆ ವೇಳೆ ದರ್ಶನ್ ಅವರ ಆಪ್ತ ಸ್ನೇಹಿತೆ ಪವಿತ್ರಾ ಗೌಡ ದರ್ಶನ್ ವಿರುದ್ಧ ಹೇಳಿಕೆ ನೀಡಿದ್ದಾರೆ. ಸದ್ಯ ಪವಿತ್ರ ಗೌಡ ಅವರ ಈ ಹೇಳಿಕೆ ಇಡೀ ಪ್ರಕರಣಕ್ಕೆ ಹೊಸ ತಿರುವು ನೀಡುವಂತಿದೆ. ರೇಣುಕಾಸ್ವಾಮಿಯನ್ನು ಪಟ್ಟಗೆರೆ ಶೆಡ್‌ ಗೆ ಕರೆತಂದಾಗ ನಾನು ಎರಡು ಬಾರಿ ಚಪ್ಪಲಿಯಿಂದ ಹೊಡೆದಿದ್ದೆ. ಆದರೆ, ದರ್ಶನ್ ಮಾತ್ರ ಸುಮ್ಮನಿರಲಿಲ್ಲ. ರೇಣುಕಾಸ್ವಾಮಿಗೆ ಮನಬಂದಂತೆ ಥಳಿಸಲಾಗಿದೆ ಎಂದು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಪೊಲೀಸರ ಮುಂದೆ ಹೇಳಿಕೊಂಡಿದ್ದಾರೆ.

ದರ್ಶನ್ ರೇಣುಕೆಸ್ವಾಮಿಗೆ ಮನಬಂದಂತೆ ಥಳಿಸಿದ್ರು ಎಂದ ಪವಿತ್ರ ಗೌಡ
ನಾನು ಶೆಡ್‌ ಗೆ ಬರುವ ಮೊದಲೇ ದರ್ಶನ್ ಆಗಲೇ ಬಂದಿರುವುದಾಗಿ, ಹಾಗೆಯೆ ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಪವಿತ್ರ ಗೌಡ ಹೇಳಿದ್ದಾರೆ. ಅಶ್ಲೀಲ ಸಂದೇಶ ಕಳುಹಿಸಿದ್ದಕ್ಕೆ ನಾನೇ ರೇಣುಕಾಸ್ವಾಮಿಗೆ ಚಪ್ಪಲಿಯಿಂದ ಎರಡೇಟು ಹೊಡೆದೆ. ಅಷ್ಟರಲ್ಲಾಗಲೇ ದರ್ಶನ್ ಬಂದು ರೇಣುಕಾಸ್ವಾಮಿ ಮೇಲೆ ಹಲ್ಲೆ ನಡೆಸಿದ್ದಾರೆ. ನಾನು ಬಂದ ಮೇಲು ಹಲ್ಲೆ ಮಾಡಿರುವುದು ನಿಜ ಎಂದು ವಿಚಾರಣೆ ವೇಳೆ ಪವಿತ್ರಾ ಗೌಡ ಹೇಳಿಕೊಂಡಿದ್ದಾರೆ. ಸದ್ಯ ಜುಲೈ 4 ರಂದು ಕೋರ್ಟ್ ಗೆ ಆರೋಪಿಗಳನ್ನು ಹಾಜರುಪಡಿಸಲಾಗುತ್ತದೆ. ಇನ್ನು ಪ್ರಕರಣ ಯಾವ ಹಂತಕ್ಕೆ ಹೋಗುತ್ತದೆ ಎನ್ನುವುದನ್ನು ಕಾದು ನೋಡಬೇಕಿದೆ.

Pavitra Gowda And Darshan
Image Credit: Time Now News

Join Nadunudi News WhatsApp Group

Join Nadunudi News WhatsApp Group