Image Credit: Original Source
Pavitra Gowda Husband: ಸದ್ಯ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ (Darshan) ಹಾಗೂ ಪವಿತ್ರ ಗೌಡ ಅವರ ಬಗ್ಗೆ ಸುದ್ದಿ ಸಾಕಷ್ಟು ವೈರಲ್ ಆಗುತ್ತಿದೆ. ಪವಿತ್ರ ಗೌಡ ಅವರು ಸೋಶಿಯಲ್ ಮೀಡಿಯಾದಲ್ಲಿ ದರ್ಶನ್ ಜೊತೆಗಿನ ಫೋಟೋಗಳನ್ನು ಹಂಚಿಕೊಂಡಿರುವುದೇ ಇದಕ್ಕೆ ಕಾರಣವಾಗಿದೆ. ಪವಿತ್ರ ಗೌಡ ಅವರು ಫೋಟೋಗಳನ್ನು ವೈರಲ್ ಮಾಡುತ್ತಿದ್ದಂತೆ ದರ್ಶನ್ ಅವರ ಪತ್ನಿ ವಿಜಯಲಕ್ಷ್ಮಿ ದರ್ಶನ್ ಪವಿತ್ರ ವಿರುದ್ಧ ಕಿಡಿಕಾರಿದ್ದಾರೆ. ವಿಜಯಲಕ್ಷ್ಮಿ ಹಾಗೂ ಪವಿತ್ರ ಗೌಡ ಅವರ ನಡುವೆ ಸಾಮಾಜಿಕ ಜಾಲತಾಣದಲ್ಲಿ ವಾಗ್ವಾದ ನಡೆಯುತ್ತಿದೆ.
ದರ್ಶನ್ ಪವಿತ್ರ ಗೌಡ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹೆಚ್ಚುತ್ತಿದೆ ಚರ್ಚೆ
ವಿಜಯಲಕ್ಷ್ಮಿ ಅವರು ಸೋಶಿಯಲ್ ಮೀಡಿಯಾದಲ್ಲಿ ಪವಿತ್ರ ಗೌಡ ಅವರಿಗೆ ಕಾನೂನು ಬೆದರಿಕೆ ಹಾಕಿದರೆ, ಪವಿತ್ರ ಗೌಡ ಅದಕ್ಕೆ ಪ್ರತ್ಯತ್ತರ ಎಂಬಂತೆ ಮತ್ತೆ ಪೋಸ್ಟ್ ಹಂಚಿಕೊಳ್ಳುವ ಮೂಲಕ ಉತ್ತರ ನೀಡಿದ್ದಾರೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿ ಹಾಗೂ ಪವಿತ್ರ ಗೌಡ ಅವರ ನಡುವೆ ಜೋರಾಗಿಯೇ ವಾದ ನಡೆಯುತ್ತಿದೆ. ಇವೆಲ್ಲದರ ನಡುವೆ ಸಾಮಾಜಿಕ ಜಾಲತಾಣದಲ್ಲಿ ಪವಿತ್ರ ಗೌಡ ಅವರ ಪತಿ ಸಂಜಯ್ ಬಗ್ಗೆ ಕೂಡ ಚರ್ಚೆ ಆರಂಭವಾಗಿದೆ. ಪವಿತ್ರ ಅವರ ಪತಿ ಸಂಜಯ್ ಏನು ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಸಾಕಷ್ಟು ಕುತೂಹಲ ಹುಟ್ಟಿದೆ ಎನ್ನಬಹುದು.
ದರ್ಶನ್ ಜೊತೆ ಸಂಬಂಧ ಇದೆ ಎಂದು ಹೇಳಿದ ಪವಿತ್ರ ಗೌಡ ಗಂಡ ಯಾರು….?
ಇನ್ನು ವಿಜಯಲಕ್ಷ್ಮಿ ದರ್ಶನ್ ಅವರು ಪವಿತ್ರ ಗೌಡ ಅವರಿಗೆ ಕಾನೂನು ಬೆದರಿಕೆ ಹಾಕಿದ ಬೆನ್ನಲ್ಲೇ ಪವಿತ್ರ ಗೌಡ ಸೋಶಿಯಲ್ ಮೀಡಿಯಾದಲ್ಲಿ ಇದಕ್ಕೆ ಉತ್ತರ ನೀಡಿದ್ದಾರೆ. ತಮ್ಮ ಮೊದಲ ಮದುವೆಯ ವಿಚಾರದ ಬಗ್ಗೆ ಪವಿತ್ರ ಮಾಹಿತಿ ಹೇಳಿಕೊಂಡಿದ್ದಾರೆ. ತನ್ನ ಪತಿ ಸಂಜಯ್ ಜೊತೆ ವಿಚ್ಛೇದನವಾಗಿರುವುದಾಗಿ, ತನ್ನ ಮಗಳು ಖುಷಿ ಗೌಡ ಸಂಜಯ್ ಮಗಳು ಎಂದು ಹೇಳಿಕೊಂಡಿದ್ದಾರೆ. ‘ಖುಷಿ ಗೌಡ ದರ್ಶನ್ ಅವರ ಮಗಳೆಂದು ನಾನು ಎಲ್ಲಿಯೂ ಹೇಳಿಲ್ಲ’ ಎಂದು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಇನ್ನು ಪವಿತ್ರ ಗೌಡ ಹಾಗೂ ಸಂಜಯ್ ಗೌಡ ಅವರದ್ದು ಲವ್ ಮ್ಯಾರೇಜ್ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ಪವಿತ್ರ ಗೌಡ ಅವರು ಸಂಜಯ್ ಗೌಡ ಅವರನ್ನು 18 ನೇ ವಯಸ್ಸಿನಲ್ಲಿಯೇ ಮದುವೆಯಾಗಿದ್ದಾರೆ. ಚಾಮರಾಜ ಪೇಟೆಯಲ್ಲಿ ಈ ದಂಪತಿಗಳು ವಾಸವಿದ್ದಿದ್ದರು. ಈ ದಂಪತಿಗಳಿಗೆ ಖುಷಿ ಎನ್ನುವ ಮಗಳಿದ್ದಾಳೆ. ಇನ್ನು ಪವಿತ್ರ ಗೌಡ ಅವರು ಪತಿ ಸಂಜಯ್ ಸಿಂಗ್ ದಿನಸಿ ಅಂಗಡಿ ವ್ಯಾಪಾರ ಮಾಡುತ್ತಿರುವ ಎನ್ನುವ ಬಗ್ಗೆ ಮಾಹಿತಿ ಲಭಿಸಿದೆ. ದಾಂಪತ್ಯ ಜೀವನದಲ್ಲಿ ಬಿರುಕು ಮೂಡಿದ ಕಾರಣ ಸಂಜಯ್ ಅವರಿಂದ ಪವಿತ್ರ ವಿಚ್ಛೇದನ ಪಡೆದಿದ್ದು, ಮಗಳು ಖುಷಿ ತಾಯಿಯ ಜೊತೆಗೆ ಇದ್ದಾರೆ.
Rohith Sharma Ate Soil From Pitch: ದಕ್ಷಿಣ ಆಫ್ರಿಕಾ ವಿರುದ್ಧ ನಡೆದ ರೋಚಕ ಫೈನಲ್ ಪಂದ್ಯದಲ್ಲಿ ಟೀಂ ಇಂಡಿಯಾ…
BSNL Best Annual Recharge Plan: ಪ್ರಸ್ತುತ ದೇಶದಲ್ಲಿ Airtel, Jio, Vi, BSNL ಟೆಲಿಕಾಂ ಕಂಪನಿಗಳು ಹೊಸ ಹೊಸ…
KSRTC Bus Driver Job Recruitment: ದೇಶದಲ್ಲಿ ನಿರುದ್ಯೋಗದ ಸಮಸ್ಯೆ ಹೆಚ್ಚಾಗಿಯೇ ಇದೆ. ಸಾಕಷ್ಟು ವಿದ್ಯಾವಂತರು ಇನ್ನು ಕೂಡ ಉದ್ಯೋಗವನ್ನು…
Canara Bank Account Minimum Balance: ಸಾಮಾನ್ಯವಾಗಿ ಎಲ್ಲರು ವಿವಿಧ ಬ್ಯಾಂಕ್ ಗಳಲ್ಲಿ ಖಾತೆಗಳನ್ನು ತೆರೆದಿರುತ್ತಾರೆ. ಖಾತೆಗಳನ್ನು ತೆರೆಯುದರ ಜೊತೆಗೆ…
New Ration Card Application: ಸದ್ಯ ರಾಜ್ಯದ ಜನತೆಗೆ ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಕೆಗಾಗಿ ಕಾಯುತ್ತಿದ್ದಾರೆ. ಇದೀಗ ರಾಜ್ಯ…
Details About World Cup Trophy: ಸ್ಪೋಟ್ಸ್ ವಿಭಾಗದಲ್ಲಿ ಕ್ರಿಕೆಟ್ ಗೆ ಹೆಚ್ಚಿನ ಅಭಿಮಾನಿಗಳಿರುತ್ತಾರೆ. ಕ್ರಿಕೆಟ್ ಪಂದ್ಯ ಯಾವಾಗ ನಡೆಯುತ್ತದೆ…