Narendra Modi: ಕರ್ನಾಟಕಕ್ಕೆ 16,000 ಕೋಟಿ ಗಿಫ್ಟ್ ಕೊಟ್ಟ ಮೋದಿ, ಯಾವ ಯಾವ ಯೋಜನೆ ಬಿಡುಗಡೆ.
ಕರ್ನಾಟಕಕ್ಕೆ 16000 ಕೋಟಿ ರೂಪಾಯಿಗಳ ಯೋಜನೆಯನ್ನ ಕೊಡುಗೆ ನೀಡಿದ್ದಾರೆ ನರೇಂದ್ರ ಮೋದಿ.
Narendra Modi: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಕರ್ನಾಟಕ ಜನತೆಗಾಗಿ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದಾರೆ. ಜನಸಾಮನ್ಯರ ಅನುಕೂಲಕ್ಕಾಗಿ ನರೇಂದ್ರ ಮೋದಿ ಅವರು ಸಾಕಷ್ಟು ಯೋಜನೆಗಳನ್ನು ಬಿಡಿಗಡೆ ಮಾಡಿದ್ದಾರೆ.
ಮಹಿಳೆಯರಿಗೂ ಕೂಡ ಮೋದಿ ಸರ್ಕಾರದಿಂದ ಅನೇಕ ಯೋಜನೆಗಳು ಜಾರಿಯಲ್ಲಿವೆ. ಇದೀಗ ನರೇಂದ್ರ ಮೋದಿ ಅವರು ಕರ್ನಾಟಕಕ್ಕೆ ದೊಡ್ಡ ಕೊಡುಗೆಯನ್ನು ನೀಡಿದ್ದಾರೆ.
![Narendra Modi government has released 16000 crores for various projects in Karnataka.](https://nadunudi.in/wp-content/uploads/2023/04/modi-gift-for-karnataka.png)
ಕರ್ನಾಟಕಕ್ಕೆ 16 ಸಾವಿರ ಕೋಟಿ ಗಿಫ್ಟ್ ನೀಡಲಿರುವ ಪ್ರಧಾನಿ
ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರದಂದು ಕರ್ನಾಟಕದಲ್ಲಿ ಸುಮಾರು 16 ಸಾವಿರ ಕೋಟಿ ರೂಪಾಯಿಗಳ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಲಿದ್ದಾರೆ. ಮಂಡ್ಯದಲ್ಲಿ ಪ್ರಮುಖ ರಸ್ತೆ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಮಾಡಲಿದ್ದಾರೆ. ಇದಾದ ಬಳಿಕ ಹುಬ್ಬಳ್ಳಿ ದಾರವಾಡದಲ್ಲಿ ವಿವಿಧ ಯೋಜನೆಗಳ ಅಭಿವೃದ್ಧಿ ಕಾರ್ಯ ಕೈಗೊಳ್ಳಲಿದ್ದಾರೆ.
ರಾಜ್ಯ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದೆ. ಈ ನಿಟ್ಟಿನಲ್ಲಿ ಪ್ರಧಾನಿ ಮೋದಿ ಅವರು ಕರ್ನಾಟಕದ ಚುನಾವಣೆಯ ಮೇಲೆ ವಿಶೇಷ ಗಮನ ಹರಿಸುತ್ತಿದ್ದಾರೆ.
![Prime Minister Narendra Modi has given motions for various projects in Karnataka.](https://nadunudi.in/wp-content/uploads/2023/04/narendra-modi-and-krantaka.png)
ಮೈಸೂರಿನಲ್ಲಿ ಇತ್ತೀಚೆಗಷ್ಟೇ ಹುಲಿ ಗಣತಿ ಡೇಟಾವನ್ನ ಬಿಡುಗಡೆ ಮಾಡಿದ್ದಾರೆ. ಹಾಗೆಯೆ ಅಮೃತ್ ಕಾಲ ಸಮಯದಲ್ಲಿ ಹುಲಿ ಸಂರಕ್ಷಣೆಗಾಗಿ ಸರ್ಕಾರದ ದ್ರಷ್ಟಿಕೋನವನ್ನು ಬಿಡುಗಡೆ ಮಾಡಿದ್ದಾರೆ ಹಾಗೆಯೆ IBCA (ಇಂಟರ್ನ್ಯಾಷನಲ್ ಬಿಗ್ ಕ್ಯಾಟ್ಸ್ ಅಲೈಯನ್ಸ್) ಅನ್ನು ಕೂಡ ಪ್ರಾರಂಭಿಸಿದ್ದಾರೆ.
ಹುಲಿ ಸಂರಕ್ಷಿತ ಪ್ರದೇಶಗಳಿಗೆ ಮೋದಿ ಭೇಟಿ
ಮುದುಮಲೈ ಹುಲಿ ಸಂರಕ್ಷಿತ ಪ್ರದೇಶಕ್ಕೆ ಮೋದಿ ಭೇಟಿ ನೀಡಿದ್ದು, ಭೇಟಿಯನ್ನು ಮುಕ್ತಾಯಗೊಳಿಸಿದ ಹಿನ್ನಲೆ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ. ಎಲ್ಲಾ ಅರಣ್ಯ ಅಧಿಕಾರಿಗಳು, ಕಾವಲುಗಾರರು ಹಾಗೂ ಹುಲಿ ಸಂರಕ್ಷಣೆಯಲ್ಲಿ ಶ್ರಮಿಸುತ್ತಿರುವ ಎಲ್ಲರಿಗು ಧನ್ಯವಾದ ಅರ್ಪಿಸುತ್ತೇನೆ ಎಂದು ಪ್ರಧಾನಿ ಮೋದಿ ಅವರು ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ.