ಸದ್ಯ ಬರಿ ಕರ್ನಾಟಕ ಮಾತ್ರವಲ್ಲದೆ ಇಡೀ ಬೇರೆ ಬೇರೆ ರಾಜ್ಯದಲ್ಲಿ ಬಹಳ ದೊಡ್ಡ ಮಟ್ಟದಲ್ಲಿ ಚರ್ಚೆ ಆಗುತ್ತಿರುವ ವಿಷಯ ಏನು ಅಂದರೆ ಅದೂ ಪೊಗರು ಚಿತ್ರದ ವಿಷಯವೆಂದು ಹೇಳಿದರೆ ತಪ್ಪಾಗಲ್ಲ. ಹೌದು ಕಳೆದ ವಾರ ಭರ್ಜರಿಯಾಗಿ ಬಿಡುಗಡೆಯಾಗಿದ್ದ ಪೊಗರು ಈಗ ಕಳೆದ ಒಂದು ವಾರದಿಂದ ಎಲ್ಲಾ ಚಿತ್ರ ಮಂದಿರಗಳಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಜನರು ಚಿತ್ರಕ್ಕೆ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ ಎಂದು ಹೇಳಿದರೆ ತಪ್ಪಾಗಲ್ಲ. ಚಿತ್ರ ಬರಿ ಕರ್ನಾಟಕ ಮಾತ್ರವಲ್ಲದೆ ಬೇರೆ ರಾಜ್ಯದಲ್ಲಿ ಕೂಡ ಭರ್ಜರಿಯಾಗಿ ಮುನ್ನುಗುಯುತ್ತಿದ್ದು ಇದು ಚಿತ್ರತಂಡದ ಸಂತಸಕ್ಕೆ ಕಾರಣವಾಗಿದೆ ಎಂದು ಹೇಳಬಹುದು. ಇನ್ನು ಕಲೆಕ್ಷನ್ ವಿಚಾರಕ್ಕೆ ಬರುವುದಾದರೆ, ಪೊಗರು ಚಿತ್ರ ಕಳೆದ ಒಂದು ವಾರದಿಂದ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಕಲೆಕ್ಷನ್ ವಿಚಾರದಲ್ಲಿ ಕೂಡ ಭರ್ಜರಿಯಾಗಿ ಮುನ್ನುಗ್ಗುತ್ತಿದೆ ಎಂದು ಹೇಳಬಹುದು.
ಇನ್ನು ಪೊಗರು ಚಿತ್ರದ ಯಶಸ್ಸಿನ ನಡುವೆಯೂ ಚಿತ್ರದ ನಾಯಕ ನಟ ದ್ರುವ ಸರ್ಜಾ ಅವರು ಅಭಿಮಾನಿಗಳಲ್ಲಿ ಕ್ಷಮೆಯನ್ನ ಕೇಳಿದ್ದಾರೆ. ಹಾಗಾದರೆ ಪೊಗರು ಚಿತ್ರ ಒಂದು ವಾರದಲ್ಲಿ ಗಳಿಸಿದ ಒಂದು ಕಲೆಕ್ಷನ್ ಎಷ್ಟು ಮತ್ತು ದ್ರುವ ಸರ್ಜಾ ಅಭಿಮಾನಿಗಳಲ್ಲಿ ಕ್ಷಮೆಯನ್ನ ಕೇಳಿದ್ದು ಯಾಕೆ ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ನಾವು ಈಗ ನಿಮಗೆ ಕೊಡುತ್ತೀವಿ ಪೂರ್ತಿಯಾಗಿ ಓದಿ ಮತ್ತು ಪೊಗರು ಚಿತ್ರದ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ. ಹೌದು ಸ್ನೇಹಿತರೆ ಪೊಗರು ಚಿತ್ರ ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಭರ್ಜರಿಯಾಗಿ ಪ್ರದರ್ಶನವನ್ನ ಕಾಣುತ್ತಿದ್ದು ಚಿತ್ರವನ್ನ ನೋಡಿದ ಹೆಚ್ಚಿನ ಅಭಿಮಾನಿಗಳು ಚಿತ್ರಕ್ಕೆ ಫಿದಾ ಆಗಿದ್ದಾರೆ ಎಂದು ಹೇಳಬಹುದು.
ಇನ್ನು ಚಿತ್ರ ಬಿಡುಗಡೆಯಾದ ಮೊದಲ ದಿನವೇ ಬರೋಬ್ಬರಿ 10 ಕೋಟಿ ರೂಪಾಯಿಯನ್ನ ಕಲೆಕ್ಷನ್ ಮಾಡಿತ್ತು ಮತ್ತು ಈಗ ಚಿತ್ರ ಬಿಡುಗಡೆಯಾಗಿ ಒಂದು ವಾರ ಕಳೆದಿದ್ದು ಬಂದಿರುವ ಮಾಹಿತಿಯ ಪ್ರಕಾರ ಪೊಗರು ಚಿತ್ರ ಕಳೆದ ಒಂದು ವಾರದಲ್ಲಿ ಸುಮಾರು 45 ರಿಂದ 50 ಕೋಟಿ ರೂಪಾಯಿಯನ್ನ ಗಳಿಸಿದೆ. ಚಿತ್ರ ನೋಡಿದ ಅಭಿಮಾನಿಗಳು ಪೊಗರು ಚಿತ್ರ 100 ದಿನಕ್ಕೂ ಹೆಚ್ಚಿನ ದಿನಗಳ ಕಾಲ ಚಿತ್ರ ಮಂದಿರಗಳಲ್ಲಿ ಇರಲಿದ್ದು ಬಾಕ್ಸ್ ಆಫೀಸ್ ಕೊಳ್ಳೆ ಹೊಡೆಯುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಬಹುದು. ಚಿತ್ರ ಮುನ್ನುಗ್ಗುತ್ತಿರುವ ಪರಿಯನ್ನ ನೋಡಿದರೆ ಕೆಲವೇ ದಿನಗಳಲ್ಲಿ ಚಿತ್ರ ನೂರು ಕೋಟಿ ಗಳಿಕೆ ಮಾಡುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳಬಹುದು.
ಇನ್ನು ಪೊಗರು ಚಿತ್ರದ ಮೇಲೆ ಬ್ರಾಹ್ಮಣರು ಬೇಸರವನ್ನ ವ್ಯಕ್ತಪಡಿಸಿದ್ದು ಚಿತ್ರದಲ್ಲಿ ಬ್ರಾಹ್ಮಣರಿಗೆ ಟೀಕೆ ಮಾಡಲಾಗಿದೆ ಎಂದು ಆರೋಪ ಮಾಡಿದ ಹಿನ್ನಲೆಯಲ್ಲಿ ಕೆಲವು ದೃಶ್ಯಗಳನ್ನ ಕಟ್ ಮಾಡಲಾಗಿದೆ. ಇನ್ನು ಇದರ ಕುರಿತು ಮಾತನಾಡಿರುವ ದ್ರುವ ಸರ್ಜಾ ಅವರು ಇದು ಯಾವುದು ಉದ್ದೇಶ ಪೂರ್ವಕವಾಗಿ ಮಾಡಿದ್ದಲ್ಲ, ಚಿತ್ರದ ಕೆಲವು ದೃಶ್ಯದಿಂದ ಯಾರಿಗಾದರೂ ಬೇಜಾರ್ ಆಗಿದ್ದಾರೆ ನನ್ನ ಕ್ಷಮೆ ಇರಲಿ ಎಂದು ದ್ರುವ ಅವರು ಕ್ಷಮೆಯನ್ನ ಕೋರಿದ್ದಾರೆ. ಈ ವಿಷಯ ನಮಗೆ ಮೊದಲೇ ತಿಳಿದಿದ್ದರೆ ನಾವು ಖಂಡಿತವಾಗಿ ಆ ದೃಶ್ಯ ಮಾಡುತ್ತಿರಲಿಲ್ಲ ಎಂದು ಹೇಳಿದ್ದಾರೆ ದ್ರುವ ಅವರು. ಸ್ನೇಹಿತರೆ ಚಿತ್ರದ ದೃಶ್ಯಗಳನ್ನ ಕಟ್ ಮಾಡಿರುವುದರ ಬಗ್ಗೆ ನಿಮ್ಮ ಅಭಿಪ್ರಾಯವನ್ನ ನಮಗೆ ತಿಳಿಸಿ.