Darshan News: ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದೇಕೆ…? ಇಲ್ಲಿದೆ ನೋಡಿ ಅಸಲಿ ಕಾರಣ.

ನಟ ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಲು ಅಸಲಿ ಕಾರಣ ಬಯಲು

Darshan Case Latest Update: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಗೆಳತಿ ಪವಿತ್ರಾ ಗೌಡ ಸೇರಿದಂತೆ 18 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ತನಿಖೆ ನಡೆಯುತ್ತಿದೆ. ಆರೋಪಿಗಳು ಪ್ರಕರಣದ ಬಗ್ಗೆ ಪೊಲೀಸರಿಗೆ ವಿವರ ನೀಡುತ್ತಿದ್ದಾರೆ.

ಮೃತದೇಹ ಸಾಗಿಸಿದ ಸ್ಕಾರ್ಪಿಯೋ ಕಾರಿನ ಮಾಲೀಕ ಪುನೀತ್ ನನ್ನು ರೇಣುಕಾಸ್ವಾಮಿ ಹತ್ಯೆಗೆ ಸಹಕರಿಸಿದ ಹಾಗೂ ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಬಂಧಿಸಲಾಗಿದೆ. ಇದರೊಂದಿಗೆ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಈ ಮದ್ಯೆ ದರ್ಶನ್ ಇದ್ದ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವ ಬಗ್ಗೆ ಸುದ್ದಿ ವೈರಲ್ ಆಗಿದೆ. ಅಷ್ಟಕ್ಕೂ ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದೇಕೆ ಅನ್ನುವ ಎನ್ನುವ ಬಗ್ಗೆ ಮಾಹಿತಿ ಇಲ್ಲಿದೆ.

Darshan Case Latest News
Image Credit: India Today

ದರ್ಶನ್ ಇರುವ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿದ್ದೇಕೆ…?
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದ ಅಪರಾಧಿಗಳಿದ್ದ ಪೊಲೀಸ್ ಠಾಣೆ ಆವರಣದ ಗೋಡೆಗೆ ಶಾಮಿಯಾನ ಹಾಕಲಾಗಿತ್ತು. ಈ ವಿಚಾರ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ಕೊಲೆ ಮಾಡಿದ ಆರೋಪಿಗಳಿಗೆ ಪೊಲೀಸರು ರಾಜಾತಿಥ್ಯ ನೀಡುತ್ತಿದ್ದಾರೆ. ಆರೋಪಿಗಳಿಗೆ ಬಿರಿಯಾನಿ, ಸಿಗರೇಟ್ ನೀಡಲಾಗುತ್ತಿದೆ. ಈ ವಿಚಾರ ಜನರಿಗೆ ತಿಳಿಯದಂತೆ ಪೊಲೀಸರು ಠಾಣೆಯ ಮೇಲೆ ಶಾಮಿಯಾನ ಹಾಕಲಾಗಿದೆ ಎನ್ನುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ. ಮೇಲಾಗಿ ಆರೋಪಿಗಳ ಬಂಧನದ ನಂತರ ಪೊಲೀಸ್ ಠಾಣೆಗೆ ಶಾಮಿಯಾನ ಹಾಕಿರುವುದು ಇತಿಹಾಸದಲ್ಲಿ ಇದೇ ಮೊದಲು ಎನ್ನಲಾಗಿದೆ.

ಇಲ್ಲಿದೆ ನೋಡಿ ಅಸಲಿ ಕಾರಣ
ಆದರೆ ಶಾಮಿಯಾನ್ ಅನ್ನು ನಟ ದರ್ಶನ್ ಗಾಗಿ ಹಾಕಲಾಗಿತ್ತು ಎಂಬ ಸತ್ಯ ಬಯಲಾಗಿದೆ. ದರ್ಶನ್ ಪೊಲೀಸರಿಗೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಪೊಲೀಸರು ಈ ರೀತಿ ಮಾಡಿದ್ದಾರೆ ಎಂದು ಗೊತ್ತಾಗಿದೆ. ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ನಟ ದರ್ಶನ್, ಸರ್ ನನಗೆ ಒಂದೇ ಕಡೆ ಕುಳಿತುಕೊಳ್ಳಲು ಆಗುವುದಿಲ್ಲ. ನಾನು ವಾಕ್ ಮಾಡಬೇಕು. ನನ್ನ ಕೈಲಿ ಆಗುತ್ತಿಲ್ಲ ನನ್ನ ಬಾಡಿ ರಿಲ್ಯಾಕ್ಸ್ ಆಗಬೇಕು. ಸಿಗರೇಟ್ ಇಲ್ಲದಿದ್ದರೆ ನನ್ನ ಕೈ ನಡುಗುತ್ತದೆ. ನೀವು ಪದೇ ಪದೇ ಪ್ರಶ್ನೆ ಮಾಡುತ್ತಲೇ ಇದ್ದೀರಿ ಅಂತ ಹೇಳಿದ್ದಾರೆ. ಹೀಗಾಗಿ ಠಾಣೆಯ ಆವರಣದಲ್ಲಿ ದರ್ಶನ್ ತಿರುಗಾಡಲು ಸೈಡ್ ವಾಲ್ ಹಾಕಲಾಗಿದೆ ಎನ್ನುವ ಬಗ್ಗೆ ಮಾಹಿತಿ ತಿಳಿದುಬಂದಿದೆ.

Join Nadunudi News WhatsApp Group

Darshan Case Latest Update
Image Credit: Moviekoop

Join Nadunudi News WhatsApp Group