PM Kisan: ಇಂತಹ ರೈತರ ಖಾತೆಗೆ ಜಮಾ ಆಗಲ್ಲ ಕಿಸಾನ್ 15 ನೇ ಕಂತಿನ ಹಣ, ರಾತ್ರೋರಾತ್ರಿ ಕೇಂದ್ರದ ಘೋಷಣೆ.
ಈ ರೈತರ ಖಾತೆಗೆ ಕಿಸಾನ್ ಸಮ್ಮಾನ್ ಯೋಜನೆಯ 15 ನೇ ಕಂಟಿನ್ಯೂ ಹಣ ಜಮಾ ಆಗಲ್ಲ.
Pradhan Mantri Kisan Yojana New Update: ರೈತ ದೇಶದ ಬೆನ್ನೆಲುಬು ಎನ್ನುವುದು ಎಲ್ಲರಿಗು ತಿಳಿದೇ ಇದೆ. ಇನ್ನು ದೇಶದ ರೈತರಿಗೆ ಸಹಾಯ ಮಾಡಲು ಭಾರತ ಸರ್ಕಾರ ವಿವಿಧ ಯೋಜನೆಯನ್ನು ಪರಿಚಯಿಸುತ್ತಿದೆ. ಮೋದಿ ಸರ್ಕಾರ ರೈತರಿಗಾಗಿ ಪರಿಚಯಿಸಿರುವ Pradhan Mantri Kisan Yojana ಇನ್ನಿತರ ಯೋಜನೆಗಳಿಂದ ವಿಶೇಷವಾಗಿದೆ. ಮೋದಿ ಸರ್ಕಾರದ PM Kisan ಯೋಜನೆಯು ದೇಶದ ರೈತರಿಗೆ ಆರ್ಥಿಕ ಸ್ಥಿರತೆಯನ್ನು ನೀಡುತ್ತಿದೆ ಎನ್ನಬಹುದು.
ದೇಶದ ಪ್ರತಿ ರೈತರು ಕೂಡ PM Kisan Yojana ಲಾಭವನ್ನು ಪಡೆಯಬೇಕಿದೆ. ಪ್ರಸ್ತುತ ದೇಶದಲ್ಲಿ ಲಕ್ಷಾಂತರ ರೈತರು PM Kisan ಯೋಜನೆಯಡಿಯಲ್ಲಿ ಹಣವನ್ನು ಪಡೆಯುತ್ತಿದ್ದಾರೆ. ಇದೀಗ ಮೋದಿ ಸರ್ಕಾರದ ಈ ಯೋಜನೆಯ ಬಗ್ಗೆ ಬಿಗ್ ಅಪ್ಡೇಟ್ ಲಭಿಸಿದೆ. ಸದ್ಯ PM Kisan ಯೋಜನೆಯ 15 ಕಂತಿನ ಹಣದ ನಿರೀಕ್ಷೆಯಲ್ಲಿದ್ದವರಿಗೆ ಮಹತ್ವದ ಮಾಹಿತಿಯೊಂದು ಹೊರಬಿದ್ದಿದೆ. ನೀವು PM Kisan ಯೋಜನೆಯ ಫಲಾನುಭವಿಗಳಾಗಿದ್ದರೆ ಈ ಮಾಹಿತಿಯ ಬಗ್ಗೆ ತಿಳಿದುಕೊಳ್ಳುವುದು ಸೂಕ್ತ.
Pradhan Mantri Kisan Yojana
Pradhan Mantri Kisan ಯೋಜನೆಯಡಿ ಮೋದಿ ಸರ್ಕಾರ ರೈತರಿಗೆ ರೂ. 6 ಸಾವಿರ ಉಚಿತವಾಗಿ ಹಣ ನೀಡುತ್ತದೆ. ಆದರೆ ಈ ಹಣ ಒಂದೇ ಬಾರಿ ಬರುವುದಿಲ್ಲ ಬದಲಾಗಿ ಕಂತುಗಳಲ್ಲಿ ಬರುತ್ತದೆ. ನಾಲ್ಕು ತಿಂಗಳಿಗೊಮ್ಮೆ ವರ್ಷಕ್ಕೆ ಮೂರು ಬಾರಿ 2 ಸಾವಿರ ರೂಪಾಯಿಯಂತೆ 6 ಸಾವಿರ ದೊರೆಯಲಿದೆ. PM Kisan pmkisan.gov.in ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡುವ ಮೂಲಕ ಯೋಜನೆಗೆ ನೋಂದಾಯಿಸಿಕೊಳ್ಳಬಹುದು.
PM Kisan ಯೋಜನೆಯ ಫಲಾನುಭವಿಗಳಿಗೆ ಮಹತ್ವದ ಮಾಹಿತಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ ಯೋಜನೆಯಡಿ 14 ನೇ ಕಂತಿನ ಪಾವತಿಯನ್ನು ಫಲಾನುಭವಿ ರೈತರ ಖಾತೆಗಳಿಗೆ ಕೇಂದ್ರ ಸರ್ಕಾರ ವರ್ಗಾವಣೆ ಮಾಡಿದೆ. ಇದೀಗ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ ರೈತರು 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದಾರೆ. ಇದೀಗ 15 ನೇ ಕಂತಿನ ಹಣ ಪಡೆಯುವ ನಿರೀಕ್ಷೆಯಲ್ಲಿದ್ದ ಫಲಾನುಭವಿಗಳಿಗೆ ಸರ್ಕಾರ ಮಹತ್ವದ ಮಾಹಿತಿಯನ್ನು ನೀಡಿದೆ.
ಇಂತಹ ರೈತರಿಗೆ ಜಮಾ ಆಗಲ್ಲ 15 ನೇ ಕಂತಿನ ಹಣ
*PM Kisan ಯೋಜನೆಯಡಿ 15 ನೇ ಕಂತಿನ ಹಣ ಪಡೆಯಲು ನೀವು ಮುಖ್ಯವಾಗಿ Bank Details ಅನ್ನು ನೀಡಬೇಕಿದೆ. ನೀವು ಅರಿ ನಮೂನೆಯಲ್ಲಿ ಬ್ಯಾಂಕ್ ನ ವಿವರವನ್ನು ತಪ್ಪಾಗಿ ನೀಡಿದರೆ ನಿಮ್ಮ ಖಾತೆಗೆ 15 ನೇ ಕಂತಿನ ಹಣ ಜಮಾ ಆಗುವುದಿಲ್ಲ. ಹೀಗಾಗಿ ಒಮ್ಮೆ ನೀವು ನೀಡಿದ ಬ್ಯಾಂಕಿಂಗ್ ವಿವರದ ಬಗ್ಗೆ ಪರಿಶೀಲಿಸಿಕೊಳ್ಳುವುದು ಉತ್ತಮ.
*ಇನ್ನು ರೈತರಿಗೆ ಇ-ಕೆವೈಸಿ ಮಾಡಿಸಿಕೊಳ್ಳುವಂತೆ ಈಗಾಗಲೇ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದೆ. ರೈತರು ತಮ್ಮ ಆಧಾರ್ ಕಾರ್ಡ್, ಆಧಾರ್ ಜೋಡಣೆಯಾಗಿರುವ ಮೊಬೈಲ್ ನಂಬರ್ ದಾಖಲೆಯೊಂದಿಗೆ ಇ-ಕೆವೈಸಿ ಮಾಡಿಸಿಕೊಳ್ಳಬೇಕಿದೆ.
*ಇನ್ನು 2023 ರ ಬಾಕಿ ಉಳಿಸಿಕೊಂಡಿರುವ 15 ನೇ ಕಂತಿನ ಸಹಾಯಧನ ಶೀಘ್ರದಲ್ಲೇ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈ ಕಾರಣದಿಂದ ಇನ್ನು ಕೂಡ ಪಿಎಂ ಕಿಸಾನ್ ಯೋಜನೆಗೆ E-KYC Update ಮಾಡಿಸದೇ ಇರುವ ರೈತರು ಇ-ಕೆವೈಸಿ ಅಪ್ಡೇಟ್ ಹಾಗೂ ಬ್ಯಾಂಕ್ ವಿವರವನ್ನು ಸರಿಪಡಿಸಿಕೊಳ್ಳುವುದು ಸೂಕ್ತ ಎನ್ನಬಹುದು.